AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗಿರೋ ಜಗದೀಶ್ ಅವರು ಸಾಕಷ್ಟು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಬಿಗ್ ಬಾಸ್​ನೇ ಎಕ್ಸ್​ಪೋಸ್ ಮಾಡ್ತೀನಿ ಎಂದಿದ್ದ ಅವರು, ಈಗ ಬಿಗ್ ಬಾಸ್​ನೇ ಖರೀದಿ ಮಾಡೋ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆಗಳು ನಡೆಯುತ್ತಿವೆ.

‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?
ಹಿಂದಿ ಬಿಗ್ ಬಾಸ್​ ಮಾದರಿಯಲ್ಲಿ ಕನ್ನಡದಲ್ಲಿ ಜಗದೀಶ್​ ಎಲಿಮಿನೇಷನ್?
ರಾಜೇಶ್ ದುಗ್ಗುಮನೆ
|

Updated on:Oct 04, 2024 | 11:56 AM

Share

ಬಿಗ್ ಬಾಸ್​ನಲ್ಲಿ ಯಾವುದಾದರೂ ಸ್ಪರ್ಧಿ ಮೇಲೆ ಸಲ್ಮಾನ್ ಖಾನ್ ಕೋಪಗೊಂಡರೆ ಅವರ ಕಥೆ ಮುಗಿದಂತೆ. ಆ ಸ್ಪರ್ಧಿಯನ್ನು ತಕ್ಷಣಕ್ಕೆ ಮನೆಯಿಂದ ಹೊರಹಾಕಲೂ ಅವರು ಹಿಂಜರಿಯುವುದಿಲ್ಲ. ‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಸಲ್ಮಾನ್ ಖಾನ್ ಹೊರಹಾಕಿದ್ದರು. ಈಗ ಕನ್ನಡದಲ್ಲೂ ಅದೇ ರೀತಿಯ ಘಟನೆ ಮರುಕಳಿಸಲಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಕಾಡಿದೆ. ವೀಕೆಂಡ್ ಎಪಿಸೋಡ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಬಿಗ್ ಬಾಸ್ ಶೋಗೆ ಅವಮಾನ ಮಾಡಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

ಹಿಂದಿ ಬಿಗ್ ಬಾಸ್​ನ 10ನೇ ಸೀಸನ್​ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್​ಗೆ ಅಲ್ಲವೇ ಅಲ್ಲ’ ಎಂದಿದ್ದರು. ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲ್ಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

ಇದನ್ನೂ ಓದಿ: ‘ನಂಗೆ ಬಿಗ್ ಬಾಸ್​ನೇ ಖರೀದಿಸೋ ತಾಕತ್ತಿದೆ, ಆಗ ಕಪ್ ನಂದೇ’; ಬಡಾಯಿ ಕೊಚ್ಚಿಕೊಂಡ ಜಗದೀಶ್

ಕನ್ನಡದಲ್ಲೂ ಬಿಗ್ ಬಾಸ್​ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್​ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Fri, 4 October 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್