AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ
BBK
ರಾಜೇಶ್ ದುಗ್ಗುಮನೆ
|

Updated on:Oct 18, 2024 | 10:20 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸೆಪ್ಟೆಂಬರ್ 17 ಎಪಿಸೋಡ್​ನಲ್ಲಿ ಸ್ಪರ್ಧಿಗಳ ಬಾಯಿಂದ ಕೆಟ್ಟ ಶಬ್ದಗಳು ಸುಲಲಿತವಾಗಿ ಬಂದಿವೆ. ಬಿಗ್ ಬಾಸ್ ಕೂಗುತ್ತಿದ್ದರೂ ಎಲ್ಲರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಇದರಿಂದ ಸ್ವತಃ ಬಿಗ್ ಬಾಸ್ ಟೆಂಪರ್ ಕಳೆದುಕೊಳ್ಳುವಂತೆ ಆಗಿದೆ. ಸದ್ಯ ಬಿಗ್ ಬಾಸ್ ವಾತಾವರಣ ಹದಗೆಟ್ಟಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರೋ ಸಾಧ್ಯತೆ ಇತ್ತು. ಹೀಗಾಗಿ, ಇಬ್ಬರನ್ನು ಬಿಗ್ ಬಾಸ್ ಹೊರಕ್ಕೆ ಕಳುಹಿಸಿದ್ದಾರೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು. ಜಗದೀಶ್ ಅವರು ಬಳಸಿದ ಅವಾಚ್ಯ ಶಬ್ದದಿಂದ ಎಲ್ಲರೂ ಅವರ ವಿರುದ್ಧ ಸಿಡಿದೆದ್ದರು.

‘ನನ್ನ ಗಂಡನ ಸಾಯಿಸೋಕೆ ಅವರು ಯಾರು? ಇದಕ್ಕೆ ನೀವೇ ಏನಾದರೂ ಮಾಡ್ತೀರಾ ಅಥವಾ ನಾವೇ ಪರಿಹಾರ ಕಂಡುಕೊಳ್ಳಬೇಕಾ’ ಎಂದು ಹಂಸಾ ಅವರು ಬಿಗ್ ಬಾಸ್ ಕ್ಯಾಮರಾ ಎದುರು ಬಂದು ಅವಾಜ್ ಹಾಕಿದರು. ಆ ಬಳಿಕ ಬಿಗ್ ಬಾಸ್​ ಎಲ್ಲರ ಬಳಿ ಸೋಫಾ ಮೇಲೆ ಕೂರುವಂತೆ ಹೇಳಿದರು. ಆದರೆ, ಮನೆಯ ವಾತಾವರಣ ಹದಗೆಡುತ್ತಲೇ ಹೋಯಿತು. ಬಿಗ್ ಬಾಸ್ ಆದೇಶದ ಮಧ್ಯೆಯೂ ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿದರು.

ರಂಜಿತ್ ಅವರಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದರು ಜಗದೀಶ್. ರಂಜಿತ್ ಕೂಡ ಕೋಪದಿಂದ ಕೂಗಾಡಿದರು. ಇಡೀ ಎಪಿಸೋಡ್ ತುಂಬಾ ಬೈಗುಳಗಳೇ ಇದ್ದಿದ್ದರಿಂದ ಬಿಗ್ ಬಾಸ್​ಗೆ ಬೀಪ್ ಹಾಕಿ ಹಾಕಿ ಸಾಕಾಯಿತು. ವೀಕ್ಷಕರಿಗೆ ಇದು ಅಸಹ್ಯ ಹುಟ್ಟಿಸಿತು.

ಇದನ್ನೂ ಓದಿ: ‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು

ಮಹಿಳೆಯರಿಗೆ ಅವಮಾನ ಮಾಡಿದ ಪ್ರಕರಣದಲ್ಲಿ ಜಗದೀಶ್ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಇನ್ನು, ರಂಜಿತ್ ಅವರು ಜಗದೀಶ್​ನ ತಳ್ಳಿದ ಆರೋಪ ಹೊಂದಿದ್ದು, ಅವರು ಕೂಡ ಎಲಿಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 18 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​