AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗಿರೋ ಜಗದೀಶ್ ಅವರು ಸಾಕಷ್ಟು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಬಿಗ್ ಬಾಸ್​ನೇ ಎಕ್ಸ್​ಪೋಸ್ ಮಾಡ್ತೀನಿ ಎಂದಿದ್ದ ಅವರು, ಈಗ ಬಿಗ್ ಬಾಸ್​ನೇ ಖರೀದಿ ಮಾಡೋ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆಗಳು ನಡೆಯುತ್ತಿವೆ.

‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?
ಹಿಂದಿ ಬಿಗ್ ಬಾಸ್​ ಮಾದರಿಯಲ್ಲಿ ಕನ್ನಡದಲ್ಲಿ ಜಗದೀಶ್​ ಎಲಿಮಿನೇಷನ್?
ರಾಜೇಶ್ ದುಗ್ಗುಮನೆ
|

Updated on:Oct 04, 2024 | 11:56 AM

Share

ಬಿಗ್ ಬಾಸ್​ನಲ್ಲಿ ಯಾವುದಾದರೂ ಸ್ಪರ್ಧಿ ಮೇಲೆ ಸಲ್ಮಾನ್ ಖಾನ್ ಕೋಪಗೊಂಡರೆ ಅವರ ಕಥೆ ಮುಗಿದಂತೆ. ಆ ಸ್ಪರ್ಧಿಯನ್ನು ತಕ್ಷಣಕ್ಕೆ ಮನೆಯಿಂದ ಹೊರಹಾಕಲೂ ಅವರು ಹಿಂಜರಿಯುವುದಿಲ್ಲ. ‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಸಲ್ಮಾನ್ ಖಾನ್ ಹೊರಹಾಕಿದ್ದರು. ಈಗ ಕನ್ನಡದಲ್ಲೂ ಅದೇ ರೀತಿಯ ಘಟನೆ ಮರುಕಳಿಸಲಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಕಾಡಿದೆ. ವೀಕೆಂಡ್ ಎಪಿಸೋಡ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಬಿಗ್ ಬಾಸ್ ಶೋಗೆ ಅವಮಾನ ಮಾಡಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

ಹಿಂದಿ ಬಿಗ್ ಬಾಸ್​ನ 10ನೇ ಸೀಸನ್​ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್​ಗೆ ಅಲ್ಲವೇ ಅಲ್ಲ’ ಎಂದಿದ್ದರು. ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲ್ಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

ಇದನ್ನೂ ಓದಿ: ‘ನಂಗೆ ಬಿಗ್ ಬಾಸ್​ನೇ ಖರೀದಿಸೋ ತಾಕತ್ತಿದೆ, ಆಗ ಕಪ್ ನಂದೇ’; ಬಡಾಯಿ ಕೊಚ್ಚಿಕೊಂಡ ಜಗದೀಶ್

ಕನ್ನಡದಲ್ಲೂ ಬಿಗ್ ಬಾಸ್​ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್​ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Fri, 4 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ