AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ
BBK
ರಾಜೇಶ್ ದುಗ್ಗುಮನೆ
|

Updated on:Oct 18, 2024 | 10:20 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸೆಪ್ಟೆಂಬರ್ 17 ಎಪಿಸೋಡ್​ನಲ್ಲಿ ಸ್ಪರ್ಧಿಗಳ ಬಾಯಿಂದ ಕೆಟ್ಟ ಶಬ್ದಗಳು ಸುಲಲಿತವಾಗಿ ಬಂದಿವೆ. ಬಿಗ್ ಬಾಸ್ ಕೂಗುತ್ತಿದ್ದರೂ ಎಲ್ಲರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಇದರಿಂದ ಸ್ವತಃ ಬಿಗ್ ಬಾಸ್ ಟೆಂಪರ್ ಕಳೆದುಕೊಳ್ಳುವಂತೆ ಆಗಿದೆ. ಸದ್ಯ ಬಿಗ್ ಬಾಸ್ ವಾತಾವರಣ ಹದಗೆಟ್ಟಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರೋ ಸಾಧ್ಯತೆ ಇತ್ತು. ಹೀಗಾಗಿ, ಇಬ್ಬರನ್ನು ಬಿಗ್ ಬಾಸ್ ಹೊರಕ್ಕೆ ಕಳುಹಿಸಿದ್ದಾರೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು. ಜಗದೀಶ್ ಅವರು ಬಳಸಿದ ಅವಾಚ್ಯ ಶಬ್ದದಿಂದ ಎಲ್ಲರೂ ಅವರ ವಿರುದ್ಧ ಸಿಡಿದೆದ್ದರು.

‘ನನ್ನ ಗಂಡನ ಸಾಯಿಸೋಕೆ ಅವರು ಯಾರು? ಇದಕ್ಕೆ ನೀವೇ ಏನಾದರೂ ಮಾಡ್ತೀರಾ ಅಥವಾ ನಾವೇ ಪರಿಹಾರ ಕಂಡುಕೊಳ್ಳಬೇಕಾ’ ಎಂದು ಹಂಸಾ ಅವರು ಬಿಗ್ ಬಾಸ್ ಕ್ಯಾಮರಾ ಎದುರು ಬಂದು ಅವಾಜ್ ಹಾಕಿದರು. ಆ ಬಳಿಕ ಬಿಗ್ ಬಾಸ್​ ಎಲ್ಲರ ಬಳಿ ಸೋಫಾ ಮೇಲೆ ಕೂರುವಂತೆ ಹೇಳಿದರು. ಆದರೆ, ಮನೆಯ ವಾತಾವರಣ ಹದಗೆಡುತ್ತಲೇ ಹೋಯಿತು. ಬಿಗ್ ಬಾಸ್ ಆದೇಶದ ಮಧ್ಯೆಯೂ ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿದರು.

ರಂಜಿತ್ ಅವರಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದರು ಜಗದೀಶ್. ರಂಜಿತ್ ಕೂಡ ಕೋಪದಿಂದ ಕೂಗಾಡಿದರು. ಇಡೀ ಎಪಿಸೋಡ್ ತುಂಬಾ ಬೈಗುಳಗಳೇ ಇದ್ದಿದ್ದರಿಂದ ಬಿಗ್ ಬಾಸ್​ಗೆ ಬೀಪ್ ಹಾಕಿ ಹಾಕಿ ಸಾಕಾಯಿತು. ವೀಕ್ಷಕರಿಗೆ ಇದು ಅಸಹ್ಯ ಹುಟ್ಟಿಸಿತು.

ಇದನ್ನೂ ಓದಿ: ‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು

ಮಹಿಳೆಯರಿಗೆ ಅವಮಾನ ಮಾಡಿದ ಪ್ರಕರಣದಲ್ಲಿ ಜಗದೀಶ್ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಇನ್ನು, ರಂಜಿತ್ ಅವರು ಜಗದೀಶ್​ನ ತಳ್ಳಿದ ಆರೋಪ ಹೊಂದಿದ್ದು, ಅವರು ಕೂಡ ಎಲಿಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 18 October 24

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್