AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಈಗಷ್ಟೇ ಎಂಟ್ರಿ ಪಡೆದ ಲಾಯರ್​ ಜಗದೀಶ್​ನ ಹೊರಹಾಕಲು ನಡೆದಿದೆ ಚರ್ಚೆ

ವೃತ್ತಿಯಲ್ಲಿ ವಕೀಲರಾದ ಜಗದೀಶ್ ಹೆಸರು ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿ ಇತ್ತು. ಅದಕ್ಕೆ ಕಾರಣ ಆಗಿದ್ದು ಅವರು ದರ್ಶನ್ ಪರ ಧ್ವನಿ ಎತ್ತಿದ್ದು. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರನ್ನು ಸುಖಾಸುಮ್ಮನೆ ಸಿಕ್ಕಿಸಲಾಗಿದೆ ಎಂದು ಅವರು ಹೇಳಿದ್ದರು.

ಬಿಗ್ ಬಾಸ್​ಗೆ ಈಗಷ್ಟೇ ಎಂಟ್ರಿ ಪಡೆದ ಲಾಯರ್​ ಜಗದೀಶ್​ನ ಹೊರಹಾಕಲು ನಡೆದಿದೆ ಚರ್ಚೆ
ಜಗದೀಶ್
ರಾಜೇಶ್ ದುಗ್ಗುಮನೆ
|

Updated on:Sep 29, 2024 | 8:06 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ವಕೀಲ ಜಗದೀಶ್ ಅವರ ಎಂಟ್ರಿ ಆಗಿದೆ. ಅವರು ದೊಡ್ಮನೆಯಲ್ಲಿ ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ವಕೀಲರಾಗಿರೋ ಪ್ರಶಾಂತ್ ಸಂಭರ್ಗಿ ಅವರು ಬಿಗ್ ಬಾಸ್ ಮನೆಗೆ ತೆರಳಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಅದೇ ರೀತಿಯ ಹವಾನ ಜಗದೀಶ್ ಸೃಷ್ಟಿ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಮಧ್ಯೆ ಅವರ ವಿರುದ್ಧ ಅಪಸ್ವರ ಎದ್ದಿದೆ.

ವೃತ್ತಿಯಲ್ಲಿ ವಕೀಲರಾದ ಜಗದೀಶ್ ಹೆಸರು ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿ ಇತ್ತು. ಅದಕ್ಕೆ ಕಾರಣ ಆಗಿದ್ದು ಅವರು ದರ್ಶನ್ ಪರ ಧ್ವನಿ ಎತ್ತಿದ್ದು. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರನ್ನು ಸುಖಾಸುಮ್ಮನೆ ಸಿಕ್ಕಿಸಲಾಗಿದೆ ಎಂದು ಅವರು ಹೇಳಿದ್ದರು. ಜೊತೆಗೆ ದರ್ಶನ್ ಅವರನ್ನು ಹೊರಕ್ಕೆ ತರೋಕೆ ಪ್ರತಿಭಟನೆ ಮಾಡಬೇಕು ಎಂದು ಅವರ ಕರೆ ನೀಡಿದ್ದರು. ಇದಕ್ಕಾಗಿ ಹಣದ ಸಹಾಯ ಬೇಕು ಎಂದು ಕೂಡ ಕೇಳಿದ್ದರು. ಅವರು ನಡೆದುಕೊಂಡ ರೀತಿ ದರ್ಶನ್ ಫ್ಯಾನ್ಸ್​ಗೆ ಖುಷಿ ಮೂಡಿಸಿತ್ತು.

ನಂತರ ಅವರೇ ಪ್ರತಿಭಟನೆ ಏನೋ ಮಾಡಿದರು. ‘ಬಿರಿಯಾನಿ ಹಾಗೂ ಹಣ ನೀಡದೇ ಇದ್ದಿದ್ದಕ್ಕೆ ದರ್ಶನ್ ಫ್ಯಾನ್ಸ್ ಬಂದಿಲ್ಲ’ ಎಂದು ಹೇಳಿ ಸುದ್ದಿ ಆದರು. ಅವರು ಇಷ್ಟೆಲ್ಲ ಮಾಡಿದ್ದು ಪ್ರಚಾರಕ್ಕೆ ಅನ್ನೋದು ಗೊತ್ತಾಗಿದೆ. ಹೌದು, ಬಿಗ್ ಬಾಸ್ ಸೇರೋದಕ್ಕೂ ಮೊದಲು ಒಂದಷ್ಟು ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ’ ಸ್ಪರ್ಧಿಗಳ ಸಂಭಾವ್ಯ ಪಟ್ಟಿ; ಇದೆ ಕೆಲವು ಅಚ್ಚರಿಯ ಹೆಸರುಗಳು

ರೇಣುಕಾ ಸ್ವಾಮಿ ಕೊಲೆ ನಡೆದು ಮೂರು ತಿಂಗಳು ಕಳೆದಿವೆ. ಕೊಲೆ ನಡೆದ ಕೆಲವೇ ದಿನಗಳಲ್ಲಿ ದರ್ಶನ್ ಬಂಧನ ಕೂಡ ಆಗಿದೆ. ಆದರೆ, ಅಲ್ಲಿಯವರೆಗೆ ಜಗದೀಶ್ ಸೈಲೆಂಟ್ ಆಗಿಯೇ ಇದ್ದರು. ಅವರ ಹೆಸರು ಬಿಗ್ ಬಾಸ್​ಗೆ ಬರೋಕೆ ಫೈನಲ್ ಆಗುತ್ತಿದ್ದಂತೆ ಅವರು ಆ್ಯಕ್ಟೀವ್ ಆದರು ಎನ್ನಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ವಿರುದ್ಧ ಟ್ರೋಲ್​ಗಳು ಶುರುವಾಗಿವೆ. ‘ಆದಷ್ಟು ಬೇಗ ಹೊರಕ್ಕೆ ಬರ್ತೀರಿ ಬಿಡಿ’ ಎಂದು ಕೆಲವರು ಹೇಳಿದ್ದಾರೆ. ‘ನಮ್ಮ ಬಾಸ್ ಹೆಸರಲ್ಲಿ ಜನಪ್ರಿಯತೆ ಪಡೆದಿರಲ್ಲ’ ಎಂದು ದರ್ಶನ್ ಫ್ಯಾನ್ಸ್ ಛೀಮಾರಿ ಹಾಕಿದ್ದಾರೆ. ಅವರಿಗೆ ವೋಟ್ ಹಾಕದೆ ಹೊರಗೆ ಹಾಕಬೇಕು ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:04 am, Sun, 29 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!