AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ
BBK
ರಾಜೇಶ್ ದುಗ್ಗುಮನೆ
|

Updated on:Oct 18, 2024 | 10:20 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸೆಪ್ಟೆಂಬರ್ 17 ಎಪಿಸೋಡ್​ನಲ್ಲಿ ಸ್ಪರ್ಧಿಗಳ ಬಾಯಿಂದ ಕೆಟ್ಟ ಶಬ್ದಗಳು ಸುಲಲಿತವಾಗಿ ಬಂದಿವೆ. ಬಿಗ್ ಬಾಸ್ ಕೂಗುತ್ತಿದ್ದರೂ ಎಲ್ಲರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಇದರಿಂದ ಸ್ವತಃ ಬಿಗ್ ಬಾಸ್ ಟೆಂಪರ್ ಕಳೆದುಕೊಳ್ಳುವಂತೆ ಆಗಿದೆ. ಸದ್ಯ ಬಿಗ್ ಬಾಸ್ ವಾತಾವರಣ ಹದಗೆಟ್ಟಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರೋ ಸಾಧ್ಯತೆ ಇತ್ತು. ಹೀಗಾಗಿ, ಇಬ್ಬರನ್ನು ಬಿಗ್ ಬಾಸ್ ಹೊರಕ್ಕೆ ಕಳುಹಿಸಿದ್ದಾರೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು. ಜಗದೀಶ್ ಅವರು ಬಳಸಿದ ಅವಾಚ್ಯ ಶಬ್ದದಿಂದ ಎಲ್ಲರೂ ಅವರ ವಿರುದ್ಧ ಸಿಡಿದೆದ್ದರು.

‘ನನ್ನ ಗಂಡನ ಸಾಯಿಸೋಕೆ ಅವರು ಯಾರು? ಇದಕ್ಕೆ ನೀವೇ ಏನಾದರೂ ಮಾಡ್ತೀರಾ ಅಥವಾ ನಾವೇ ಪರಿಹಾರ ಕಂಡುಕೊಳ್ಳಬೇಕಾ’ ಎಂದು ಹಂಸಾ ಅವರು ಬಿಗ್ ಬಾಸ್ ಕ್ಯಾಮರಾ ಎದುರು ಬಂದು ಅವಾಜ್ ಹಾಕಿದರು. ಆ ಬಳಿಕ ಬಿಗ್ ಬಾಸ್​ ಎಲ್ಲರ ಬಳಿ ಸೋಫಾ ಮೇಲೆ ಕೂರುವಂತೆ ಹೇಳಿದರು. ಆದರೆ, ಮನೆಯ ವಾತಾವರಣ ಹದಗೆಡುತ್ತಲೇ ಹೋಯಿತು. ಬಿಗ್ ಬಾಸ್ ಆದೇಶದ ಮಧ್ಯೆಯೂ ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿದರು.

ರಂಜಿತ್ ಅವರಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದರು ಜಗದೀಶ್. ರಂಜಿತ್ ಕೂಡ ಕೋಪದಿಂದ ಕೂಗಾಡಿದರು. ಇಡೀ ಎಪಿಸೋಡ್ ತುಂಬಾ ಬೈಗುಳಗಳೇ ಇದ್ದಿದ್ದರಿಂದ ಬಿಗ್ ಬಾಸ್​ಗೆ ಬೀಪ್ ಹಾಕಿ ಹಾಕಿ ಸಾಕಾಯಿತು. ವೀಕ್ಷಕರಿಗೆ ಇದು ಅಸಹ್ಯ ಹುಟ್ಟಿಸಿತು.

ಇದನ್ನೂ ಓದಿ: ‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು

ಮಹಿಳೆಯರಿಗೆ ಅವಮಾನ ಮಾಡಿದ ಪ್ರಕರಣದಲ್ಲಿ ಜಗದೀಶ್ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಇನ್ನು, ರಂಜಿತ್ ಅವರು ಜಗದೀಶ್​ನ ತಳ್ಳಿದ ಆರೋಪ ಹೊಂದಿದ್ದು, ಅವರು ಕೂಡ ಎಲಿಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 18 October 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್