AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend With Ramesh: ಅವಿನಾಶ್​ ಮನೆಯ ದೇವರಕೋಣೆಯಲ್ಲಿ ವಿಷ್ಣುವರ್ಧನ್​ ಫೋಟೋ; ‘ಆಪ್ತರಕ್ಷಕ’ನಿಗೆ ಮಾಳವಿಕಾ ಗೌರವ

Dr Vishnuvardhan: ‘ವಿಷ್ಣುವರ್ಧನ್​ ಅವರು ಒಬ್ಬ ತಂದೆಯ ಸ್ವರೂಪದಲ್ಲಿ ನಮ್ಮ ಬದುಕಿನಲ್ಲಿ ಇದ್ದರು. ಅವರ ನೆರಳು ನಮ್ಮನ್ನು ಬಿಟ್ಟು ಅಗಲಿಯೇ ಇಲ್ಲ’ ಎಂದು ಮಾಳವಿಕಾ ಅವಿನಾಶ್​ ಹೇಳಿದ್ದಾರೆ.

Weekend With Ramesh: ಅವಿನಾಶ್​ ಮನೆಯ ದೇವರಕೋಣೆಯಲ್ಲಿ ವಿಷ್ಣುವರ್ಧನ್​ ಫೋಟೋ; ‘ಆಪ್ತರಕ್ಷಕ’ನಿಗೆ ಮಾಳವಿಕಾ ಗೌರವ
ಮಾಳವಿಕಾ, ಅವಿನಾಶ್
ಮದನ್​ ಕುಮಾರ್​
|

Updated on:Apr 21, 2023 | 4:15 PM

Share

ಮುಖ್ಯಾಂಶಗಳು

  • ‘ವೀಕೆಂಡ್​ ವಿತ್​ ರಮೇಶ್​’ ಶೋನಲ್ಲಿ ವಿಷ್ಣುವರ್ಧನ್​ ನೆನಪು
  • ಈ ವಾರದ ಸಂಚಿಕೆಗಳ ಪ್ರೋಮೋವನ್ನು ಜೀ ಕನ್ನಡ ವಾಹಿನಿ
  • ವಿಷ್ಣುವರ್ಧನ್​ ಬಗ್ಗೆ ಮಾತಾಡಿದ ಮಾಳವಿಕಾ, ಅವಿನಾಶ್​

ಜೀ ಕನ್ನಡ ವಾಹಿನಿಯ ‘ವೀಕೆಂಡ್​ ವಿತ್​ ರಮೇಶ್​’ (Weekend With Ramesh) ಕಾರ್ಯಕ್ರಮದ 5ನೇ ಸೀಸನ್​ ಯಶಸ್ವಿಯಾಗಿ ಮೂಡಿಬರುತ್ತಿದೆ. ಅನೇಕ ಸಾಧಕರು ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ರಮ್ಯಾ ದಿವ್ಯ ಸ್ಪಂದನಾ, ಪ್ರಭುದೇವ, ದತ್ತಣ್ಣ, ಡಾ. ಮಂಜುನಾಥ್​, ಡಾಲಿ ಧನಂಜಯ್​ ಅವರು ಸಾಧಕರ ಸೀಟ್​ ಮೇಲೆ ಕುಳಿತು ಈ ಕಾರ್ಯಕ್ರಮಕ್ಕೆ ಮೆರುಗು ತಂದಿದ್ದಾರೆ. ಈ ವಾರ (ಏಪ್ರಿಲ್​ 29 ಮತ್ತು 30) ಬರುವ ಸಾಧಕರು ಯಾರು ಎಂಬುದು ಕೂಡ ಈಗಾಗಲೇ ಬಹಿರಂಗ ಆಗಿದೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ಪೋಷಕ ಕಲಾವಿದರಾದ ಅವಿನಾಶ್​ (Avinash) ಮತ್ತು ಮಂಡ್ಯ ರಮೇಶ್​ ಅವರು ತಮ್ಮ ಬದುಕಿನ ನೆನಪಿನ ಪುಟವನ್ನು ‘ವೀಕೆಂಡ್​ ವಿತ್ ರಮೇಶ್​’ ವೇದಿಕೆಯಲ್ಲಿ ತೆರೆಯಲಿದ್ದಾರೆ. ವಿಶೇಷ ಎಂದರೆ, ನಟ ವಿಷ್ಣುವರ್ಧನ್​ (Dr Vishnuvardhan) ಬಗ್ಗೆ ಅವಿನಾಶ್​ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ.

ಈ ವಾರದ ಸಂಚಿಕೆಗಳ ಪ್ರೋಮೋವನ್ನು ಜೀ ಕನ್ನಡ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ ಅವಿನಾಶ್​ ಮತ್ತು ಮಾಳವಿಕಾ ಅವರು ವಿಷ್ಣುವರ್ಧನ್​ ಬಗ್ಗೆ ಮಾತನಾಡಿರುವುದು ಗಮನ ಸೆಳೆಯುತ್ತಿದೆ. ‘ನಿಮ್ಮ ಮನೆಯ ದೇವರ ರೂಮ್​ನಲ್ಲಿ ವಿಷ್ಣುವರ್ಧನ್​ ಅವರ ಫೋಟೋ ಇದೆ ಎಂಬುದು ನಿಜನಾ?’ ಎಂದು ರಮೇಶ್​ ಕೇಳಿದ್ದಕ್ಕೆ ‘ನಿಜ’ ಎಂದು ಉತ್ತರಿಸಿದ್ದಾರೆ ಅವಿನಾಶ್​.

‘ಹೃದಯದಲ್ಲಿ ಕೂರಿಸಿರುವವರನ್ನು ದೇವರಮನೆಯಲ್ಲಿ ಕೂರಿಸುವುದು ಏನು ದೊಡ್ಡ ವಿಷಯ’ ಎಂದು ಅವಿನಾಶ್​ ಪತ್ನಿ ಮಾಳವಿಕಾ ಅವರು ಹೇಳಿದ್ದಾರೆ. ಆ ಮೂಲಕ ವಿಷ್ಣುವರ್ಧನ್​ ಬಗ್ಗೆ ತಮಗೆ ಇರುವ ಗೌರವ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ. ‘ವಿಷ್ಣುವರ್ಧನ್​ ಅವರು ಒಬ್ಬ ತಂದೆಯ ಸ್ವರೂಪದಲ್ಲಿ ನಮ್ಮ ಬದುಕಿನಲ್ಲಿ ಇದ್ದರು. ಅವರ ನೆರಳು ನಮ್ಮನ್ನು ಬಿಟ್ಟು ಅಗಲಿಯೇ ಇಲ್ಲ’ ಎಂದು ಮಾಳವಿಕಾ ಅವಿನಾಶ್​ ಹೇಳಿದ್ದಾರೆ.

ಇದನ್ನೂ ಓದಿ: Vishnuvardhan: ಸಿಗರೇಟ್ ಸೇದುತ್ತಿದ್ದಾಗ ವಿಷ್ಣುವರ್ಧನ್ ಕೈಲಿ ಸಿಕ್ಕಿ ಬಿದ್ದಿದ್ದ ಶ್ರೀನಗರ ಕಿಟ್ಟಿ

‘ನಮ್ಮನ್ನು ತುಂಬ ಪ್ರೀತಿ ಮಾಡುತ್ತಿದ್ದರು. ಪ್ರತಿಯೊಂದು ಹೆಜ್ಜೆಯಲ್ಲೂ ಫೋನ್​ ಮಾಡುತ್ತಿದ್ದರು’ ಎಂದು ಅವಿನಾಶ್​ ಹೇಳಿದ್ದಾರೆ. ‘ಆಪ್ತರಕ್ಷಕ ಎಂದರೆ ಅದು ಕೇವಲ ಟೈಟಲ್​ ಅಲ್ಲ. ಅದು ಅವರ ನೇಚರ್​’ ಎಂದು ರಮೇಶ್​ ಅರವಿಂದ್​ ದನಿಗೂಡಿಸಿದ್ದಾರೆ. ಈ ಎಪಿಸೋಡ್​ ನೋಡಲು ವಿಷ್ಣುವರ್ಧನ್​ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಜೀವ ಕೊಟ್ಟ ಎರಡನೇ ತಾಯಿಯನ್ನು ವೀಕೆಂಡ್ ವಿತ್ ರಮೇಶ್​ನಲ್ಲಿ ಭೇಟಿಯಾದ ಡಾಲಿ

‘ಆಪ್ತಮಿತ್ರ’ ಸಿನಿಮಾದಲ್ಲಿ ಅವಿನಾಶ್​, ವಿಷ್ಣುವರ್ಧನ್​ ಹಾಗೂ ರಮೇಶ್​ ಅವರು ತೆರೆ ಹಂಚಿಕೊಂಡಿದ್ದರು. 2010ರಲ್ಲಿ ಬಂದ ‘ಆಪ್ತರಕ್ಷಕ’ ಚಿತ್ರದಲ್ಲೂ ಅವಿನಾಶ್​ ಮತ್ತು ವಿಷ್ಣುವರ್ಧನ್​ ನಟಿಸಿದ್ದರು. ಅದು ವಿಷ್ಣು ಅಭಿನಯದ ಕೊನೇ ಸಿನಿಮಾ. ಇಂದಿಗೂ ಅವರನ್ನು ವಿವಿಧ ರೀತಿಯಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Fri, 21 April 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್