AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು.

ಬಿಗ್ ಬಾಸ್ ಮನೆಯಲ್ಲಿ ಕೇಳಿದ್ದು ಕೇವಲ ಬೀಪ್.. ಬೀಪ್.. ಬೀಪ್..​; ವೀಕ್ಷಕರಿಗೆ ಹುಟ್ಟಿತು ಅಸಹ್ಯ
BBK
Follow us
ರಾಜೇಶ್ ದುಗ್ಗುಮನೆ
|

Updated on:Oct 18, 2024 | 10:20 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸೆಪ್ಟೆಂಬರ್ 17 ಎಪಿಸೋಡ್​ನಲ್ಲಿ ಸ್ಪರ್ಧಿಗಳ ಬಾಯಿಂದ ಕೆಟ್ಟ ಶಬ್ದಗಳು ಸುಲಲಿತವಾಗಿ ಬಂದಿವೆ. ಬಿಗ್ ಬಾಸ್ ಕೂಗುತ್ತಿದ್ದರೂ ಎಲ್ಲರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಇದರಿಂದ ಸ್ವತಃ ಬಿಗ್ ಬಾಸ್ ಟೆಂಪರ್ ಕಳೆದುಕೊಳ್ಳುವಂತೆ ಆಗಿದೆ. ಸದ್ಯ ಬಿಗ್ ಬಾಸ್ ವಾತಾವರಣ ಹದಗೆಟ್ಟಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈಮೀರೋ ಸಾಧ್ಯತೆ ಇತ್ತು. ಹೀಗಾಗಿ, ಇಬ್ಬರನ್ನು ಬಿಗ್ ಬಾಸ್ ಹೊರಕ್ಕೆ ಕಳುಹಿಸಿದ್ದಾರೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಹಾಗೂ ಉಳಿದ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಜಗದೀಶ್ ಅವರು. ಹಂಸಾ ವಿರುದ್ಧ ಅವರು ಬಳಕೆ ಮಾಡಿದ ಶಬ್ದ ಎಲ್ಲರ ಕೋಪಕ್ಕೆ ಕಾರಣ ಆಗಿದೆ. ಇದು ಇಡೀ ಮನೆ ಹೊತ್ತು ಉರಿಯಲು ಕಾರಣವಾಯಿತು. ಜಗದೀಶ್ ಅವರು ಬಳಸಿದ ಅವಾಚ್ಯ ಶಬ್ದದಿಂದ ಎಲ್ಲರೂ ಅವರ ವಿರುದ್ಧ ಸಿಡಿದೆದ್ದರು.

‘ನನ್ನ ಗಂಡನ ಸಾಯಿಸೋಕೆ ಅವರು ಯಾರು? ಇದಕ್ಕೆ ನೀವೇ ಏನಾದರೂ ಮಾಡ್ತೀರಾ ಅಥವಾ ನಾವೇ ಪರಿಹಾರ ಕಂಡುಕೊಳ್ಳಬೇಕಾ’ ಎಂದು ಹಂಸಾ ಅವರು ಬಿಗ್ ಬಾಸ್ ಕ್ಯಾಮರಾ ಎದುರು ಬಂದು ಅವಾಜ್ ಹಾಕಿದರು. ಆ ಬಳಿಕ ಬಿಗ್ ಬಾಸ್​ ಎಲ್ಲರ ಬಳಿ ಸೋಫಾ ಮೇಲೆ ಕೂರುವಂತೆ ಹೇಳಿದರು. ಆದರೆ, ಮನೆಯ ವಾತಾವರಣ ಹದಗೆಡುತ್ತಲೇ ಹೋಯಿತು. ಬಿಗ್ ಬಾಸ್ ಆದೇಶದ ಮಧ್ಯೆಯೂ ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿದರು.

ರಂಜಿತ್ ಅವರಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದರು ಜಗದೀಶ್. ರಂಜಿತ್ ಕೂಡ ಕೋಪದಿಂದ ಕೂಗಾಡಿದರು. ಇಡೀ ಎಪಿಸೋಡ್ ತುಂಬಾ ಬೈಗುಳಗಳೇ ಇದ್ದಿದ್ದರಿಂದ ಬಿಗ್ ಬಾಸ್​ಗೆ ಬೀಪ್ ಹಾಕಿ ಹಾಕಿ ಸಾಕಾಯಿತು. ವೀಕ್ಷಕರಿಗೆ ಇದು ಅಸಹ್ಯ ಹುಟ್ಟಿಸಿತು.

ಇದನ್ನೂ ಓದಿ: ‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು

ಮಹಿಳೆಯರಿಗೆ ಅವಮಾನ ಮಾಡಿದ ಪ್ರಕರಣದಲ್ಲಿ ಜಗದೀಶ್ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಇನ್ನು, ರಂಜಿತ್ ಅವರು ಜಗದೀಶ್​ನ ತಳ್ಳಿದ ಆರೋಪ ಹೊಂದಿದ್ದು, ಅವರು ಕೂಡ ಎಲಿಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 18 October 24

Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್