AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಕಲುಷಿತ ನೀರಿನಿಂದ ಸ್ಪರ್ಧಿಗಳಿಗೆ ಅನಾರೋಗ್ಯ? ಪ್ರತಿಭಟನೆ ಮಾಡ್ತಾರಂತೆ ಜಗದೀಶ್

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಎರಡನೇ ವಾರದಲ್ಲಿ ಕೂಡ ಜಗದೀಶ್​ ಅವರ ಹಾರಾಟ ಮುಂದುವರಿದಿದೆ. ತಮಗೆ ಸಿಕ್ಕ ನೀರಿನ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀರು ಕಲುಷಿತವಾಗಿದ್ದರಿಂದ ಆರೋಗ್ಯ ಕೆಟ್ಟಿದೆ ಎಂದು ಜಗದೀಶ್​ ಅವರು ಕ್ಯಾಪ್ಟನ್​ ಹಂಸಾ ಬಳಿ ದೂರು ನೀಡಿದ್ದಾರೆ. ಸ್ಕ್ರೀನ್​ ಸ್ಪೇಸ್​ ಪಡೆಯಲು ಜಗದೀಶ್​ ಅವರು ಹಲವಾರು ತಂತ್ರಗಾರಿಕೆ ಮಾಡುತ್ತಿದ್ದಾರೆ.

ಬಿಗ್​ ಬಾಸ್​ನಲ್ಲಿ ಕಲುಷಿತ ನೀರಿನಿಂದ ಸ್ಪರ್ಧಿಗಳಿಗೆ ಅನಾರೋಗ್ಯ? ಪ್ರತಿಭಟನೆ ಮಾಡ್ತಾರಂತೆ ಜಗದೀಶ್
ಜಗದೀಶ್​
ಮದನ್​ ಕುಮಾರ್​
|

Updated on: Oct 07, 2024 | 10:59 PM

Share

ಈ ಸೀಸನ್​ನ ಬಿಗ್​ ಬಾಸ್​ ಮನೆಯಲ್ಲಿ ಎರಡು ಭಾಗ ಆಗಿದೆ. ಸ್ವರ್ಗ ಮತ್ತು ನರಕ ಎಂಬ ಎರಡು ಪ್ರತ್ಯೇಕ ಜಾಗ ಇದೆ. ನರಕದವರಿಗೆ ಹೆಚ್ಚಿನ ಸೌಕರ್ಯಗಳು ಇಲ್ಲ. ಆದರೆ ಸ್ವರ್ಗದವರಿಗೆ ಒಂದಷ್ಟು ಸೌಲಭ್ಯಗಳನ್ನು ನೀಡಲಾಗಿದೆ. ನರಕದವರಿಗೆ ಬೇಸಿಕ್ ವಸ್ತುಗಳನ್ನೂ ಸರಿಯಾಗಿ ನೀಡುತ್ತಿಲ್ಲವೇ ಎಂಬ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಲಾಯರ್​ ಜಗದೀಶ್​ ಅವರ ಮಾತುಗಳು. ಸೋಮವಾರದ (ಅ.7) ಸಂಚಿಕೆಯಲ್ಲಿ ಅವರು ಒಂದು ಆರೋಪ ಮಾಡಿದ್ದಾರೆ. ತಮಗೆ ಕಲುಷಿತ ನೀರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜಗದೀಶ್​ ಮಾಡುವ ತಂತ್ರ, ಕುತಂತ್ರಗಳು ಒಂದೆರಡಲ್ಲ. ಬಿಗ್​ ಬಾಸ್​ ಆಟಕ್ಕಾಗಿ ಅವರು ಯಾವ ರೀತಿ ಬೇಕಾದರೂ ಬಣ್ಣ ಬದಲಾಯಿಸುತ್ತಾರೆ. ಮೊದಲು ಸ್ವರ್ಗದಲ್ಲಿ ಇದ್ದ ಅವರನ್ನು ಈಗ ನರಕಕ್ಕೆ ಕಳಿಸಲಾಗಿದೆ. ಸ್ವರ್ಗದಲ್ಲಿ ಇದ್ದಾಗ ಅವರಿಗೆ ಅನೇಕ ಎಲ್ಲ ಸೌಕರ್ಯಗಳು ಸಿಕ್ಕಿದ್ದವು. ಆದರೆ ನರಕದಲ್ಲಿ ಆ ರೀತಿಯ ಸೌಕರ್ಯಗಳು ಸಿಗುತ್ತಿಲ್ಲ. ಅದನ್ನು ಪಡೆಯಲು ಅವರು ಸುಳ್ಳು ಹೇಳುವ ಮಟ್ಟಕ್ಕೂ ಇಳಿದಿದ್ದಾರೆ.

ಎರಡನೇ ವಾರದಲ್ಲಿ ಹಂಸಾ ಅವರು ಕ್ಯಾಪ್ಟನ್​ ಆಗಿದ್ದಾರೆ. ಅವರಿಗೆ ವಿರೋಧ ವ್ಯಕ್ತಪಡಿಸುತ್ತಾ ಜಗದೀಶ್​ ಗಲಾಟೆ ಎಬ್ಬಿಸುತ್ತಿದ್ದಾರೆ. ತಮಗೆ ನೀಡಿದ ನೀರು ಕಲುಷಿತವಾಗಿದ್ದು, ಅದರಿಂದ ಭೇದಿ ಆಗಿದೆ ಎಂದು ಜಗದೀಶ್​ ಆರೋಪಿಸಿದ್ದಾರೆ. ಹಾಗಾಗಿ ಹಂಸಾ ವಿರುದ್ಧ ಪ್ರತಿಭಟನೆ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ. ಅವರ ಮಾತಿಗೆ ನರಕದ ಬೇರೆ ಸ್ಪರ್ಧಿಗಳು ಸಹಮತ ಸೂಚಿಸಿಲ್ಲ.

ಇದನ್ನೂ ಓದಿ: ‘ಪೆಟ್ಟಾಯ್ತು ಅಂತ ಆಸ್ಪತ್ರೆಗೆ ಹೋಗಿ ಬಂದಿದ್ದು ನಾಟಕ’: ಮತ್ತೊಂದು ಬಾಂಬ್ ಹಾಕಿದ ಜಗದೀಶ್​

ಸಿಕ್ಕಾಪಟ್ಟೆ ಜಗಳ ಮಾಡಿಕೊಳ್ಳುವ ಕಾರಣದಿಂದಲೇ ಜಗದೀಶ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಹೆಚ್ಚು ಜಗಳ ಮಾಡಿದರೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗುತ್ತದೆ ಎಂಬುದು ಅವರಿಗೆ ಗೊತ್ತಾಗಿದೆ. ಬೇರೆ ಎಲ್ಲ ವಿಚಾರಗಳನ್ನು ಬದಿಗಿಟ್ಟು ಒಂದಲ್ಲಾ ಒಂದು ಕಿರಿಕ್​ ಮಾಡಿಕೊಳ್ಳುವುದರಲ್ಲೇ ಅವರು ಬ್ಯುಸಿ ಆಗಿದ್ದಾರೆ. ಶೋ ವಿರುದ್ಧವೇ ಮಾತನಾಡಿದರೂ ಕೂಡ ಅವರಿಗೆ ಬಿಗ್​ ಬಾಸ್​ ಕಡೆಯಿಂದ ಶಿಕ್ಷೆ ಆಗಿಲ್ಲ. ಈಗೊಂದು ಮಾತನಾಡಿ, ನಂತರ ಮತ್ತೊಂದು ಮಾತಾಡುವುದು ಜಗದೀಶ್​ ಸ್ವಭಾವ. ಹಾಗಾಗಿ ಅವರನ್ನು ಊಸರವಳ್ಳಿಗೆ ಹೋಲಿಸಿದ್ದರು ಧನರಾಜ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ