AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾಭಾರತ’ ಸೀರಿಯಲ್​​ ಕೃಷ್ಣ ಪಾತ್ರಧಾರಿ ನಿತೀಶ್​ ಭಾರದ್ವಜ್​ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಅರ್ಜಿ​

Nitish Bhardwaj Divorce: 2009ರಲ್ಲಿ ನಿತೀಶ್​​ ಭಾರದ್ವಜ್​ ಮತ್ತು ಸ್ಮಿತಾ ವಿವಾಹ ನೆರವೇರಿತ್ತು. ಇತ್ತೀಚಿನ ವರ್ಷಗಳಲ್ಲಿ ಇವರಿಬ್ಬರ ನಡುವೆ ವೈಮನಸ್ಸು ಉಂಟಾಗಿದೆ.

‘ಮಹಾಭಾರತ’ ಸೀರಿಯಲ್​​ ಕೃಷ್ಣ ಪಾತ್ರಧಾರಿ ನಿತೀಶ್​ ಭಾರದ್ವಜ್​ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಅರ್ಜಿ​
ನಿತೀಶ್ ಭಾರದ್ವಜ್
TV9 Web
| Edited By: |

Updated on: Jan 19, 2022 | 11:30 AM

Share

ಸೆಲೆಬ್ರಿಟಿಗಳು ವಿಚ್ಛೇದನ (Divorce) ಪಡೆಯುತ್ತಿರುವ ಸುದ್ದಿ ಪದೇಪದೇ ಕೇಳಿಬರುತ್ತಿದೆ. ಆಮಿರ್​ ಖಾನ್​-ಕಿರಣ್​ ರಾವ್​, ಸಮಂತಾ-ನಾಗ ಚೈತನ್ಯ, ಧನುಷ್​-ಐಶ್ವರ್ಯಾ ಸೇರಿದಂತೆ ಅನೇಕ ಸ್ಟಾರ್​ ದಂಪತಿಗಳು ಡಿವೋರ್ಸ್​ ಪಡೆಯುವ ಮೂಲಕ ಸುದ್ದಿ ಆಗಿದ್ದಾರೆ. ಆ ಸಾಲಿಗೆ ಖ್ಯಾತ ಕಿರುತೆರೆ ನಟ ನಿತೀಶ್​​ ಭಾರದ್ವಜ್​ (Nitish Bhardwaj) ಕೂಡ ಸೇರ್ಪಡೆ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ‘ಮಹಾಭಾರತ’ (Mahabharata Serial) ಸೀರಿಯಲ್​ನಲ್ಲಿ ಕೃಷ್ಣನ ಪಾತ್ರ ಮಾಡುವ ಮೂಲಕ ಫೇಮಸ್​ ಆದವರು ನಿತೀಶ್​​ ಭಾರದ್ವಜ್​. ಈಗ ಅವರಿಗೆ 58 ವರ್ಷ ವಯಸ್ಸು. ತಮ್ಮ ಎರಡನೇ ಪತ್ನಿ ಸ್ಮಿತಾ ಅವರಿಂದ ವಿಚ್ಛೇದನ ಪಡೆಯಲು 2019ರಲ್ಲೇ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದಾಗಿ ನಿತೀಶ್​​ ತಿಳಿಸಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ವಿಚಾರ ಬಾಯಿಬಿಟ್ಟಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಅಚ್ಚರಿ ಹೊರಹಾಕಿದ್ದಾರೆ. ಸೆಲೆಬ್ರಿಟಿಗಳು ಸಾಲು ಸಾಲಾಗಿ ವಿಚ್ಛೇದನ ಪಡೆಯುತ್ತಿರುವುದರಿಂದ ‘ಡಿವೋರ್ಸ್​ ಎಂಬುದು ಹೊಸ ಟ್ರೆಂಡ್​ ಆಗಿದೆ’ ಎಂದು ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ. ಈವರೆಗೂ ವಿಚ್ಛೇದನ ಪಡೆದ ಅನೇಕ ಸೆಲೆಬ್ರಿಟಿಗಳ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ನಿತೀಶ್​ ಭಾರದ್ವಜ್​ ಅವರು 1991ರಲ್ಲಿ ಮೋನಿಷಾ ಪಾಟಿಲ್​ ಜೊತೆ ಮದುವೆ ಆಗಿದ್ದರು. ನಂತರ 2005ರಲ್ಲಿ ವಿಚ್ಛೇದನ ಪಡೆಯುವ ಮೂಲಕ ಅವರಿಬ್ಬರ ದಾಂಪತ್ಯ ಜೀವನ ಅಂತ್ಯವಾಗಿತ್ತು. ಬಳಿಕ 2009ರಲ್ಲಿ ನಿತೀಶ್​​ ಭಾರದ್ವಜ್​ ಮತ್ತು ಸ್ಮಿತಾ ವಿವಾಹ ನೆರವೇರಿತು. ಇತ್ತೀಚಿನ ವರ್ಷಗಳಲ್ಲಿ ಇವರಿಬ್ಬರ ನಡುವೆ ವೈಮನಸ್ಸು ಉಂಟಾಗಿದೆ. ಹಾಗಾಗಿ ಜೀವನದ ಪಯಣದಲ್ಲಿ ಬೇರೆ ಬೇರೆಯಾಗಲು ಅವರು ನಿರ್ಧರಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿ ಸ್ಮಿತಾ ಸೇವೆ ಸಲ್ಲಿಸಿದ್ದಾರೆ. ಸ್ಮಿತಾ ಹಾಗೂ ನಿತೀಶ್​​ ಜೋಡಿಗೆ ಇಬ್ಬರು ಅವಳಿ ಹೆಣ್ಣು ಮಕ್ಕಳಿದ್ದಾರೆ. ಮೊದಲ ಪತ್ನಿಯಿಂದ ನಿತೀಶ್​​ ಅವರು ಇಬ್ಬರು ಮಕ್ಕಳನ್ನು ಪಡೆದಿದ್ದರು.

ಬಿ.ಆರ್​. ಚೋಪ್ರಾ ನಿರ್ದೇಶನದ ಮಹಾಭಾರತ ಸೀರಿಯಲ್​ 1988ರಲ್ಲಿ ಪ್ರಸಾರ ಆರಂಭಿಸಿತು. ಆ ಧಾರಾವಾಹಿಯಲ್ಲಿ ಕೃಷ್ಣನ ಪಾತ್ರ ಮಾಡುವ ಮೂಲಕ ರಾತ್ರೋರಾತ್ರಿ ನಿತೀಶ್​​ ಭಾರದ್ವಜ್​ ಸ್ಟಾರ್​ ಆಗಿ ಬಿಟ್ಟರು. ಆ ಪಾತ್ರ ಮಾಡಿದಾಗ ಅವರಿಗೆ ಕೇವಲ 23 ವರ್ಷ ವಯಸ್ಸು. ನಂತರ 2000ನೇ ಇಸವಿಯಲ್ಲಿ ಪ್ರಸಾರವಾದ ‘ವಿಷ್ಣು ಪುರಾಣ’ ಧಾರಾವಾಹಿಯಲ್ಲಿ ವಿಷ್ಣು ಪಾತ್ರವನ್ನು ನಿತೀಶ್​​ ಮಾಡಿದರು. ವಿಷ್ಣುವಿನ ಹಲವು ಅವತಾರಗಳಲ್ಲಿ ಅವರು ಕಾಣಿಸಿಕೊಂಡರು. 2002ರ ‘ರಾಮಾಯಣ’ ಸೀರಿಯಲ್​ನಲ್ಲಿ ಅವರು ರಾಮ ಮತ್ತು ವಿಷ್ಣು ಪಾತ್ರವನ್ನು ಮಾಡಿದರು. ‘ಗೀತ ರಹಸ್ಯ’ ಮತ್ತು ‘ಅಪರಾಧಿ’ ಸೀರಿಯಲ್​ಗಳನ್ನು ನಿತೀಶ್​​ ನಿರ್ದೇಶನ ಮಾಡಿದ್ದಾರೆ. ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ ಅನುಭವವೂ ಅವರಿಗೆ ಇದೆ. ಈಗ ವಿಚ್ಛೇದನದ ಕಾರಣಕ್ಕೆ ಅವರು ಸುದ್ದಿ ಆಗುತ್ತಿದ್ದಾರೆ.

ಇದನ್ನೂ ಓದಿ:

ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

‘ಅವನಿಗೆ ನನ್ನ ಬಗ್ಗೆಯೇ ಹೆಚ್ಚು ಚಿಂತೆ ಆಗಿತ್ತು’; ಮಗನ ಡಿವೋರ್ಸ್​ ಬಗ್ಗೆ ಬಾಯ್ಬಿಟ್ಟ ನಾಗಾರ್ಜುನ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ