AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪತ್ನಿ ವಿರುದ್ಧ ದೂರು ನೀಡಿದ ‘ಮಹಾಭಾರತ’ ನಟ ನಿತೀಶ್ ಭಾರಧ್ವಜ್

Nitish Bhardwaj: ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಶ್ರೀಕೃಷ್ಣನ ಪಾತ್ರದಲ್ಲಿ ನಟಿಸಿದ್ದ ನಿತೀಶ್ ಭಾರಧ್ವಾಜ್, ತಮ್ಮ ಮಾಜಿ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಜಿ ಪತ್ನಿ ವಿರುದ್ಧ ದೂರು ನೀಡಿದ ‘ಮಹಾಭಾರತ’ ನಟ ನಿತೀಶ್ ಭಾರಧ್ವಜ್
ಮಂಜುನಾಥ ಸಿ.
|

Updated on: Feb 15, 2024 | 4:36 PM

Share

ಜನಪ್ರಿಯ ಟಿವಿ ಧಾರಾವಾಹಿ (Siral) ‘ಮಹಾಭಾರತ’ದಲ್ಲಿ (Mahabharath) ಶ್ರೀಕೃಷ್ಣನ ಪಾತ್ರದಲ್ಲಿ ನಟಿಸಿದ್ದ ನಿತೇಶ್ ಭಾರಧ್ವಜ್ ತಮ್ಮ ಮಾಜಿ ಪತ್ನಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿತೇಶ್ ಭಾರಧ್ವಜ್, ಐಎಎಸ್ ಅಧಿಕಾರಿ ಸ್ಮಿತಾ ಅವರೊಟ್ಟಿಗೆ ವಿವಾಹವಾಗಿ ಬಳಿಕ ವಿಚ್ಛೇದನ ಪಡೆದುಕೊಂಡಿದ್ದಾರೆ. ತಮ್ಮ ಮಾಜಿ ಪತ್ನಿ ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಭೋಪಾಲದ ಪೊಲೀಸ್ ಆಯುಕ್ತರಿಗೆ ಮಾಜಿ ಪತ್ನಿ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ಮಾಜಿ ಪತ್ನಿ ತಮ್ಮನ್ನು ಮಾನಸಿಕವಾಗಿ ಹಿಂಸಿಸುತ್ತಿರುವುದಲ್ಲದೆ ತಮ್ಮ ಅವಳಿ ಜವಳಿ ಹೆಣ್ಣು ಮಕ್ಕಳನ್ನು ಭೇಟಿ ಆಗಲು ಸಹ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು, ದೂರು ಸ್ವೀಕರಿಸಿರುವ ಭೋಪಾಲ ಪೊಲೀಸ್ ಆಯುಕ್ತ ಹರಿನಾರಾಯಣಾಚಾರಿ ಮಿಶ್ರಾ ತನಿಖೆಗೆ ಆದೇಶಿಸಿದ್ದಾರೆ. ಎಡಿಸಿಪಿ ಶಾಲಿನಿ ದೀಕ್ಷಿತ್ ಅವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಆಯುಕ್ತ ಹರಿನಾರಾಯಣಾಚಾರಿ ಮಿಶ್ರಾ, ‘ನಿತೀಶ್ ಭಾರಧ್ವಜ್ ಅವರಿಂದ ದೂರು ಸ್ವೀಕರಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಚಾಲ್ತಿಯಲ್ಲಿದೆ’ ಎಂದಿದ್ದಾರೆ.

ಇದನ್ನೂ ಓದಿ:ಕಿರುತೆರೆ ನಟ ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರ ಆರೋಪ; ಸದಸ್ಯರಿಂದ ದೂರು

ಟಿವಿ ಲೋಕದ ಅತ್ಯಂತ ಜನಪ್ರಿಯ ಧಾರಾವಾಹಿ ಆಗಿದ್ದ ‘ಮಹಾಭಾರತ’ದಲ್ಲಿ ನಿತೀಶ್ ಭಾರಧ್ವಾಜ್ ಶ್ರೀಕೃಷ್ಣನ ಪಾತ್ರದಲ್ಲಿ ನಟಿಸಿದ್ದರು. ಆ ಪಾತ್ರದ ಮೂಲಕ ಭಾರಿ ಜನಪ್ರಿಯತೆಯನ್ನು ಅವರು ಗಳಿಸಿದ್ದರು. ನಿತೀಶ್ ಹಾಗೂ ಐಎಎಸ್ ಅಧಿಕಾರಿ ಸ್ಮಿತಾ ಪರಸ್ಪರ ಪ್ರೀತಿಸಿ 2009 ರಲ್ಲಿ ಮಧ್ಯ ಪ್ರದೇಶದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. 12 ವರ್ಷಗಳ ದಾಂಪತ್ಯದ ಬಳಿಕ 2019ರಲ್ಲಿ ಈ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು, 2022ರಲ್ಲಿ ಇವರಿಗೆ ವಿಚ್ಛೇದನ ದೊರಕಿತು.

ಸ್ಮಿತಾ ಹಾಗೂ ನಿತೀಶ್ ಭಾರಧ್ವಜ್​ಗೆ ಇಬ್ಬರು ಪುತ್ರಿಯರಿದ್ದಾರೆ. ಅವಳಿ-ಜವಳಿ ಆಗಿರುವ ಮಕ್ಕಳಿಬ್ಬರಿಗೂ 11 ವರ್ಷ ವಯಸ್ಸು. ವಿಚ್ಛೇದನದ ಬಳಿಕ ಸ್ಮಿತಾ ಮಕ್ಕಳೊಟ್ಟಿಗೆ ಇಂಧೋರ್​ನಲ್ಲಿ ನೆಲೆಸಿದ್ದಾರೆ. ಇದೀಗ ನಿತೀಶ್ ಭಾರಧ್ವಜ್​ರ ದೂರಿನ ಪ್ರಕಾರ, ತಮ್ಮ ಮಾಜಿ ಪತ್ನಿ ಸ್ಮಿತಾ ತಮ್ಮ ಮಕ್ಕಳನ್ನು ಭೇಟಿ ಆಗಲು ಅವಕಾಶ ನೀಡುತ್ತಿಲ್ಲವಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?