AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ನಿಮ್ಮ ಮನೆಯ ನಾಯಿನಾ?’; ಹಾಸ್ಯ ಕಲಾವಿದರ ಅವಮಾನಿಸಿದ ಜಗದೀಶ್ ವಿರುದ್ಧ ಮಾನಸಾ ಕಿಡಿ

ಜಗದೀಶ್ ಅವರು ನಿರಂತರವಾಗಿ ಹಾಗೂ ಉದ್ದೇಶ ಪೂರ್ವಕವಾಗಿ ಧನರಾಜ್ ಅವರನ್ನು ‘ಕಾಮಿಡಿ ಪೀಸ್ ರೀತಿ ಕಾಣ್ತೀಯಾ’ ಎನ್ನುತ್ತಾ ಬರುತ್ತಿದ್ದಾರೆ. ಇದನ್ನು ಅವರು ಹಲವು ಬಾರಿ ಹೇಳಿದ್ದಾರೆ. ಇದು ಹಾಸ್ಯ ಕಲಾವಿದೆ ಮಾನಸಾ ಅವರನ್ನು ಕುಪಿತಗೊಳಿಸಿದೆ. ಅವರು ಮಾನಸಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

‘ನಾನು ನಿಮ್ಮ ಮನೆಯ ನಾಯಿನಾ?’; ಹಾಸ್ಯ ಕಲಾವಿದರ ಅವಮಾನಿಸಿದ ಜಗದೀಶ್ ವಿರುದ್ಧ ಮಾನಸಾ ಕಿಡಿ
ಮಾನಸಾ-ಜಗದೀಶ್
ರಾಜೇಶ್ ದುಗ್ಗುಮನೆ
|

Updated on: Oct 03, 2024 | 7:44 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಮನೆಯಲ್ಲಿ ಎಲ್ಲರೂ ಏಕ ಕಾಲಕಕ್ಕೆ ಲಾಯರ್ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬೇಕಂತಲೇ ಎಲ್ಲರನ್ನೂ ಕುಪಿತಗೊಳಿಸೋ ಕೆಲಸ ಮಾಡುತ್ತಿದ್ದಾರೆ. ಲಾಯರ್ ಜಗದೀಶ್ ವಿರುದ್ಧ ಮಾನಸಾ ಅವರು ತಿರುಗಿ ಬಿದ್ದಿದ್ದಾರೆ. ಹಾಸ್ಯ ಕಲಾವಿದರನ್ನು ಅವಮಾನಿಸಿದ ಜಗದೀಶ್ ವಿರುದ್ಧ ಅವರು ಸಿಡಿದೆದ್ದಿದ್ದಾರೆ.

ಧನರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿ ಬಿಗ್ ಬಾಸ್ ಮನೆಗೆ ಬಂದವರು. ಅವರು ಹಾಸ್ಯ ವಿಡಿಯೋಗಳನ್ನು ಮಾಡಿಕೊಂಡು ಇದ್ದರು. ಬಿಗ್ ಬಾಸ್ ಮನೆಯಲ್ಲೂ ಅವರು ಎಲ್ಲರನ್ನೂ ನಗಿಸೋ ಕೆಲಸ ಮಾಡುತ್ತಿದ್ದಾರೆ, ಅವರನ್ನು ಹಂಗಿಸೋ ಕೆಲಸವನ್ನು ಜಗದೀಶ್ ಮಾಡಿದ್ದಾರೆ. ಜಗದೀಶ್ ಅವರು ನಿರಂತರವಾಗಿ ಹಾಗೂ ಉದ್ದೇಶ ಪೂರ್ವಕವಾಗಿ ಧನರಾಜ್ ಅವರನ್ನು ‘ಕಾಮಿಡಿ ಪೀಸ್ ರೀತಿ ಕಾಣ್ತೀಯಾ’ ಎನ್ನುತ್ತಾ ಬರುತ್ತಿದ್ದಾರೆ. ಇದನ್ನು ಅವರು ಹಲವು ಬಾರಿ ಹೇಳಿದ್ದಾರೆ.

ಅವರ ಈ ಹೇಳಿಕೆ ಮಾನಸಾ ಅವರನ್ನು ಟ್ರಿಗರ್ ಮಾಡಿದೆ. ಮಾನಸಾ ಹಾಸ್ಯ ಕಲಾವಿದೆ. ಅವರು ‘ಗಿಚ್ಚಿ ಗಿಲಿಗಿಲಿ 3’ನಲ್ಲಿ ಸ್ಪರ್ಧೆ ಮಾಡಿ ಎಲ್ಲರನ್ನೂ ನಗಿಸಿದ್ದರು. ಅವರಿಗೆ ಈ ಮಾತಿನಿಂದ ಅವಮಾನ ಆಗಿದೆ. ಇದಕ್ಕೆ ಅವರು ಸಿಟ್ಟಾಗಿದ್ದಾರೆ. ‘ಹಾಸ್ಯ ಕಲಾವಿದರ ಅವಮಾನಿಸಬೇಡಿ. ಪದೇ ಪದೇ ಕಾಮಿಡಿ ಪೀಸಾ, ಕಾಮಿಡಿ ಪೀಸಾ ಎನ್ನುವ ಮಾತನ್ನು ಹೇಳಬೇಡಿ’ ಎಂದು ಕೋರಿದ್ದಾರೆ. ಆದರೆ, ಜಗದೀಶ್ ಇದನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಮೂರೇ ದಿನಕ್ಕೆ ಸುಸ್ತಾದ ಧನರಾಜ್; ಕಷ್ಟ ಆಗುತ್ತಿದೆ ಎಂದು ಕಣ್ಣೀರು

ಇದರಿಂದ ಸಿಟ್ಟಾದ ಮಾನಸಾ, ‘ಪದೇ ಪದೇ ಹೇಳಬೇಡಿ. ಕಾಮಿಸಿ ಪೀಸ್​ ಎಂದರೆ ನಿರಪಯೋಗಿ ಅಲ್ಲ. ಸಾವಿರ ಟೆನ್ಷನ್​ ಇದ್ದರೂ ನಗಿಸುತ್ತಾರೆ. ಮರ್ಯಾದೆಗೆ ಕೊಟ್ಟಷ್ಟೂ ಅತಿಯಾಗಿ ಆಡ್ತೀಯಾ’ ಎಂದು ಏಕವಚನದಲ್ಲೇ ಹೇಳಿದರು. ‘ಹೋಗೆಲೇ, ನಿನ್ನ ಯೋಗ್ಯತೆ ನೋಡಿಕೊಂಡು ಮಾತನಾಡು’ ಎಂದರು ಜಗದೀಶ್. ಇದರಿಂದ ಕೋಪಗೊಂಡ ಮಾನಸಾ, ‘ನಾನೇನು ನಿಮ್ಮ ಮನೆಯ ನಾಯಿನಾ? ನೀವು ಹೇಳಿದಂತೆ ಕೇಳಿಕೊಂಡು ಇರೋಕೆ’ ಎಂದರು. ‘ಅವಳು ಯಾವ ಸೀಮೆ ಹೆಂಗಸು’ ಎಂದರು ಜಗದೀಶ್. ಇದರಿಂದ ಇಡೀ ಮನೆ ಒಂದಾಗಿ ಜಗದೀಶ್ ವಿರುದ್ಧ ತಿರುಗಿ ಬಿತ್ತು. ‘ಈ ರೀತಿಯ ವಾತಾವರಣದಲ್ಲಿ ಬದುಕೋಕೆ ಸಾಧ್ಯವೇ ಇಲ್ಲ’ ಎಂದು ಕೆಲವರು ಅಭಿಪ್ರಾಯಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು