AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗಿರೋ ಜಗದೀಶ್ ಅವರು ಸಾಕಷ್ಟು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಬಿಗ್ ಬಾಸ್​ನೇ ಎಕ್ಸ್​ಪೋಸ್ ಮಾಡ್ತೀನಿ ಎಂದಿದ್ದ ಅವರು, ಈಗ ಬಿಗ್ ಬಾಸ್​ನೇ ಖರೀದಿ ಮಾಡೋ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆಗಳು ನಡೆಯುತ್ತಿವೆ.

‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?
ಹಿಂದಿ ಬಿಗ್ ಬಾಸ್​ ಮಾದರಿಯಲ್ಲಿ ಕನ್ನಡದಲ್ಲಿ ಜಗದೀಶ್​ ಎಲಿಮಿನೇಷನ್?
ರಾಜೇಶ್ ದುಗ್ಗುಮನೆ
|

Updated on:Oct 04, 2024 | 11:56 AM

Share

ಬಿಗ್ ಬಾಸ್​ನಲ್ಲಿ ಯಾವುದಾದರೂ ಸ್ಪರ್ಧಿ ಮೇಲೆ ಸಲ್ಮಾನ್ ಖಾನ್ ಕೋಪಗೊಂಡರೆ ಅವರ ಕಥೆ ಮುಗಿದಂತೆ. ಆ ಸ್ಪರ್ಧಿಯನ್ನು ತಕ್ಷಣಕ್ಕೆ ಮನೆಯಿಂದ ಹೊರಹಾಕಲೂ ಅವರು ಹಿಂಜರಿಯುವುದಿಲ್ಲ. ‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಸಲ್ಮಾನ್ ಖಾನ್ ಹೊರಹಾಕಿದ್ದರು. ಈಗ ಕನ್ನಡದಲ್ಲೂ ಅದೇ ರೀತಿಯ ಘಟನೆ ಮರುಕಳಿಸಲಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಕಾಡಿದೆ. ವೀಕೆಂಡ್ ಎಪಿಸೋಡ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಬಿಗ್ ಬಾಸ್ ಶೋಗೆ ಅವಮಾನ ಮಾಡಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

ಹಿಂದಿ ಬಿಗ್ ಬಾಸ್​ನ 10ನೇ ಸೀಸನ್​ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್​ಗೆ ಅಲ್ಲವೇ ಅಲ್ಲ’ ಎಂದಿದ್ದರು. ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲ್ಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

ಇದನ್ನೂ ಓದಿ: ‘ನಂಗೆ ಬಿಗ್ ಬಾಸ್​ನೇ ಖರೀದಿಸೋ ತಾಕತ್ತಿದೆ, ಆಗ ಕಪ್ ನಂದೇ’; ಬಡಾಯಿ ಕೊಚ್ಚಿಕೊಂಡ ಜಗದೀಶ್

ಕನ್ನಡದಲ್ಲೂ ಬಿಗ್ ಬಾಸ್​ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್​ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Fri, 4 October 24

Follow Us
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?