AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾಭಾರತ​’ ಸೀರಿಯಲ್​ ಅರ್ಜುನ ಪಾತ್ರಧಾರಿ ಶಾಹೀರ್ ಶೇಖ್​ ತಂದೆ ಕೊವಿಡ್​ನಿಂದ ನಿಧನ

ಶಾಹೀರ್ ಶೇಖ್​ ತಂದೆ ಕೊರೊನಾ ವೈರಸ್​ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಕೊವಿಡ್​ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿಷಯವನ್ನು ಒಂದು ದಿನ ಮುಂಚೆಯಷ್ಟೇ ಶಾಹೀರ್ ಶೇಖ್ ತಿಳಿಸಿದ್ದರು.

‘ಮಹಾಭಾರತ​’ ಸೀರಿಯಲ್​ ಅರ್ಜುನ ಪಾತ್ರಧಾರಿ ಶಾಹೀರ್ ಶೇಖ್​ ತಂದೆ ಕೊವಿಡ್​ನಿಂದ ನಿಧನ
ಶಾಹೀರ್ ಶೇಖ್ ಅವರ ತಂದೆ ಕೊರೊನಾ ವೈರಸ್​ನಿಂದ ಪ್ರಾಣ ಕಳೆದುಕೊಂಡಿದ್ದಾರೆ
TV9 Web
| Edited By: |

Updated on:Jan 20, 2022 | 12:47 PM

Share

ಕೊರೊನಾ ವೈರಸ್ (Covid 19)​ ಹಾವಳಿಗೆ ಅನೇಕ ಜೀವಗಳು ಬಲಿ ಆಗುತ್ತಿವೆ. ಸೆಲೆಬ್ರಿಟಿಗಳ ವಲಯದಲ್ಲಿ ಅನೇಕರಿಗೆ ಕೊರೊನಾ ವೈರಸ್​ ತಗುಲಿದೆ. ಕನ್ನಡ ಚಿತ್ರರಂಗದ ನಿರ್ದೇಶಕ ಪ್ರದೀಪ್​ ರಾಜ್​ ಅವರು ಕೊವಿಡ್​ನಿಂದ ನಿಧನರಾದ ಸುದ್ದಿ ಮುಂಜಾನೆಯಷ್ಟೇ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಮತ್ತೊಂದು ಕಹಿ ಸುದ್ದಿ ಹೊರಬಿದ್ದಿದೆ. ‘ಮಹಾಭಾರತ’ (Mahabharat Serial) ಹಿಂದಿ ಸೀರಿಯಲ್​ನಲ್ಲಿ ಅರ್ಜುನನ ಪಾತ್ರ ಮಾಡುವ ಮೂಲಕ ಫೇಮಸ್​ ಆದ ನಟ ಶಾಹೀರ್ ಶೇಖ್​ ಅವರ ತಂದೆ ಕೂಡ ಕೊರೊನಾ ವೈರಸ್​ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಕೊವಿಡ್​ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿಷಯವನ್ನು ಒಂದು ದಿನ ಮುಂಚೆಯಷ್ಟೇ ಶಾಹೀರ್ ಶೇಖ್​ (Shaheer Sheikh) ತಿಳಿಸಿದ್ದರು. ತಂದೆಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಅವರು ವಿನಂತಿಸಿಕೊಂಡಿದ್ದರು. ಆದರೆ ಇಂದು ತಂದೆಯನ್ನು ಕಳೆದುಕೊಂಡು ಅವರು ತೀವ್ರ ದುಃಖದಲ್ಲಿದ್ದಾರೆ. ಅವರ ಕುಟುಂಬಕ್ಕೆ ಸ್ನೇಹಿತರು ಮತ್ತು ಅಭಿಮಾನಿಗಳು ಸಾಂತ್ವನ ಹೇಳುತ್ತಿದ್ದಾರೆ.

ಹಿಂದಿ ಕಿರುತೆರೆಯಲ್ಲಿ ಶಾಹೀರ್ ಶೇಖ್​ ತುಂಬಾ ಫೇಮಸ್​. ಕ್ಯಾ ಮಸ್ತ್​ ಹೈ ಲೈಫ್​, ಝಾನ್ಸಿ ಕಿ ರಾಣಿ, ಕುಚ್​ ರಂಗ್​ ಪ್ಯಾರ್​ ಕೆ ಐಸಾ ಬಿ ಮುಂತಾದ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದಾರೆ. 2013-14ರಲ್ಲಿ ಪ್ರಸಾರವಾದ ‘ಮಹಾಭಾರತ’ ಧಾರಾವಾಹಿಯಲ್ಲಿ ಅರ್ಜುನನ ಪಾತ್ರ ಮಾಡುವ ಮೂಲಕ ಶಾಹೀರ್ ಶೇಖ್​ ಹೆಚ್ಚು ಜನಪ್ರಿಯತೆ ಪಡೆದರು. ಈ ಧಾರಾವಾಹಿ ಕನ್ನಡಕ್ಕೂ ಡಬ್​ ಆಗಿ ಪ್ರಸಾರ ಕಂಡಿದೆ. ಆ ಮೂಲಕ ಕನ್ನಡದ ಪ್ರೇಕ್ಷಕರಿಗೂ ಶಾಹೀರ್ ಶೇಖ್​ ಪರಿಚಿತರಾಗಿದ್ದಾರೆ. ಅವರ ತಂದೆಯ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

‘ನನ್ನ ತಂದೆ ವೆಂಟಿಲೇಟರ್​ನಲ್ಲಿದ್ದಾರೆ. ಕೊವಿಡ್ ಸೋಂಕಿನಿಂದ ಅವರು ತೀವ್ರವಾಗಿ ಬಳಲುತ್ತಿದ್ದಾರೆ. ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ’ ಎಂದು ಜ.19ರಂದು ಶಾಹೀರ್ ಶೇಖ್​ ಟ್ವೀಟ್​ ಮಾಡಿದ್ದರು. ಆದರೆ ಯಾರ ಪ್ರಾರ್ಥನೆಯೂ ಫಲಿಸಿಲ್ಲ. ಕೊರೊನಾ ವೈರಸ್​ಗೆ ಅವರ ತಂದೆ ಬಲಿಯಾಗಿದ್ದಾರೆ. ಈ ಸುದ್ದಿಯನ್ನು ನಟ ಅಲಿ ಗೊನಿ ಖಚಿತ ಪಡಿಸಿದ್ದಾರೆ. ‘ಅಂಕಲ್​ ಆತ್ಮಕ್ಕೆ ಆ ದೇವರು ಶಾಂತಿ ನೀಡಲಿ. ಶಾಹೀರ್ ಶೇಖ್​ ಧೈರ್ಯದಿಂದಿರಿ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

Pradeep Raj Death: ಕೊರೊನಾ ಸೋಂಕಿನಿಂದ ‘ಕಿರಾತಕ’ ಚಿತ್ರದ​ ನಿರ್ದೇಶಕ ಪ್ರದೀಪ್​ ರಾಜ್​ ನಿಧನ

ಕೊರೊನಾ 3ನೇ ಅಲೆ ಉತ್ತುಂಗದಲ್ಲಿ ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು: ಆರೋಗ್ಯ ಸಚಿವ ಸುಧಾಕರ

Published On - 12:46 pm, Thu, 20 January 22

2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!