AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗು ಬಿಗ್ ಬಾಸ್’ ಟ್ರೋಫಿ ಎತ್ತಿದ ಎಲ್​.ವಿ. ರೇವಂತ್; ಕನ್ನಡ ಚಿತ್ರರಂಗದ ಜತೆಗೂ ಇದೆ ನಂಟು

ಹೆಚ್ಚು ವೋಟ್ ಪಡೆದು ರೇವಂತ್ ಗೆದ್ದಿದ್ದಾರೆ. ಅವರಿಗೆ ಟ್ರೋಫಿ ಜತೆ 10 ಲಕ್ಷ ರೂಪಾಯಿ ನಗದು, 25 ಲಕ್ಷ ರೂಪಾಯಿ ಮೌಲ್ಯದ ಪ್ರಾಪರ್ಟಿ ಹಾಗೂ ಕಾರು ಬಹುಮಾನವಾಗಿ ಸಿಕ್ಕಿದೆ.   

‘ತೆಲುಗು ಬಿಗ್ ಬಾಸ್’ ಟ್ರೋಫಿ ಎತ್ತಿದ ಎಲ್​.ವಿ. ರೇವಂತ್; ಕನ್ನಡ ಚಿತ್ರರಂಗದ ಜತೆಗೂ ಇದೆ ನಂಟು
ನಾಗಾರ್ಜುನ
TV9 Web
| Edited By: |

Updated on: Dec 19, 2022 | 3:26 PM

Share

‘ಕನ್ನಡ ಬಿಗ್ ಬಾಸ್​ ಸೀಸನ್ 9’ (BBK 9) ಆರಂಭ ಆಗುವ ಕೆಲವೇ ವಾರ ಮೊದಲು ‘ತೆಲುಗು ಬಿಗ್ ಬಾಸ್ ಸೀಸನ್ 6’ ಆರಂಭಗೊಂಡಿತ್ತು. ಅಕ್ಕಿನೇನಿ ನಾಗಾರ್ಜುನ (Akkineni Nagarjun) ಅವರು ಈ ಶೋ ನಡೆಸಿಕೊಟ್ಟಿದ್ದಾರೆ. 106 ದಿನಗಳನ್ನು ಪೂರ್ಣಗೊಳಿಸುವ ಮೂಲಕ ‘ತೆಲುಗು ಬಿಗ್ ಬಾಸ್ ಸೀಸನ್ 6’ ಪೂರ್ಣಗೊಂಡಿದೆ. ಗಾಯಕ ಎಲ್​.ವಿ. ರೇವಂತ್ ಅವರು ಫಿನಾಲೆಯಲ್ಲಿ ಗೆದ್ದಿದ್ದಾರೆ. ಈ ಮೂಲಕ ಅವರು ಬಿಗ್ ಬಾಸ್ ಟ್ರೋಫಿ ಎತ್ತಿದ್ದಾರೆ.

ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್ ಫಿನಾಲೆ ನಡೆದಿದೆ. ಎಲ್​.ವಿ. ರೇವಂತ್, ಶ್ರೀಹಾನ್, ಆದಿ ರೆಡ್ಡಿ, ಕೀರ್ತಿ ಭಟ್ ಹಾಗೂ ರೋಹಿತ್ ಸಾಹ್ನಿ ಫಿನಾಲೆ ತಲುಪಿದ್ದರು. ಹೆಚ್ಚು ವೋಟ್ ಪಡೆದು ರೇವಂತ್ ಗೆದ್ದಿದ್ದಾರೆ. ಅವರಿಗೆ ಟ್ರೋಫಿ ಜತೆ 10 ಲಕ್ಷ ರೂಪಾಯಿ ನಗದು, 25 ಲಕ್ಷ ರೂಪಾಯಿ ಮೌಲ್ಯದ ಪ್ರಾಪರ್ಟಿ ಹಾಗೂ ಕಾರು ಬಹುಮಾನವಾಗಿ ಸಿಕ್ಕಿದೆ.

ಫಿನಾಲೆಯಲ್ಲಿ ‘ಧಮಾಕಾ’ ಜೋಡಿ ರವಿ ತೇಜಾ ಹಾಗೂ ಶ್ರೀಲೀಲಾ, ಹಿರಿಯ ನಟಿ ರಾಧಾ, ‘ಕಾರ್ತಿಕೇಯ 2’ ಖ್ಯಾತಿಯ ನಿಖಿಲ್ ಸಿದ್ದಾರ್ಥ್​ ವಿಶೇಷ ಅತಿಥಿಗಳಾಗಿ ‘ಬಿಗ್ ಬಾಸ್​’ ವೇದಿಕೆ ಏರಿದ್ದರು. ಬಾಲಿವುಡ್ ನಟಿ ಊರ್ವಶಿ ರೌಟೇಲಾ ವಿಶೇಷ ಹಾಡಿಗೆ ಹೆಜ್ಜೆ ಹಾಕಿ ಎಲ್ಲರನ್ನೂ ರಂಜಿಸಿದರು.

ತೆಲುಗಿನಲ್ಲಿ ‘ಬಿಗ್ ಬಾಸ್ ಒಟಿಟಿ’ ಶೋ ಪೂರ್ಣಗೊಳ್ಳುತ್ತಿದ್ದಂತೆ ಟಿವಿ ಸೀಸನ್ ಆರಂಭ ಆಯಿತು. 21 ಸ್ಪರ್ಧಿಗಳು ಮನೆ ಸೇರಿದ್ದರು. ಈ ಬಾರಿ ಶೋನ ಅಕ್ಕಿನೇನಿ ನಾಗಾರ್ಜುನ ಅವರೇ ನಡೆಸಿಕೊಟ್ಟಿದ್ದಾರೆ. ರೇವಂತ್ ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆ ಸಲ್ಲಿಕೆ ಆಗುತ್ತಿದೆ.

ಯಾರು ಈ ರೇವಂತ್?

ರೇವಂತ್ ಅವರು ವೃತ್ತಿಯಲ್ಲಿ ಗಾಯಕ. ಅವರು ಕನ್ನಡ ಹಾಗೂ ತಮಿಳು ಹಾಡುಗಳನ್ನು ಹಾಡಿದ್ದಾರೆ. ‘ಇಂಡಿಯನ್ ಐಡಲ್ 9’ರ ವಿನ್ನರ್ ಕೂಡ ಹೌದು. ‘ಬಾಹುಬಲಿ 1’ ಚಿತ್ರದ ‘ಮನೋಹರಿ..’ ಹಾಡನ್ನು ಇವರೇ ಹಾಡಿದ್ದರು. ‘ಕಾಫಿ ವಿಥ್ ಮೈ ವೈಫ್’ ಸೇರಿ ಕೆಲವು ಕನ್ನಡದ ಸಿನಿಮಾದ ಹಾಡುಗಳಿಗೆ ಅವರು ಧ್ವನಿಯಾಗಿದ್ದಾರೆ.

ಬದಲಾಗಲಿದ್ದಾರೆ ನಿರೂಪಕರು?

ಅಕ್ಕಿನೇನಿ ನಾಗಾರ್ಜುನ ಅವರು ತೆಲುಗು ಬಿಗ್​ ಬಾಸ್​ನ ಹಲವು ಸೀಸನ್​ಗಳನ್ನು ನಿರೂಪಣೆ ಮಾಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬೇರೆ ಆ್ಯಂಕರ್​ಗಳು ಬಂದಿದ್ದೂ ಇದೆ. ಆದರೆ, ಅಕ್ಕಿನೇನಿ ನಾಗಾರ್ಜುನ ಅವರಿಗೆ ಹೆಚ್ಚು ಚಾರ್ಮ್ ಇರುವ ಕಾರಣ ಪ್ರತಿ ಬಾರಿ ಅವರಿಗೆ ಮಣೆ ಹಾಕುವ ಕೆಲಸ ಆಗುತ್ತಿದೆ. ಆದರೆ, ತೆಲುಗಿ​ನಲ್ಲಿ ಬಿಗ್ ಬಾಸ್​ಗೆ ಟಿಆರ್​ಪಿ ಕುಸಿದಿದೆ.

ಬಿಗ್ ಬಾಸ್​ ಮನೆ ಒಳಗೆ ಯಾವ ಸ್ಪರ್ಧಿಗಳು ಬರುತ್ತಾರೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಅದರ ಆಧಾರದ ಮೇಲೆ ಟಿಆರ್​ಪಿ ನಿರ್ಧಾರ ಆಗುತ್ತದೆ. ಇನ್ನು ವಾರಾಂತ್ಯದ ಎಪಿಸೋಡ್​ಗೆ ಹೆಚ್ಚಿನ ಟಿಆರ್​ಪಿ ಸಿಗುತ್ತದೆ. ಆದರೆ, ತೆಲುಗಿನಲ್ಲಿ ಈ ಶೋಗೆ ಟಿಆರ್​ಪಿ ಸಿಕ್ಕಿಲ್ಲ. ಇದು ಸ್ಟಾರ್ ಮಾ ವಾಹಿನಯ ಚಿಂತೆಗೆ ಕಾರಣ ಆಗಿದೆ.

ಮೂಲಗಳ ಪ್ರಕಾರ ಮುಂದಿನ ವರ್ಷದಿಂದ ಬೇರೆ ಚಾನೆಲ್​ನಲ್ಲಿ ಬಿಗ್ ಬಾಸ್ ಪ್ರಸಾರ ಕಾಣಲಿದೆ. ಇದರ ಜತೆಗೆ ನಿರೂಪಕರನ್ನು ಬದಲಿಸಲು ಆಲೋಚನೆ ನಡೆದಿದೆ. ಅಕ್ಕಿನೇನಿ ನಾಗಾರ್ಜುನ ಬದಲಿಗೆ ಯಾರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?