AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್​ ಮಾತಿಗೆ ಬೆಲೆ ಕೊಡ್ತೀನಿ, ಇನ್ಮೇಲೆ ಬದಲಾಗ್ತೀನಿ’: ಬಿಗ್​ ಬಾಸ್​ನಲ್ಲಿ ಜಗದೀಶ್ ನಿರ್ಧಾರ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಜಗದೀಶ್​ ಸಿಕ್ಕಾಪಟ್ಟೆ ಹೈಲೈಟ್​ ಆಗಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಅವರ ವರ್ತನೆ. ಕೋಪ ಬಂದಾಗ ಜಗದೀಶ್​ ತೀರಾ ಖರಾಬ್​ ಆಗಿ ನಡೆದುಕೊಳ್ಳುತ್ತಾರೆ. ಈಗ ತಮ್ಮ ಕೋಪಕ್ಕೆ ಬ್ರೇಕ್​ ಹಾಕಿಕೊಳ್ಳಲು ಅವರು ನಿರ್ಧರಿಸಿದ್ದಾರೆ. ಸುದೀಪ್ ಮಾತಿಗೆ ಬೆಲೆ ನೀಡಿ ತಾವು ಈ ನಿರ್ಧಾರಕ್ಕೆ ಬಂದಿರುವುದಾಗಿ ಜಗದೀಶ್ ಹೇಳಿದ್ದಾರೆ.

‘ಸುದೀಪ್​ ಮಾತಿಗೆ ಬೆಲೆ ಕೊಡ್ತೀನಿ, ಇನ್ಮೇಲೆ ಬದಲಾಗ್ತೀನಿ’: ಬಿಗ್​ ಬಾಸ್​ನಲ್ಲಿ ಜಗದೀಶ್ ನಿರ್ಧಾರ
ಜಗದೀಶ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Oct 06, 2024 | 9:33 PM

Share

ಲಾಯರ್​ ಎಂದು ಹೇಳಿಕೊಂಡಿರುವ ಜಗದೀಶ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಸಖತ್​ ಕೋಪ ಮಾಡಿಕೊಂಡು ಸುದ್ದಿ ಆಗಿದ್ದಾರೆ. ಅವರ ಕೋಪದಿಂದಾಗಿ ಅನೇಕ ಜಗಳಗಳು ಆಗಿವೆ. ಶನಿವಾರದ (ಅ.5) ಸಂಚಿಕೆಯಲ್ಲಿ ಕಿಚ್ಚ ಸುದೀಪ್​ ಅವರು ಜಗದೀಶ್​ಗೆ ಬುದ್ಧಿವಾದ ಹೇಳಿದ್ದರು. ಅದರ ಪರಿಣಾಮವಾಗಿ ಸಂಪೂರ್ಣ ಬದಲಾಗುವುದಾಗಿ ಜಗದೀಶ್ ತೀರ್ಮಾನಿಸಿದ್ದಾರೆ. ಅವರು ಈ ಮಾತಿಗೆ ಎಷ್ಟು ದಿನ ಬದ್ಧರಾಗಿ ಇರುತ್ತಾರೆ ಎಂಬುದನ್ನು ಕಾದುನೋಡಬೇಕು. ಜಗದೀಶ್​ ಖಂಡಿತವಾಗಿಯೂ ಮಾತಿನ ಮೇಲೆ ನಿಲ್ಲುವುದಿಲ್ಲ ಎಂಬುದು ಬಿಗ್​ ಬಾಸ್​ ಮನೆಯ ಎಲ್ಲರಿಗೂ ಗೊತ್ತಾಗಿದೆ.

ಮೊದಲ ವಾರದಲ್ಲೇ ಜಗದೀಶ್​ ಮಾಡಿದ ಅವಾಂತರಗಳು ಒಂದೆರಡಲ್ಲ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಇರುವ ಮಹಿಳಾ ಸ್ಪರ್ಧಿಗಳಿಗೆ ಕಿರಿಕಿರಿ ಆಗುವ ರೀತಿಯಲ್ಲಿ ಪದ ಪ್ರಯೋಗ ಮಾಡಿದ್ದರು. ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ಅವರು ಕ್ಯಾಮೆರಾ ಎದುರಿನಲ್ಲೇ ಮಾತನಾಡಿದರು. ಬೇಕುಬೇಕಂತಲೇ ನಿಯಮಗಳನ್ನು ಮುರಿದ್ದರು. ಅದಕ್ಕೆಲ್ಲ ಸುದೀಪ್​ ಕ್ಲಾಸ್​ ತೆಗೆದುಕೊಂಡರು.

ಭಾನುವಾರದ (ಅಕ್ಟೋಬರ್​ 6) ಸಂಚಿಕೆಯಲ್ಲಿ ಧನರಾಜ್​ ಜೊತೆ ಜಗದೀಶ್​ ಮಾತನಾಡುತ್ತಿದ್ದರು. ‘ಇನ್ಮೇಲೆ ನಾನು ಕೋಪ ಮಾಡಿಕೊಳ್ಳುವುದೇ ಇಲ್ಲ. ಸುದೀಪ್​ ಅವರು ಅಷ್ಟೆಲ್ಲ ನನಗೆ ಹೇಳಿದ್ದಾರೆ. ಅಷ್ಟು ದೊಡ್ಡ ವ್ಯಕ್ತಿ ಹೇಳಿದ್ದಕ್ಕೆ ಗೌರವ ನೀಡುತ್ತೇನೆ’ ಎಂದು ಜಗದೀಶ್​ ಹೇಳಿದರು. ಆದರೆ ಅವರು ಹೇಳಿದ ರೀತಿಯಲ್ಲೇ ನಡೆದುಕೊಳ್ಳುತ್ತಾರೆ ಎಂಬುದನ್ನು ನಿರೀಕ್ಷಿಸುವುದು ತುಂಬ ಕಷ್ಟ. ಆರಂಭದಲ್ಲಿ ಜಗದೀಶ್​ ಅವರಿಗೆ ಎಲ್ಲರೂ ಗೌರವ ನೀಡುತ್ತಿದ್ದರು. ಆದರೆ ಅವರ ವಿಚಿತ್ರ ವರ್ತನೆಗಳನ್ನು ನೋಡಿದ ಬಳಿಕ ಕೆಲವರು ಏಕವಚನದಲ್ಲಿ ಮಾತನಾಡಿದ್ದು ಕೂಡ ಇದೆ.

ಇದನ್ನೂ ಓದಿ: ಜಗದೀಶ್ ವಿರುದ್ಧ ಬೆಂಗಳೂರು ವಕೀಲರ ಸಂಘ ಗರಂ; ಕಲರ್ಸ್ ವಾಹಿನಿಗೆ ಬರೆದ ಪತ್ರದಲ್ಲಿ ಏನಿದೆ?

ಜಗದೀಶ್​ ಅವರು ಕ್ಷಣಕ್ಷಣಕ್ಕೂ ಮಾತು ಬದಲಿಸುತ್ತಾರೆ. ಹಿಂದಿನ ರಾತ್ರಿ ಬಿಗ್​ ಬಾಸ್​ ಬಗ್ಗೆ ಹಗುರವಾಗಿ ಮಾತನಾಡಿ, ಬೆಳಗ್ಗೆ ಎದ್ದು ಕ್ಷಮೆ ಕೇಳುತ್ತಾರೆ. ಮತ್ತೆ ಇನ್ನೇನೋ ಮಾತನಾಡಿ ಕಿರಿಕ್​ ಮಾಡಿಕೊಳ್ಳುತ್ತಾರೆ. ‘ಹಂಸಾ ಹೆಸರಿಗೆ ಮಾತ್ರ ಕ್ಯಾಪ್ಟನ್​. ಆದರೆ ಆಟ ನಡೆಯುವುದು ನನ್ನದು’ ಎಂದು ಜಗದೀಶ್ ಅವರು ಹೇಳಿದ್ದಾರೆ. ಒಟ್ಟು 17 ಜನರು ಬಿಗ್​ ಬಾಸ್​ ಮನೆಯಲ್ಲಿ ಆಟ ಆರಂಭಿಸಿದರು. ಅವರ ಪೈಕಿ ಒಬ್ಬರ ಆಟ ಇಂದು (ಅ.6) ಅಂತ್ಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್