ಬಿಗ್ ಬಾಸ್​ಗೆ ಈಗಷ್ಟೇ ಎಂಟ್ರಿ ಪಡೆದ ಲಾಯರ್​ ಜಗದೀಶ್​ನ ಹೊರಹಾಕಲು ನಡೆದಿದೆ ಚರ್ಚೆ

ವೃತ್ತಿಯಲ್ಲಿ ವಕೀಲರಾದ ಜಗದೀಶ್ ಹೆಸರು ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿ ಇತ್ತು. ಅದಕ್ಕೆ ಕಾರಣ ಆಗಿದ್ದು ಅವರು ದರ್ಶನ್ ಪರ ಧ್ವನಿ ಎತ್ತಿದ್ದು. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರನ್ನು ಸುಖಾಸುಮ್ಮನೆ ಸಿಕ್ಕಿಸಲಾಗಿದೆ ಎಂದು ಅವರು ಹೇಳಿದ್ದರು.

ಬಿಗ್ ಬಾಸ್​ಗೆ ಈಗಷ್ಟೇ ಎಂಟ್ರಿ ಪಡೆದ ಲಾಯರ್​ ಜಗದೀಶ್​ನ ಹೊರಹಾಕಲು ನಡೆದಿದೆ ಚರ್ಚೆ
ಜಗದೀಶ್
Follow us
|

Updated on:Sep 29, 2024 | 8:06 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ವಕೀಲ ಜಗದೀಶ್ ಅವರ ಎಂಟ್ರಿ ಆಗಿದೆ. ಅವರು ದೊಡ್ಮನೆಯಲ್ಲಿ ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ವಕೀಲರಾಗಿರೋ ಪ್ರಶಾಂತ್ ಸಂಭರ್ಗಿ ಅವರು ಬಿಗ್ ಬಾಸ್ ಮನೆಗೆ ತೆರಳಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಅದೇ ರೀತಿಯ ಹವಾನ ಜಗದೀಶ್ ಸೃಷ್ಟಿ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಮಧ್ಯೆ ಅವರ ವಿರುದ್ಧ ಅಪಸ್ವರ ಎದ್ದಿದೆ.

ವೃತ್ತಿಯಲ್ಲಿ ವಕೀಲರಾದ ಜಗದೀಶ್ ಹೆಸರು ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿ ಇತ್ತು. ಅದಕ್ಕೆ ಕಾರಣ ಆಗಿದ್ದು ಅವರು ದರ್ಶನ್ ಪರ ಧ್ವನಿ ಎತ್ತಿದ್ದು. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರನ್ನು ಸುಖಾಸುಮ್ಮನೆ ಸಿಕ್ಕಿಸಲಾಗಿದೆ ಎಂದು ಅವರು ಹೇಳಿದ್ದರು. ಜೊತೆಗೆ ದರ್ಶನ್ ಅವರನ್ನು ಹೊರಕ್ಕೆ ತರೋಕೆ ಪ್ರತಿಭಟನೆ ಮಾಡಬೇಕು ಎಂದು ಅವರ ಕರೆ ನೀಡಿದ್ದರು. ಇದಕ್ಕಾಗಿ ಹಣದ ಸಹಾಯ ಬೇಕು ಎಂದು ಕೂಡ ಕೇಳಿದ್ದರು. ಅವರು ನಡೆದುಕೊಂಡ ರೀತಿ ದರ್ಶನ್ ಫ್ಯಾನ್ಸ್​ಗೆ ಖುಷಿ ಮೂಡಿಸಿತ್ತು.

ನಂತರ ಅವರೇ ಪ್ರತಿಭಟನೆ ಏನೋ ಮಾಡಿದರು. ‘ಬಿರಿಯಾನಿ ಹಾಗೂ ಹಣ ನೀಡದೇ ಇದ್ದಿದ್ದಕ್ಕೆ ದರ್ಶನ್ ಫ್ಯಾನ್ಸ್ ಬಂದಿಲ್ಲ’ ಎಂದು ಹೇಳಿ ಸುದ್ದಿ ಆದರು. ಅವರು ಇಷ್ಟೆಲ್ಲ ಮಾಡಿದ್ದು ಪ್ರಚಾರಕ್ಕೆ ಅನ್ನೋದು ಗೊತ್ತಾಗಿದೆ. ಹೌದು, ಬಿಗ್ ಬಾಸ್ ಸೇರೋದಕ್ಕೂ ಮೊದಲು ಒಂದಷ್ಟು ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ’ ಸ್ಪರ್ಧಿಗಳ ಸಂಭಾವ್ಯ ಪಟ್ಟಿ; ಇದೆ ಕೆಲವು ಅಚ್ಚರಿಯ ಹೆಸರುಗಳು

ರೇಣುಕಾ ಸ್ವಾಮಿ ಕೊಲೆ ನಡೆದು ಮೂರು ತಿಂಗಳು ಕಳೆದಿವೆ. ಕೊಲೆ ನಡೆದ ಕೆಲವೇ ದಿನಗಳಲ್ಲಿ ದರ್ಶನ್ ಬಂಧನ ಕೂಡ ಆಗಿದೆ. ಆದರೆ, ಅಲ್ಲಿಯವರೆಗೆ ಜಗದೀಶ್ ಸೈಲೆಂಟ್ ಆಗಿಯೇ ಇದ್ದರು. ಅವರ ಹೆಸರು ಬಿಗ್ ಬಾಸ್​ಗೆ ಬರೋಕೆ ಫೈನಲ್ ಆಗುತ್ತಿದ್ದಂತೆ ಅವರು ಆ್ಯಕ್ಟೀವ್ ಆದರು ಎನ್ನಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ವಿರುದ್ಧ ಟ್ರೋಲ್​ಗಳು ಶುರುವಾಗಿವೆ. ‘ಆದಷ್ಟು ಬೇಗ ಹೊರಕ್ಕೆ ಬರ್ತೀರಿ ಬಿಡಿ’ ಎಂದು ಕೆಲವರು ಹೇಳಿದ್ದಾರೆ. ‘ನಮ್ಮ ಬಾಸ್ ಹೆಸರಲ್ಲಿ ಜನಪ್ರಿಯತೆ ಪಡೆದಿರಲ್ಲ’ ಎಂದು ದರ್ಶನ್ ಫ್ಯಾನ್ಸ್ ಛೀಮಾರಿ ಹಾಕಿದ್ದಾರೆ. ಅವರಿಗೆ ವೋಟ್ ಹಾಕದೆ ಹೊರಗೆ ಹಾಕಬೇಕು ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:04 am, Sun, 29 September 24

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ