ಬಿಗ್​ ಬಾಸ್​ಗೆ ಬರ್ತಾರಾ ಈ ಸೂಪರ್​ ಸ್ಟಾರ್​? ಜೋರಾಗಿ ಹಬ್ಬಿದೆ ಗುಸುಗುಸು

ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಕಿರುತೆರೆಯ ಮಂದಿ ಮಾತ್ರವಲ್ಲದೇ ಸಿನಿಮಾದವರು ಕೂಡ ಈ ಶೋ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಈ ರಿಯಾಲಿಟಿ ಶೋನ ರೋಚಕತೆ ಹೆಚ್ಚಾಗುತ್ತಿದೆ. ಬಗೆಬಗೆಯ ಟಾಸ್ಕ್​ಗಳನ್ನು ನೀಡುವ ಮೂಲಕ ಜನರನ್ನು ಸೆಳೆಯಲು ಪ್ರಯತ್ನಿಸಲಾಗುತ್ತಿದೆ.

ಬಿಗ್​ ಬಾಸ್​ಗೆ ಬರ್ತಾರಾ ಈ ಸೂಪರ್​ ಸ್ಟಾರ್​? ಜೋರಾಗಿ ಹಬ್ಬಿದೆ ಗುಸುಗುಸು
ಬಿಗ್​ ಬಾಸ್​
Follow us
|

Updated on: Dec 14, 2023 | 11:58 AM

ಕಿರುತೆರೆ ಪ್ರೇಕ್ಷಕರಿಗೆ ಬಿಗ್ ಬಾಸ್​ (Bigg Boss) ಕಾರ್ಯಕ್ರಮದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಈಗ ಒಟಿಟಿ ಕ್ಷೇತ್ರಕ್ಕೂ ಬಿಗ್ ಬಾಸ್​ ಖ್ಯಾತಿ ವ್ಯಾಪಿಸಿದೆ. ಅನೇಕ ಸಿನಿಮಾ ಸೆಲೆಬ್ರಿಟಿಗಳು ದೊಡ್ಮನೆಗೆ ಬಂದು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇನ್ನು ಕೆಲವರು ಸಿನಿಮಾದ ಪ್ರಚಾರದ ಸಲುವಾಗಿ ಬಿಗ್​ ಬಾಸ್​ ರಿಯಾಲಿಟಿ ಶೋಗೆ ಆಗಮಿಸಿದ್ದುಂಟು. ಈಗ ಮಹೇಶ್​ ಬಾಬು (Mahesh Babu) ಕೂಡ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ‘ಗುಂಟೂರು ಖಾರಂ’ (Guntur Kaaram) ಚಿತ್ರದ ಪ್ರಚಾರದ ಸಲುವಾಗಿ ಅವರು ತೆಲುಗು ಬಿಗ್​ ಬಾಸ್​ ವೇದಿಕೆಗೆ ಬರುತ್ತಾರೆ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಹೇಳಿಕೆ ಹೊರಬರಬೇಕಿದೆ.

ನಟ ಅಕ್ಕಿನೇನಿ ನಾಗಾರ್ಜುನ ಅವರು ‘ಬಿಗ್​ ಬಾಸ್​ ತೆಲುಗು ಸೀಸನ್​ 7’ ನಡೆಸಿಕೊಡುತ್ತಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ಈ ಶೋ ಅಂತ್ಯವಾಗಲಿದೆ. ಇದರ ಫಿನಾಲೆ ಎಪಿಸೋಡ್​ನಲ್ಲಿ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ತಂಡದ ಜೊತೆ ಬಿಗ್​ ಬಾಸ್​ ವೇದಿಕೆ ಏರುವ ಸಾಧ್ಯತೆ ಇದೆ. ಈ ಸಿನಿಮಾ 2024ರ ಜನವರಿ 12ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯ ವಸ್ತುಗಳು ಚೆಲ್ಲಾಪಿಲ್ಲಿ; ಏನೂ ಮಾಡಲಾಗದೇ ಅಸಹಾಯಕ ಸ್ಥಿತಿಗೆ ತಲುಪಿದ ವಿನಯ್​

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಮೀನಾಕ್ಷಿ ಚೌದರಿ, ಶ್ರೀಲೀಲಾ, ರಮ್ಯಾ ಕೃಷ್ಣ, ಪ್ರಕಾಶ್​ ರಾಜ್​, ಜಗಪತಿ ಬಾಬು ಮುಂತಾದವರು ನಟಿಸಿದ್ದಾರೆ. ತ್ರಿವಿಕ್ರಮ್​ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಸಖತ್​ ಮಾಸ್​ ಆಗಿ ಈ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಪ್ರಮೋಷನ್​ ಚಟುವಟಿಕೆಗಳಿಗೆ ಚಿತ್ರತಂಡದವರು ಚಾಲನೆ ನೀಡಿದ್ದಾರೆ. ಈ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಈವರೆಗೆ ಯಾರೂ ನೋಡಿರದ ಬಿಗ್​ ಬಾಸ್​ ಈ ರೀತಿ ಇದ್ದಾರಾ? ಬಯಲಾಗಿದೆ ಸ್ಕೆಚ್​

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ 2022ರ ಜನವರಿಯಲ್ಲಿ ತೆರೆಕಂಡಿತ್ತು. 2023ರಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆ ಆಗಲಿಲ್ಲ. ಇದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಎರಡು ವರ್ಷಗಳ ಬಳಿಕ, ಅಂದರೆ 2024ರ ಜನವರಿ 12ರಂದು ಮಹೇಶ್ ಬಾಬು ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲಿರುವುದರಿಂದ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು