AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತ್ನಿ ವಿರುದ್ಧ ದೂರು ನೀಡಿದ ‘ಮಹಾಭಾರತ’ ನಟ ನಿತೀಶ್ ಭಾರಧ್ವಜ್

Nitish Bhardwaj: ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಶ್ರೀಕೃಷ್ಣನ ಪಾತ್ರದಲ್ಲಿ ನಟಿಸಿದ್ದ ನಿತೀಶ್ ಭಾರಧ್ವಾಜ್, ತಮ್ಮ ಮಾಜಿ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಜಿ ಪತ್ನಿ ವಿರುದ್ಧ ದೂರು ನೀಡಿದ ‘ಮಹಾಭಾರತ’ ನಟ ನಿತೀಶ್ ಭಾರಧ್ವಜ್
ಮಂಜುನಾಥ ಸಿ.
|

Updated on: Feb 15, 2024 | 4:36 PM

Share

ಜನಪ್ರಿಯ ಟಿವಿ ಧಾರಾವಾಹಿ (Siral) ‘ಮಹಾಭಾರತ’ದಲ್ಲಿ (Mahabharath) ಶ್ರೀಕೃಷ್ಣನ ಪಾತ್ರದಲ್ಲಿ ನಟಿಸಿದ್ದ ನಿತೇಶ್ ಭಾರಧ್ವಜ್ ತಮ್ಮ ಮಾಜಿ ಪತ್ನಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿತೇಶ್ ಭಾರಧ್ವಜ್, ಐಎಎಸ್ ಅಧಿಕಾರಿ ಸ್ಮಿತಾ ಅವರೊಟ್ಟಿಗೆ ವಿವಾಹವಾಗಿ ಬಳಿಕ ವಿಚ್ಛೇದನ ಪಡೆದುಕೊಂಡಿದ್ದಾರೆ. ತಮ್ಮ ಮಾಜಿ ಪತ್ನಿ ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಭೋಪಾಲದ ಪೊಲೀಸ್ ಆಯುಕ್ತರಿಗೆ ಮಾಜಿ ಪತ್ನಿ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ಮಾಜಿ ಪತ್ನಿ ತಮ್ಮನ್ನು ಮಾನಸಿಕವಾಗಿ ಹಿಂಸಿಸುತ್ತಿರುವುದಲ್ಲದೆ ತಮ್ಮ ಅವಳಿ ಜವಳಿ ಹೆಣ್ಣು ಮಕ್ಕಳನ್ನು ಭೇಟಿ ಆಗಲು ಸಹ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು, ದೂರು ಸ್ವೀಕರಿಸಿರುವ ಭೋಪಾಲ ಪೊಲೀಸ್ ಆಯುಕ್ತ ಹರಿನಾರಾಯಣಾಚಾರಿ ಮಿಶ್ರಾ ತನಿಖೆಗೆ ಆದೇಶಿಸಿದ್ದಾರೆ. ಎಡಿಸಿಪಿ ಶಾಲಿನಿ ದೀಕ್ಷಿತ್ ಅವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಆಯುಕ್ತ ಹರಿನಾರಾಯಣಾಚಾರಿ ಮಿಶ್ರಾ, ‘ನಿತೀಶ್ ಭಾರಧ್ವಜ್ ಅವರಿಂದ ದೂರು ಸ್ವೀಕರಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಚಾಲ್ತಿಯಲ್ಲಿದೆ’ ಎಂದಿದ್ದಾರೆ.

ಇದನ್ನೂ ಓದಿ:ಕಿರುತೆರೆ ನಟ ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರ ಆರೋಪ; ಸದಸ್ಯರಿಂದ ದೂರು

ಟಿವಿ ಲೋಕದ ಅತ್ಯಂತ ಜನಪ್ರಿಯ ಧಾರಾವಾಹಿ ಆಗಿದ್ದ ‘ಮಹಾಭಾರತ’ದಲ್ಲಿ ನಿತೀಶ್ ಭಾರಧ್ವಾಜ್ ಶ್ರೀಕೃಷ್ಣನ ಪಾತ್ರದಲ್ಲಿ ನಟಿಸಿದ್ದರು. ಆ ಪಾತ್ರದ ಮೂಲಕ ಭಾರಿ ಜನಪ್ರಿಯತೆಯನ್ನು ಅವರು ಗಳಿಸಿದ್ದರು. ನಿತೀಶ್ ಹಾಗೂ ಐಎಎಸ್ ಅಧಿಕಾರಿ ಸ್ಮಿತಾ ಪರಸ್ಪರ ಪ್ರೀತಿಸಿ 2009 ರಲ್ಲಿ ಮಧ್ಯ ಪ್ರದೇಶದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. 12 ವರ್ಷಗಳ ದಾಂಪತ್ಯದ ಬಳಿಕ 2019ರಲ್ಲಿ ಈ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು, 2022ರಲ್ಲಿ ಇವರಿಗೆ ವಿಚ್ಛೇದನ ದೊರಕಿತು.

ಸ್ಮಿತಾ ಹಾಗೂ ನಿತೀಶ್ ಭಾರಧ್ವಜ್​ಗೆ ಇಬ್ಬರು ಪುತ್ರಿಯರಿದ್ದಾರೆ. ಅವಳಿ-ಜವಳಿ ಆಗಿರುವ ಮಕ್ಕಳಿಬ್ಬರಿಗೂ 11 ವರ್ಷ ವಯಸ್ಸು. ವಿಚ್ಛೇದನದ ಬಳಿಕ ಸ್ಮಿತಾ ಮಕ್ಕಳೊಟ್ಟಿಗೆ ಇಂಧೋರ್​ನಲ್ಲಿ ನೆಲೆಸಿದ್ದಾರೆ. ಇದೀಗ ನಿತೀಶ್ ಭಾರಧ್ವಜ್​ರ ದೂರಿನ ಪ್ರಕಾರ, ತಮ್ಮ ಮಾಜಿ ಪತ್ನಿ ಸ್ಮಿತಾ ತಮ್ಮ ಮಕ್ಕಳನ್ನು ಭೇಟಿ ಆಗಲು ಅವಕಾಶ ನೀಡುತ್ತಿಲ್ಲವಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್