AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಆಗುತ್ತಿದೆ ‘ಮಜಾ ಟಾಕೀಸ್’; ಈ ವಾರ ಫಿನಾಲೆ ವೀಕ್

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮವಾದ "ಮಜಾ ಟಾಕೀಸ್" ಈ ವಾರ ತನ್ನ ಗ್ರ್ಯಾಂಡ್ ಫಿನಾಲೆಯನ್ನು ಆಚರಿಸಲಿದೆ. ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಈ ಕಾರ್ಯಕ್ರಮವು ಅನೇಕ ಪ್ರತಿಭಾವಂತ ಕಲಾವಿದರನ್ನು ಪರಿಚಯಿಸಿದೆ. ಫಿನಾಲೆ ವಾರದಲ್ಲಿ ದೊಡ್ಡಣ್ಣ ಮತ್ತು ಚಿಕ್ಕಣ್ಣ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕೊನೆ ಆಗುತ್ತಿದೆ ‘ಮಜಾ ಟಾಕೀಸ್’; ಈ ವಾರ ಫಿನಾಲೆ ವೀಕ್
ಮಜಾ ಟಾಕೀಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 30, 2025 | 10:06 AM

Share

ಇಷ್ಟು ವರ್ಷಗಳ ಕಾಲ ಸೃಜನ್ ಲೋಕೇಶ್ (Srujan Lokesh) ಅವರು ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದ್ದುಕೊಂಡು ನಗಿಸುವ ಕೆಲಸ ಮಾಡಿದ್ದಾರೆ. ಜನವರಿಯಲ್ಲಿ ಅವರ ನೇತೃತ್ವದ ‘ಮಜಾ ಟಾಕೀಸ್’ ಶೋ ಆರಂಭ ಆಗಿತ್ತು. ಈಗ ಈ ಶೋ ಕೊನೆ ಆಗುತ್ತಿದೆ. ಈ ಬಗ್ಗೆ ವಾಹಿನಿ ಕಡೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಈ ವಾರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ ಎಂದು ವಾಹಿನಿಯವರು ಮಾಹಿತಿ ನೀಡಿದ್ದಾರೆ.

‘ಮಜಾ ಟಾಕೀಸ್’ ಶೋನ ನೇತೃತ್ವನ್ನು ಸೃಜನ್ ಲೋಕೇಶ್ ಅವರು ವಹಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ಅವರು ವಿಶೇಷ ಸ್ಥಾನ ಅಲಂಕರಿಸಿದ್ದರು. ಕುರಿ ಪ್ರತಾಪ್ ಸೇರಿದಂತೆ ಅನೇಕ ಕಲಾವಿದರು ಈ ಬಾರಿಯ ಮಜಾ ಮನೆಯಲ್ಲಿ ಇದ್ದರು. ಇಷ್ಟು ವಾರಗಳ ಕಾಲ ಶೋ ಪ್ರಸಾರ ಕಂಡಿತ್ತು. ಈಗ ‘ಮಜಾ ಟಾಕೀಸ್’ಗೆ ಗ್ರ್ಯಾಂಡ್ ಫಿನಾಲೆ ವೀಕ್ ಎನ್ನುವ ಪಟ್ಟವನ್ನು ಕೊಡಲಾಗಿದೆ.

ಇದನ್ನೂ ಓದಿ
Image
ಎಚ್​ಎಸ್​ ವೆಂಕಟೇಶ​ಮೂರ್ತಿ ನಿಧನ; ಖ್ಯಾತ ಸಾಹಿತಿ, ಕವಿ ಇನ್ನಿಲ್ಲ
Image
ಹೊಂಬಾಳೆ ನಿರ್ಮಾಣದ ಹೃತಿಕ್ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಡೈರೆಕ್ಷನ್
Image
ಸುಹಾಸಿನಿ ಸರಳತೆ; ಬೀದಿ ಬದಿ ಕಲಾವಿದ ಹಾಡು ಕೇಳಿ ಮೆಚ್ಚುಗೆ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?

‘ಮಜಾ ಟಾಕೀಸ್’ ಶೋನಲ್ಲಿ ಈ ವಾರ ದೊಡ್ಡಣ್ಣ, ಚಿಕ್ಕಣ್ಣ ಇಬ್ಬರೂ ಅತಿಥಿಗಳಾಗಿ ಆಗಮಿಸಿದ್ದಾರೆ. ಅವರು ಪ್ರೇಕ್ಷಕರನ್ನು ರಂಜಿಸೋ ಕೆಲಸ ಮಾಡಲಿದ್ದಾರೆ. ಕೆಲವು ಫನ್ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ. ಈ ಪೋಸ್ಟರ್​ಗೆ ‘ಮಜಾ ಟಾಕೀಸ್ ಗ್ರಾಂಡ್ ಫಿನಾಲೆ ಎನ್ನುವ ಕ್ಯಾಪ್ಶನ್ ಕೊಡಲಾಗಿದೆ. ಅಂದರೆ ಈ ಶೋ ಪೂರ್ಣಗೊಳ್ಳೋದು ಖಚಿತವಾಗಿದೆ.

ಕ್ವಾಟ್ಲೆ ಕಿಚನ್ ಹೆಸರಿನ ಹೊಸ ಶೋ ಬರಲಿದೆ. ಇದಕ್ಕೆ ಕುರಿ ಪ್ರತಾಪ್ ಹಾಗೂ ಅನುಪಮಾ ಗೌಡ ಅವರು ನಿರೂಪಕರಾಗಿ ಇರಲಿದ್ದಾರೆ. ಇವರು ಇಬ್ಬರು ಸೇರಿದರೆ ಫನ್ ಗ್ಯಾರಂಟಿ. ಹೊಸ ಶೋನಿಂದ ನಾವು ಅದನ್ನೇ ನಿರೀಕ್ಷಿಸಬಹುದು. ಈಗ ‘ಮಜಾ ಟಾಕೀಸ್​’ ಬಳಿಕ ಆ ಸಮಯದಲ್ಲಿ ಈ ಶೋ ಪ್ರಸಾರ ಕಾಣಬಹುದು ಎಂದು ಊಹಸಿಲಾಗುತ್ತಿದೆ.

ಇದನ್ನೂ ಓದಿ: ‘ಮಜಾ ಟಾಕೀಸ್​’ನಿಂದ ಬದಲಾಗಿದೆ ಹಲವರ ಬದುಕು; ವಿವರಿಸಿದ ಸೃಜನ್ ಲೋಕೇಶ್

ವಿಶೇಷ ಎಂದರೆ ಈಗಾಗಲೇ ಬಾಯ್ಸ್ vs ಗರ್ಲ್ಸ್ ಶೋ ಪೂರ್ಣಗೊಂಡಿದೆ. ಈ ಶೋ ಸಮಯಕ್ಕೆ ಈಗ ಧಾರಾವಾಹಿಗಳು ಪ್ರಸಾರ ಕಾಣಲಿವೆ. ಇದಲ್ಲದೆ, ಬೇರೆ ರಿಯಾಲಿಟಿ ಶೋಗಳನ್ನು ಕಲರ್ಸ್​ ಅವರು ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ