AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್​ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್​ಗೆ ಗುಡ್ ನ್ಯೂಸ್

ಈ ಆವೃತ್ತಿಯ ಕನ್ನಡ ಬಿಗ್ ಬಾಸ್ ಕಳೆದ ಸೀಸನ್​ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ಇದಕ್ಕೆ ಜಗದೀಶ್ ಅವರು ಕೂಡ ಕಾರಣ ಎನ್ನಬಹುದು. ಈಗ ಅವರು ಕಲರ್ಸ್​ನ ಶೋ ಒಂದಕ್ಕೆ ಬಂದಿದ್ದಾರೆ.

ಕಲರ್ಸ್​ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್​ಗೆ ಗುಡ್ ನ್ಯೂಸ್
ಜಗದೀಶ್
Follow us
ರಾಜೇಶ್ ದುಗ್ಗುಮನೆ
|

Updated on: Oct 24, 2024 | 9:58 AM

ಲಾಯರ್ ಜಗದೀಶ್ ಅವರು ಮಹಿಳೆಯರ ವಿರುದ್ಧ ನಿಂದನೀಯ ಶಬ್ದಗಳ ಬಳಕೆ ಮಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಈ ಕಾರಣದಿಂದಲೇ ಅವರನ್ನು ಬಿಗ್ ಬಾಸ್​ನಿಂದ ಎಲಿಮಿನೇಟ್ ಕೂಡ ಮಾಡಲಾಯಿತು. ಅವರನ್ನು ಮರಳಿ ಕರೆಸಬೇಕು ಎನ್ನುವ ಆಗ್ರಹ ಬಿಗ್ ಬಾಸ್​ನಲ್ಲಿ ಜೋರಾಗಿದೆ. ಹೀಗಿರುವಾಗಲೇ ಜಗದೀಶ್ ಅವರು ಕಲರ್ಸ್​ ಕನ್ನಡದ ಶೋಗೆ ಅತಿಥಿಯಾಗಿ ಬಂದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಜಗದೀಶ್ ಬಿಗ್ ಬಾಸ್​ನಲ್ಲಿ ಎಲ್ಲಾ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಿದ್ದರು. ಈ ಕಾರಣದಿಂದಲೇ 1 Vs 15 ಎಂಬ ವಾತಾವರಣ ಬಿಗ್ ಬಾಸ್ ಮನೆಯಲ್ಲಿ ಸೃಷ್ಟಿ ಆಗಿತ್ತು. ಅವರನ್ನು ಹೊರಕ್ಕೆ ಹಾಕಬೇಕು ಎಂದು ಅನೇಕರು ಪ್ರಯತ್ನಪಟ್ಟರು. ಅವರು ನಿಂದನೀಯ ಶಬ್ದಗಳ ಬಳಕೆ ಮಾಡಿ ಎಲಿಮಿನೇಟ್ ಆಗಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಈಗ ಅವರನ್ನು ಕರೆಸಬೇಕು ಎಂಬ ಕೂಗು ಜೋರಾಗಿದೆ. ಹೀಗಿರುವಾಗಲೇ ಅವರು ಕಲರ್ಸ್​ನ ‘ಸಚಿರುಚಿ ಸೀಸನ್ 3’ ಶೋಗೆ ಶೆಫ್ ಆಗಿ ಬಂದಿದ್ದಾರೆ.

ಜಗದೀಶ್ ಅವರು ಅಡುಗೆ ಮಾಡುವುದನ್ನು ತೋರಿಸಲಾಗಿದೆ. ಆ್ಯಂಕರ್ ಜಾಹ್ನವಿ ಅವರು ಜಗದೀಶ್​ಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಲ್ಲಿ ಹೈಲೈಟ್ ಆಗಿದ್ದು ‘ಹಂಸ ಮೇಲೆ ನಿಮಗೆ ಕ್ರಶ್’ ಆಗಿತ್ತಾ ಎಂಬುದು. ಇದಕ್ಕೆ ಜಗದೀಶ್ ಅವರು ನಕ್ಕಿದ್ದಾರೆ. ಜಗದೀಶ್ ಅವರು ನಗುವಿನಲ್ಲೇ ಜನರಿಗೆ ಉತ್ತರ ಸಿಕ್ಕಿದೆ.

ಬಿಗ್ ಬಾಸ್ ಮನೆಯಲ್ಲಿರುವ ಹಂಸ ಹಾಗೂ ಜಗದೀಶ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಪದೇ ಪದೇ ಹಂಸ ಅವರನ್ನು ಜಗದೀಶ್ ಕಾಡಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಜಗದೀಶ್​ಗೆ ಈ ಕುರಿತು ಪ್ರಶ್ನೆಗಳು ಎದುರಾಗುತ್ತಿವೆ.

ಇದನ್ನೂ ಓದಿ: ಹನುಮಂತನ ಮುಗ್ಧತೆಗೆ ಎಲ್ಲರೂ ಫಿದಾ; ಒಂದೇ ಮಾತಿನಿಂದ ಎಲ್ಲರ ಮನ ಗೆದ್ದ ಬಿಗ್ ಬಾಸ್ ಸ್ಪರ್ಧಿ

‘ಬಿಗ್ ಬಾಸ್ ಪಾಲಿಗೆ ಜಗದೀಶ್ ಮುಗಿದ ಅಧ್ಯಾಯ. ಹಾಗೆ ಕರೆಸೋದಾದರೆ ಹುಚ್ಚ ವೆಂಕಟ್ ಅವರನ್ನೂ ಕರೆಸಬೇಕಾಗುತ್ತದೆ’ ಎಂದು ಸುದೀಪ್ ಹೇಳಿದ್ದರು. ಈ ಮೂಲಕ ಜಗದೀಶ್ ಅವರನ್ನು ಮರಳಿ ಶೋಗೆ ಕರೆಸೋದೇ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?