ಬಿಗ್ ಬಾಸ್ ಎಕ್ಸ್​​ಪೋಸ್ ಮಾಡ್ತೀನಿ ಎಂದು ಹೋದವರ ಕಥೆ ಹೀಗಾಗಬಾರದಿತ್ತು..

‘ಬಿಗ್ ಬಾಸ್’ನ ಎಕ್ಸ್​ಪೋಸ್ ಮಾಡ್ತೀನಿ, ಬಿಗ್ ಬಾಸ್​ ಅನ್ನೇ ಕೊಂಡುಕೊಳ್ಳುತ್ತೇನೆ ಎಂದೆಲ್ಲ ಬಿಲ್ಡಪ್ ಕೊಟ್ಟಿದ್ದರು ಜಗದೀಶ್. ಮೊದಲ ವಾರ ಸುದೀಪ್ ಅವರಿಂದ ಜಗದೀಶ್​ಗೆ ಕಿವಿಮಾತು ಸಿಕ್ಕಿತ್ತು. ಈ ಕಿವಿಮಾತಿನಿಂದ ಅವರು ಬದಲಾದಂತೆ ಇದೆ.

ಬಿಗ್ ಬಾಸ್ ಎಕ್ಸ್​​ಪೋಸ್ ಮಾಡ್ತೀನಿ ಎಂದು ಹೋದವರ ಕಥೆ ಹೀಗಾಗಬಾರದಿತ್ತು..
ಜಗದೀಶ್​-ಸುದೀಪ್

Updated on: Oct 12, 2024 | 7:35 AM

‘ಬಿಗ್ ಬಾಸ್ ಕನ್ನಡ ಸಿಸನ್ 11’ರಲ್ಲಿ ಜಗದೀಶ್ ಅವರು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದ್ದರು. ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡ್ತೀನಿ ಎಂದು ಸವಾಲನ್ನು ಕೂಡ ಹಾಕಿದ್ದರು. ಆದರೆ, ಈಗ ಅವರು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ‘ಬಿಗ್ ಬಾಸ್’ ಬಗ್ಗೆ ಅವರು ತಮ್ಮ ಮನದಾಳದ ಮಾತನ್ನು ಹೇಳಿಕೊಂಡಿದ್ದಾರೆ. ‘ಬಿಗ್ ಬಾಸ್​ ಎಕ್ಸ್​ಪೋಸ್ ಮಾಡ್ತೀನಿ ಎಂದು ಹೋದವರಿಗೆ ಈ ರೀತಿ ಆಗಬಾರದಿತ್ತು’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಬಿಗ್ ಬಾಸ್’ನ ಎಕ್ಸ್​ಪೋಸ್ ಮಾಡ್ತೀನಿ, ಬಿಗ್ ಬಾಸ್​ ಅನ್ನೇ ಕೊಂಡುಕೊಳ್ಳುತ್ತೇನೆ ಎಂದೆಲ್ಲ ಬಿಲ್ಡಪ್ ಕೊಟ್ಟಿದ್ದರು ಜಗದೀಶ್. ಮೊದಲ ವಾರ ಸುದೀಪ್ ಅವರಿಂದ ಜಗದೀಶ್​ಗೆ ಕಿವಿಮಾತು ಸಿಕ್ಕಿತ್ತು. ಈ ಕಿವಿಮಾತಿನಿಂದ ಅವರು ಬದಲಾದಂತೆ ಇದೆ. ಎಲ್ಲರಿಗೂ ಕಿರಿಕಿರಿ ಮಾಡಿದ್ದನ್ನು ಅವರು ಮುಂದುವರಿಸಿದ್ದಾರೆ ನಿಜ. ಆದರೆ, ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಅವರು ಕೊಂಚ ಬದಲಾಗಿದ್ದಾರೆ. ಅವರ ಆಲೋಚನೆಗಳು ಕೂಡ ಬದಲಾಗಿವೆ.

ಈ ಬಗ್ಗೆ ಜಗದೀಶ್ ಅವರು ಕ್ಯಾಮೆರಾ ಮುಂದೆ ಹೇಳಿಕೊಂಡಿದ್ದಾರೆ. ‘ಬಿಗ್ ಬಾಸ್​ನ ನಾನು ಇಷ್ಟಪಡುತ್ತಿದ್ದೇನೆ. ಇದೊಂದು ಸ್ಕ್ರಿಪ್ಟೆಡ್​ ಶೋ ಎಂದುಕೊಂಡಿದ್ದೆ. ಅದು ಸುಳ್ಳಾಯಿತು. ಎಲ್ಲಾ ಸೆಟಪ್ ಇರುತ್ತದೆ ಎಂದುಕೊಂಡಿದ್ದೆ. ಅದು ಕೂಡ ಸುಳ್ಳಾಗಿದೆ. ಒಟ್ಟಾರೆ ಎಲ್ಲವೂ ಸುಳ್ಳಾಯಿತು’ ಎಂದು ಜಗದೀಶ್ ಅವರು ಕ್ಯಾಮೆರಾ ಎದುರು ಬಂದು ಹೇಳಿಕೊಂಡಿದ್ದಾರೆ.

ಜಗದೀಶ್ ಅವರು ಈ ಮೊದಲು ವಕೀಲರಾಗಿದ್ದರು. ಆದರೆ, ಈಗ ಅವರು ವಕೀಲ ವೃತ್ತಿ ನಡೆಸುವಂತಿಲ್ಲ ಎನ್ನುವ ಆದೇಶ ಬಂದಿದೆ. ಈ ಕಾರಣಕ್ಕೆ ಅವರನ್ನು ವಕೀಲರು ಎಂದು ಕರೆಯಬಾರದು ಎಂದು ಬೆಂಗಳೂರು ವಕೀಲರ ಸಂಘ ಕಲರ್ಸ್ ಕನ್ನಡಕ್ಕೆ ಮನವಿ ಮಾಡಿತ್ತು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು?

‘ಬಿಗ್ ಬಾಸ್ ಕನ್ನಡ ಸೀಸನ್​ 11’ರಲ್ಲಿ ಎರಡು ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಈ ವಾರ ಯಾವುದೇ ಎಲಿಮಿನೇಷನ್ ಪ್ರಕ್ರಿಯೆ ಇರೋದಿಲ್ಲ ಎಂದು ಹೇಳಲಾಗುತ್ತಿದೆ. ಭವ್ಯಾ ಗೌಡ, ಧನರಾಜ್, ಧರ್ಮ, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸ, ಜಗದೀಶ್, ಅನುಷಾ ರೈ ನಾಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us