ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ
BBK
Follow us
|

Updated on:Oct 18, 2024 | 10:20 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸೆಪ್ಟೆಂಬರ್ 17 ಎಪಿಸೋಡ್​ನಲ್ಲಿ ಸ್ಪರ್ಧಿಗಳ ಬಾಯಿಂದ ಕೆಟ್ಟ ಶಬ್ದಗಳು ಸುಲಲಿತವಾಗಿ ಬಂದಿವೆ. ಬಿಗ್ ಬಾಸ್ ಕೂಗುತ್ತಿದ್ದರೂ ಎಲ್ಲರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಇದರಿಂದ ಸ್ವತಃ ಬಿಗ್ ಬಾಸ್ ಟೆಂಪರ್ ಕಳೆದುಕೊಳ್ಳುವಂತೆ ಆಗಿದೆ. ಸದ್ಯ ಬಿಗ್ ಬಾಸ್ ವಾತಾವರಣ ಹದಗೆಟ್ಟಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರೋ ಸಾಧ್ಯತೆ ಇತ್ತು. ಹೀಗಾಗಿ, ಇಬ್ಬರನ್ನು ಬಿಗ್ ಬಾಸ್ ಹೊರಕ್ಕೆ ಕಳುಹಿಸಿದ್ದಾರೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು. ಜಗದೀಶ್ ಅವರು ಬಳಸಿದ ಅವಾಚ್ಯ ಶಬ್ದದಿಂದ ಎಲ್ಲರೂ ಅವರ ವಿರುದ್ಧ ಸಿಡಿದೆದ್ದರು.

‘ನನ್ನ ಗಂಡನ ಸಾಯಿಸೋಕೆ ಅವರು ಯಾರು? ಇದಕ್ಕೆ ನೀವೇ ಏನಾದರೂ ಮಾಡ್ತೀರಾ ಅಥವಾ ನಾವೇ ಪರಿಹಾರ ಕಂಡುಕೊಳ್ಳಬೇಕಾ’ ಎಂದು ಹಂಸಾ ಅವರು ಬಿಗ್ ಬಾಸ್ ಕ್ಯಾಮರಾ ಎದುರು ಬಂದು ಅವಾಜ್ ಹಾಕಿದರು. ಆ ಬಳಿಕ ಬಿಗ್ ಬಾಸ್​ ಎಲ್ಲರ ಬಳಿ ಸೋಫಾ ಮೇಲೆ ಕೂರುವಂತೆ ಹೇಳಿದರು. ಆದರೆ, ಮನೆಯ ವಾತಾವರಣ ಹದಗೆಡುತ್ತಲೇ ಹೋಯಿತು. ಬಿಗ್ ಬಾಸ್ ಆದೇಶದ ಮಧ್ಯೆಯೂ ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿದರು.

ರಂಜಿತ್ ಅವರಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದರು ಜಗದೀಶ್. ರಂಜಿತ್ ಕೂಡ ಕೋಪದಿಂದ ಕೂಗಾಡಿದರು. ಇಡೀ ಎಪಿಸೋಡ್ ತುಂಬಾ ಬೈಗುಳಗಳೇ ಇದ್ದಿದ್ದರಿಂದ ಬಿಗ್ ಬಾಸ್​ಗೆ ಬೀಪ್ ಹಾಕಿ ಹಾಕಿ ಸಾಕಾಯಿತು. ವೀಕ್ಷಕರಿಗೆ ಇದು ಅಸಹ್ಯ ಹುಟ್ಟಿಸಿತು.

ಇದನ್ನೂ ಓದಿ: ‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು

ಮಹಿಳೆಯರಿಗೆ ಅವಮಾನ ಮಾಡಿದ ಪ್ರಕರಣದಲ್ಲಿ ಜಗದೀಶ್ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಇನ್ನು, ರಂಜಿತ್ ಅವರು ಜಗದೀಶ್​ನ ತಳ್ಳಿದ ಆರೋಪ ಹೊಂದಿದ್ದು, ಅವರು ಕೂಡ ಎಲಿಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 18 October 24

ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ