AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗದೀಶ್ ಮನೆಗೆ ಬರಲೇ ಇಲ್ಲ’; ಎಲಿಮಿನೇಷನ್ ಬಗ್ಗೆ ಪತ್ನಿಯ ಪ್ರತಿಕ್ರಿಯೆ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ಸಾಕಷ್ಟು ಸದ್ದು ಮಾಡಿದ್ದರು. ಅವರು ಎರಡೇ ವಾರ ಇದ್ದರೂ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಈಗ ಜಗದೀಶ್ ಅವರು ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಅವರ ಪತ್ನಿ ಒಪ್ಪಿಲ್ಲ.

‘ಜಗದೀಶ್ ಮನೆಗೆ ಬರಲೇ ಇಲ್ಲ’; ಎಲಿಮಿನೇಷನ್ ಬಗ್ಗೆ ಪತ್ನಿಯ ಪ್ರತಿಕ್ರಿಯೆ
ಜಗದೀಶ್ ಹಾಗೂ ಅವರ ಪತ್ನಿ
ರಾಜೇಶ್ ದುಗ್ಗುಮನೆ
|

Updated on: Oct 17, 2024 | 8:45 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಜಗದೀಶ್ ಹಾಗೂ ರಂಜಿತ್ ಎಲಿಮಿನೇಟ್ ಆಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಇಬ್ಬರ ಮಧ್ಯೆ ನಡೆದ ಫೈಟ್​ನಿಂದ ಈ ಕಿರಿಕ್ ಆಗಿದೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ ಜಗದೀಶ್ ಅವರು ಮನೆಗೆ ಬಂದಿಲ್ಲ, ಅವರು ನನಗೆ ಯಾವುದೇ ಕರೆಯನ್ನು ಕೂಡ ಮಾಡಿಲ್ಲ ಎಂದಿದ್ದಾರೆ ಅವರ ಪತ್ನಿ. ಇದರಿಂದ ವೀಕ್ಷಕರಲ್ಲಿ ಗೊಂದಲ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ಜಗದೀಶ್ ಅವರು. ಆದರೆ, ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಮಹಿಳೆಯರ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದರಿಂದಲೇ ಅವರನ್ನು ಮನೆಯಿಂದ ಹೊರಕ್ಕೆ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕಿರಿಕ್ ಮಿತಿಮೀರಿದ್ದು, ಫೈಟ್ ನಡೆದಿದೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿರೋ ಕನ್ನಡಿ ಹಾಗೂ ಕ್ಯಾಮೆರಾಗಳಿಗೆ ರಂಜಿತ್ ಹಾಗೂ ಜಗದೀಶ್ ಹಾನಿ ಮಾಡಿದ್ದಾರಂತೆ. ಇದರಿಂದ ಅವರು ಎಲಿಮಿನೇಟ್ ಆಗಿದ್ದಾರೆ ಎನ್ನಲಾಗುತ್ತಿದೆ.

‘ಜಗದೀಶ್ ಹೊರಕ್ಕೆ ಬಂದಿದ್ದು ಗೊತ್ತೇ ಇಲ್ಲ’ ಎಂದು ಜಗದೀಶ್ ಪತ್ನಿ ಹೇಳಿದ್ದಾರೆ. ಅಲ್ಲದೆ, ತಮಗೆ ಕರೆ ಮಾಡಿಲ್ಲ ಎಂದು ಕೂಡ ಅವರು ಹೇಳಿದ್ದಾರೆ. ಆದರೆ, ಜಗದೀಶ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ, ಅವರು ಎಲಿಮಿನೇಟ್ ಆಗಿದ್ದು ಖಚಿತ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮೋಕ್ಷಿತಾ, ಐಶ್ವರ್ಯಾಗೆ ಶಾಕ್ ನೀಡಿದ ಬಿಗ್ ಬಾಸ್; ಮುಂದಿನ ಆಟ ಇನ್ನೂ ಕಷ್ಟ

ಬಿಗ್ ಬಾಸ್​ನಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿಲ್ಲ. ಹೀಗಾಗಿ, ಇದನ್ನು ಮನೆಯ ಸದಸ್ಯರು ಓಪನ್ ಆಗಿ ಹೇಳಿಕೊಳ್ಳೋಕೆ ಬರಲ್ಲ. ಹೀಗಾಗಿ, ಜಗದೀಶ್ ಪತ್ನಿ ಈ ರೀತಿಯ ಹಾರಿಕೆ ಉತ್ತರ ಕೊಟ್ಟಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!