ಕಾನೂನು ಮಾತಾಡುವ ಜಗದೀಶ್​ ಕೈಯಿಂದಲೇ ಆಯ್ತು ರೂಲ್ಸ್​ ಬ್ರೇಕ್; ಕಾದಿದೆ ಶಿಕ್ಷೆ

|

Updated on: Sep 30, 2024 | 8:49 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಅಖಾಡದಲ್ಲಿ ಲಾಯರ್​ ಜಗದೀಶ್​ ಇದ್ದಾರೆ. ಹೊರ ಜಗತ್ತಿನಲ್ಲಿ ಅವರು ಯಾವಾಗಲೂ ಕಾನೂನಿನ ಬಗ್ಗೆ ಮಾತನಾಡುತ್ತಾರೆ. ಆದರೆ ಬಿಗ್​ ಬಾಸ್​ ಮನೆಯೊಳಗೆ ಅವರೇ ರೂಲ್ಸ್​ ಬ್ರೇಕ್​ ಮಾಡಿದ್ದಾರೆ. ಜಗದೀಶ್​ ಮಾಡಿದ ತಪ್ಪಿನಿಂದಾಗಿ ಇನ್ನುಳಿದ ಸ್ಪರ್ಧಿಗಳಿಗೆ ಕೋಪ ಬಂದಿದೆ. ಯಾಕೆಂದರೆ, ಅಲ್ಲಿ ಒಬ್ಬರು ಮಾಡುವ ತಪ್ಪಿಗೆ ಎಲ್ಲರೂ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಕಾನೂನು ಮಾತಾಡುವ ಜಗದೀಶ್​ ಕೈಯಿಂದಲೇ ಆಯ್ತು ರೂಲ್ಸ್​ ಬ್ರೇಕ್; ಕಾದಿದೆ ಶಿಕ್ಷೆ
ಧರ್ಮ, ಜಗದೀಶ್, ಐಶ್ವರ್ಯಾ
Follow us on

ಸೋಶಿಯಲ್​ ಮೀಡಿಯಾದಲ್ಲಿ ಲಾಯರ್​ ಜಗದೀಶ್​ ಹಲವಾರು ವಿಡಿಯೋಗಳ ಮೂಲಕ ಫೇಮಸ್​ ಆಗಿದ್ದಾರೆ. ಕಾನೂನಿನ ಬಗ್ಗೆ ಅವರು ಯಾವಾಗಲೂ ಧ್ವನಿ ಎತ್ತುತ್ತಾರೆ. ಆದರೆ ಅವರು ಬಿಗ್ ಬಾಸ್​ ಮನೆಯ ಕಾನೂನು ಅರ್ಥ ಮಾಡಿಕೊಳ್ಳುವಲ್ಲಿ ಸೋತಿದ್ದಾರೆ. ಹಾಗಾಗಿ ಮೊದಲ ದಿನವೇ ಅವರು ಆಟದ ರೂಲ್ಸ್​ ಬ್ರೇಕ್​ ಮಾಡಿದ್ದು, ಇನ್ನುಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಹಾಗಾದ್ರೆ ಜಗದೀಶ್​ ಮಾಡಿದ ತಪ್ಪು ಏನು? ‘ಬಿಗ್ ಬಾಸ್​ ಕನ್ನಡ ಸೀನಸ್​ 11’ ಶೋನಲ್ಲಿ ಅವರ ಆಟ ಹೇಗೆ ಶುರುವಾಗಿದೆ? ಇಲ್ಲಿದೆ ಉತ್ತರ..

ದೊಡ್ಮನೆಯೊಳಗೆ ಎರಡು ಭಾಗ ಇದೆ. ಸ್ವರ್ಗದಲ್ಲಿ ಕೆಲವರು ಇದ್ದಾರೆ. ನರಕದಲ್ಲಿ ಇನ್ನುಳಿದವರು ಇದ್ದಾರೆ. ಮನೆಯ ಒಂದಷ್ಟು ಕೆಲಸವನ್ನು ನರಕವಾಸಿಗಳಿಂದ ಮಾಡಿಸಲಾಗುತ್ತಿದೆ. ಆ ಕೆಲಸವನ್ನು ಸ್ವರ್ಗವಾಸಿಗಳು ಮಾಡುವಂತಿಲ್ಲ. ಒಂದು ವೇಳೆ ಹಾಗೆ ಮಾಡಿದರೆ ಬಿಗ್​ ಬಾಸ್​ ಮನೆಯ ನಿಯಮವನ್ನು ಮುರಿದಂತೆ ಆಗುತ್ತದೆ. ಇಂಥ ಪ್ರಮಾದವನ್ನು ಲಾಯರ್​ ಜಗದೀಶ್​ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯನ್ನು ಕ್ಲೀನ್ ಮಾಡುವ ಕೆಲಸ ಚೈತ್ರಾ ಕುಂದಾಪುರ ಅವರಿಗೆ ನೀಡಲಾಗಿದೆ. ಆದರೆ ಅವರು ಸರಿಯಾಗಿ ಸ್ವಚ್ಛ ಮಾಡಿಲ್ಲ ಎಂಬ ಕಾರಣಕ್ಕೆ ಲಾಯರ್​ ಜಗದೀಶ್​ ಅವರು ಕ್ಲೀನ್​ ಮಾಡಿದ್ದಾರೆ. ಇದರಿಂದ ನಿಯಮದ ಉಲ್ಲಂಘನೆ ಆಗಿದೆ. ಈ ಬಗ್ಗೆ ಇನ್ನುಳಿದ ಸ್ಪರ್ಧಿಗಳು ಜಗದೀಶ್​ಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ತಾವು ಮಾಡಿದ್ದಕ್ಕೆ ಸಮರ್ಥನೆ ನೀಡಲು ಅವರು ಮುಂದಾಗಿದ್ದಾರೆ.

ಒಂದರ್ಥದಲ್ಲಿ ನೋಡಿದರೆ ಇದಕ್ಕೆ ಚೈತ್ರಾ ಕುಂದಾಪುರ ಅವರೇ ಮೂಲ ಕಾರಣ. ಅವರು ಸರಿಯಾಗಿ ಕ್ಲೀನ್​ ಮಾಡದೇ ಇರುವುದರಿಂದಲೇ ಈ ರೀತಿ ಗೊಂದಲ ಉಂಟಾಗಿದೆ. ಈ ಬಗ್ಗೆ ವೀಕೆಂಡ್​ನಲ್ಲಿ ಸುದೀಪ್​ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು. ಅದಕ್ಕೂ ಮುನ್ನ ಈ ವಿಚಾರಕ್ಕೆ ಬಿಗ್​ ಬಾಸ್​ ನಿಲುವು ಏನು ಎಂಬುದನ್ನು ಕೂಡ ತಿಳಿಯಬೇಕಿದೆ. ‘ಕಲರ್ಸ್ ಕನ್ನಡ’ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮ ಪ್ರಸಾರ ಆಗಲಿದೆ.

ಇದನ್ನೂ ಓದಿ: ಉಗ್ರಂ ಮಂಜು ಜೊತೆ ಚೈತ್ರಾ ಕುಂದಾಪುರ ಕಿರಿಕ್: ಬಿಗ್​ ಬಾಸ್ ಮೊದಲ ದಿನವೇ ರಂಪಾಟ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಸ್ಪರ್ಧಿಗಳು:
ಲಾಯರ್​ ಜಗದೀಶ್​, ಚೈತ್ರಾ ಕುಂದಾಪುರ, ಉಗ್ರಂ ಮಂಜು, ಅನುಷಾ ರೈ, ಧರ್ಮ ಕೀರ್ತಿರಾಜ್​, ತ್ರಿವಿಕ್ರಮ್​, ಶಿಶಿರ್​, ರಂಜಿತ್​, ಹಂಸಾ, ಮಾನಸಾ, ಗೋಲ್ಡ್ ಸುರೇಶ್​, ಗೌತಮಿ ಜಾಧವ್, ಧನರಾಜ್​, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಐಶ್ವರ್ಯಾ, ಮೋಕ್ಷಿತಾ ಅವರು ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.