‘ಕ್ಯಾಪ್ಟನ್​ಗೆ ಮರ್ಯಾದೆ ಕೊಡಿ’: ಜಗದೀಶ್​ ಕಾಟದಿಂದ ಬೇಡಿಕೊಳ್ಳುವ ಸ್ಥಿತಿಗೆ ಬಂದ ಹಂಸಾ

ಸ್ವರ್ಗದಲ್ಲಿ ಇದ್ದಾಗ ಸಿಕ್ಕಾಪಟ್ಟೆ ಹಾರಾಡುತ್ತಿದ್ದ ಜಗದೀಶ್​ ಅವರು ನರಕಕ್ಕೆ ಬಂದರೂ ಬದಲಾಗಿಲ್ಲ. ನರಕದಲ್ಲಿಯೂ ಅವರು ಕಿರಿಕ್​ ಮಾಡುತ್ತಿದ್ದಾರೆ. ಕ್ಯಾಪ್ಟನ್​ ಆಗಿರುವ ಹಂಸಾಗೆ ಜಗದೀಶ್​ ಅವರನ್ನು ಸಹಿಸಿಕೊಳ್ಳುವುದು ಕಷ್ಟ ಆಗಿದೆ. ಉದ್ದೇಶಪೂರ್ವಕವಾಗಿಯೇ ಜಗದೀಶ್​ ಕಿರಿಕ್ ಮಾಡುತ್ತಿದ್ದಾರೆ. ಏಕವಚನದಲ್ಲೂ ಮಾತನಾಡಿ ಕೆಣಕುತ್ತಿದ್ದಾರೆ.

‘ಕ್ಯಾಪ್ಟನ್​ಗೆ ಮರ್ಯಾದೆ ಕೊಡಿ’: ಜಗದೀಶ್​ ಕಾಟದಿಂದ ಬೇಡಿಕೊಳ್ಳುವ ಸ್ಥಿತಿಗೆ ಬಂದ ಹಂಸಾ
ಜಗದೀಶ್​, ಹಂಸಾ
Follow us
|

Updated on: Oct 08, 2024 | 10:48 PM

ಬಿಗ್​ ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಅವರು ಗಲಾಟೆ ಮಾಡಲೇಬೇಕು ಎಂಬ ತೀರ್ಮಾನಕ್ಕೆ ಬಂದಂತಿದೆ. ಅದರಲ್ಲೂ ನಟಿ ಹಂಸಾ ಅವರನ್ನು ಜಗದೀಶ್​ ಟಾರ್ಗೆಟ್​ ಮಾಡಿದ್ದಾರೆ. ಪ್ರತಿ ಹೆಜ್ಜೆಯಲ್ಲೂ ಹಂಸಾಗೆ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ಅವರು ಏಕವಚನದಲ್ಲಿ ಮಾತನಾಡಿದ್ದಾರೆ. ಬಿಗ್​ ಬಾಸ್​ ಮನೆಗೆ ಮೊದಲ ಕ್ಯಾಪ್ಟನ್​ ಆಗಿರುವ ಹಂಸಾ ಅವರಿಗೆ ಕಿರಿಕಿರಿ ಆಗುತ್ತಿದೆ. ಕ್ಯಾಪ್ಟನ್​ ಸ್ಥಾನಕ್ಕೂ ಗೌರವ ನೀಡಿದೇ ಜಗದೀಶ್​ ಅವರು ಕಾಟ ಕೊಡುತ್ತಿದ್ದಾರೆ. ಪ್ರತಿ ಹಂತದಲ್ಲೂ ಮಾತಿನ ಮೂಲಕ ತಿವಿಯುತ್ತಿದ್ದಾರೆ. ಅಲ್ಲದೇ ಬೇಕೆಂದೇ ಕೆಣಕುತ್ತಿದ್ದಾರೆ.

ಜಗದೀಶ್​ ಅವರು ಮೊದಲು ಸ್ವರ್ಗದಲ್ಲಿ ಇದ್ದರು. ಆದರೆ ಅವರಿಂದ ಸ್ವರ್ಗದ ಮಂದಿಗೆ ಒಂದಷ್ಟು ತೊಂದರೆ ಆಯಿತು. ಕ್ಯಾಪ್ಟನ್​ ಆದ ಹಂಸಾ ಅವರು ಎರಡನೇ ವಾರದಲ್ಲಿ ತಮ್ಮ ಅಧಿಕಾರವನ್ನು ಬಳಸಿ ಜಗದೀಶ್​ ಅವರನ್ನು ನರಕಕ್ಕೆ ಕಳಿಸಿದರು. ಆದ್ದರಿಂದ ಜಗದೀಶ್​ ಅವರಿಗೆ ಹಂಸಾ ಅವರನ್ನು ಕಂಡರೆ ಆಗುತ್ತಿಲ್ಲ. ಮಂಗಳವಾರದ (ಅ.8) ಸಂಚಿಕೆಯಲ್ಲಿ ಟೀ ತಂದುಕೊಂಡುವಂತೆ ಅವರು ತಾಕೀತು ಮಾಡಿದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೆ. ಇದರಿಂದ ಹಂಸಾಗೆ ಕೋಪ ಬಂದಿದೆ.

ಏಕವಚನದಲ್ಲಿ ಮಾತನಾಡಬೇಡಿ ಎಂದು ಹಂಸಾ ಅವರು ಎಚ್ಚರಿಕೆ ನೀಡಿದ್ದಾರೆ. ಆದರೂ ಕೂಡ ಜಗದೀಶ್​ ಬುದ್ಧಿ ಕಲಿತಿಲ್ಲ. ‘ದಯವಿಟ್ಟು ಕ್ಯಾಪ್ಟನ್​ಗೆ ಎಲ್ಲರೂ ಮರ್ಯಾದೆ ಕೊಡಿ’ ಎಂದು ಹಂಸಾ ಅವರು ಕೂಗಿ ಹೇಳಿದ್ದಾರೆ. ಹಾಗಿದ್ದರೂ ಜಗದೀಶ್​ ಅವರು ದಾರಿಗೆ ಬಂದಿಲ್ಲ. ಅದಕ್ಕೂ ಮುನ್ನ ಮಾತನಾಡುವಾಗ ‘ಹಂಸಾ ಅವರು ಮ್ಯಾಚ್ ಫಿಕ್ಸಿಂಗ್​ ಮಾಡುತ್ತಾರೆ’ ಎಂದು ಜಗದೀಶ್​ ಆರೋಪ ಹೊರಿಸಿದರು.

ಇದನ್ನೂ ಓದಿ: ‘ನೀನು ಯಾರಿಗೂ ನಿಯತ್ತಾಗಿಲ್ಲ’: ಎಲ್ಲರ ಎದುರು ಹಂಸಾಗೆ ಚುಚ್ಚು ಮಾತುಗಳಿಂದ ನಿಂದಿಸಿದ ಜಗದೀಶ್​

ಕೆಲವೊಮ್ಮೆ ಕಿರಿಕ್ ಮಾಡುವ ಜಗದೀಶ್​ ಅವರು ಮರುಕ್ಷಣವೇ ಕಾಮಿಡಿ ಮಾಡುತ್ತಾರೆ. ಹಂಸಾ ಅವರನ್ನು ಪದೇಪದೇ ಗೋಳು ಹೊಯ್ದುಕೊಂಡ ಅವರು ನಂತರ ಅವರ ಜೊತೆಯೇ ಕಾಮಿಡಿ ಮಾಡುತ್ತಾ ಕಾಲ ಕಳೆದಿದ್ದಾರೆ. ಮೊದಲ ವಾರ ಜಗದೀಶ್​ ಅವರಿಗೆ ಸಿಕ್ಕಾಪಟ್ಟೆ ಸ್ಕ್ರೀನ್​ ಸ್ಪೇಸ್​ ಸಿಕ್ಕಿತ್ತು. ಎರಡನೇ ವಾರದ ಕಾಂಟೆಂಟ್​ ಇನ್ನೂ ಖರಾಬ್​ ಆಗಿ ಇರಲಿದೆ ಎಂದು ಅವರು ಶಪಥ ಮಾಡಿದ್ದಾರೆ. ಅದಕ್ಕೆ ತಕ್ಕಂತೆಯೇ ಅವರು ನಡೆದುಕೊಳ್ಳುತ್ತಿದ್ದಾರೆ. ಮೊದಲ ವಾರದಲ್ಲಿ ಯಮುನಾ ಶ್ರೀನಿಧಿ ಎಲಿಮಿನೇಟ್​ ಆದರು. ಎರಡನೇ ವಾರಕ್ಕೆ ಯಾರು ಎಂಬ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?