AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ಗೆ ಬರ್ತಾರಾ ಈ ಸೂಪರ್​ ಸ್ಟಾರ್​? ಜೋರಾಗಿ ಹಬ್ಬಿದೆ ಗುಸುಗುಸು

ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಕಿರುತೆರೆಯ ಮಂದಿ ಮಾತ್ರವಲ್ಲದೇ ಸಿನಿಮಾದವರು ಕೂಡ ಈ ಶೋ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಈ ರಿಯಾಲಿಟಿ ಶೋನ ರೋಚಕತೆ ಹೆಚ್ಚಾಗುತ್ತಿದೆ. ಬಗೆಬಗೆಯ ಟಾಸ್ಕ್​ಗಳನ್ನು ನೀಡುವ ಮೂಲಕ ಜನರನ್ನು ಸೆಳೆಯಲು ಪ್ರಯತ್ನಿಸಲಾಗುತ್ತಿದೆ.

ಬಿಗ್​ ಬಾಸ್​ಗೆ ಬರ್ತಾರಾ ಈ ಸೂಪರ್​ ಸ್ಟಾರ್​? ಜೋರಾಗಿ ಹಬ್ಬಿದೆ ಗುಸುಗುಸು
ಬಿಗ್​ ಬಾಸ್​
ಮದನ್​ ಕುಮಾರ್​
|

Updated on: Dec 14, 2023 | 11:58 AM

Share

ಕಿರುತೆರೆ ಪ್ರೇಕ್ಷಕರಿಗೆ ಬಿಗ್ ಬಾಸ್​ (Bigg Boss) ಕಾರ್ಯಕ್ರಮದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಈಗ ಒಟಿಟಿ ಕ್ಷೇತ್ರಕ್ಕೂ ಬಿಗ್ ಬಾಸ್​ ಖ್ಯಾತಿ ವ್ಯಾಪಿಸಿದೆ. ಅನೇಕ ಸಿನಿಮಾ ಸೆಲೆಬ್ರಿಟಿಗಳು ದೊಡ್ಮನೆಗೆ ಬಂದು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇನ್ನು ಕೆಲವರು ಸಿನಿಮಾದ ಪ್ರಚಾರದ ಸಲುವಾಗಿ ಬಿಗ್​ ಬಾಸ್​ ರಿಯಾಲಿಟಿ ಶೋಗೆ ಆಗಮಿಸಿದ್ದುಂಟು. ಈಗ ಮಹೇಶ್​ ಬಾಬು (Mahesh Babu) ಕೂಡ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ‘ಗುಂಟೂರು ಖಾರಂ’ (Guntur Kaaram) ಚಿತ್ರದ ಪ್ರಚಾರದ ಸಲುವಾಗಿ ಅವರು ತೆಲುಗು ಬಿಗ್​ ಬಾಸ್​ ವೇದಿಕೆಗೆ ಬರುತ್ತಾರೆ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಹೇಳಿಕೆ ಹೊರಬರಬೇಕಿದೆ.

ನಟ ಅಕ್ಕಿನೇನಿ ನಾಗಾರ್ಜುನ ಅವರು ‘ಬಿಗ್​ ಬಾಸ್​ ತೆಲುಗು ಸೀಸನ್​ 7’ ನಡೆಸಿಕೊಡುತ್ತಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ಈ ಶೋ ಅಂತ್ಯವಾಗಲಿದೆ. ಇದರ ಫಿನಾಲೆ ಎಪಿಸೋಡ್​ನಲ್ಲಿ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ತಂಡದ ಜೊತೆ ಬಿಗ್​ ಬಾಸ್​ ವೇದಿಕೆ ಏರುವ ಸಾಧ್ಯತೆ ಇದೆ. ಈ ಸಿನಿಮಾ 2024ರ ಜನವರಿ 12ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯ ವಸ್ತುಗಳು ಚೆಲ್ಲಾಪಿಲ್ಲಿ; ಏನೂ ಮಾಡಲಾಗದೇ ಅಸಹಾಯಕ ಸ್ಥಿತಿಗೆ ತಲುಪಿದ ವಿನಯ್​

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಮೀನಾಕ್ಷಿ ಚೌದರಿ, ಶ್ರೀಲೀಲಾ, ರಮ್ಯಾ ಕೃಷ್ಣ, ಪ್ರಕಾಶ್​ ರಾಜ್​, ಜಗಪತಿ ಬಾಬು ಮುಂತಾದವರು ನಟಿಸಿದ್ದಾರೆ. ತ್ರಿವಿಕ್ರಮ್​ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಸಖತ್​ ಮಾಸ್​ ಆಗಿ ಈ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಪ್ರಮೋಷನ್​ ಚಟುವಟಿಕೆಗಳಿಗೆ ಚಿತ್ರತಂಡದವರು ಚಾಲನೆ ನೀಡಿದ್ದಾರೆ. ಈ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಈವರೆಗೆ ಯಾರೂ ನೋಡಿರದ ಬಿಗ್​ ಬಾಸ್​ ಈ ರೀತಿ ಇದ್ದಾರಾ? ಬಯಲಾಗಿದೆ ಸ್ಕೆಚ್​

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ 2022ರ ಜನವರಿಯಲ್ಲಿ ತೆರೆಕಂಡಿತ್ತು. 2023ರಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆ ಆಗಲಿಲ್ಲ. ಇದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಎರಡು ವರ್ಷಗಳ ಬಳಿಕ, ಅಂದರೆ 2024ರ ಜನವರಿ 12ರಂದು ಮಹೇಶ್ ಬಾಬು ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲಿರುವುದರಿಂದ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ