AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend With Ramesh: ಅವಿನಾಶ್​ ಮನೆಯ ದೇವರಕೋಣೆಯಲ್ಲಿ ವಿಷ್ಣುವರ್ಧನ್​ ಫೋಟೋ; ‘ಆಪ್ತರಕ್ಷಕ’ನಿಗೆ ಮಾಳವಿಕಾ ಗೌರವ

Dr Vishnuvardhan: ‘ವಿಷ್ಣುವರ್ಧನ್​ ಅವರು ಒಬ್ಬ ತಂದೆಯ ಸ್ವರೂಪದಲ್ಲಿ ನಮ್ಮ ಬದುಕಿನಲ್ಲಿ ಇದ್ದರು. ಅವರ ನೆರಳು ನಮ್ಮನ್ನು ಬಿಟ್ಟು ಅಗಲಿಯೇ ಇಲ್ಲ’ ಎಂದು ಮಾಳವಿಕಾ ಅವಿನಾಶ್​ ಹೇಳಿದ್ದಾರೆ.

Weekend With Ramesh: ಅವಿನಾಶ್​ ಮನೆಯ ದೇವರಕೋಣೆಯಲ್ಲಿ ವಿಷ್ಣುವರ್ಧನ್​ ಫೋಟೋ; ‘ಆಪ್ತರಕ್ಷಕ’ನಿಗೆ ಮಾಳವಿಕಾ ಗೌರವ
ಮಾಳವಿಕಾ, ಅವಿನಾಶ್
ಮದನ್​ ಕುಮಾರ್​
|

Updated on:Apr 21, 2023 | 4:15 PM

Share

ಜೀ ಕನ್ನಡ ವಾಹಿನಿಯ ‘ವೀಕೆಂಡ್​ ವಿತ್​ ರಮೇಶ್​’ (Weekend With Ramesh) ಕಾರ್ಯಕ್ರಮದ 5ನೇ ಸೀಸನ್​ ಯಶಸ್ವಿಯಾಗಿ ಮೂಡಿಬರುತ್ತಿದೆ. ಅನೇಕ ಸಾಧಕರು ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ರಮ್ಯಾ ದಿವ್ಯ ಸ್ಪಂದನಾ, ಪ್ರಭುದೇವ, ದತ್ತಣ್ಣ, ಡಾ. ಮಂಜುನಾಥ್​, ಡಾಲಿ ಧನಂಜಯ್​ ಅವರು ಸಾಧಕರ ಸೀಟ್​ ಮೇಲೆ ಕುಳಿತು ಈ ಕಾರ್ಯಕ್ರಮಕ್ಕೆ ಮೆರುಗು ತಂದಿದ್ದಾರೆ. ಈ ವಾರ (ಏಪ್ರಿಲ್​ 29 ಮತ್ತು 30) ಬರುವ ಸಾಧಕರು ಯಾರು ಎಂಬುದು ಕೂಡ ಈಗಾಗಲೇ ಬಹಿರಂಗ ಆಗಿದೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ಪೋಷಕ ಕಲಾವಿದರಾದ ಅವಿನಾಶ್​ (Avinash) ಮತ್ತು ಮಂಡ್ಯ ರಮೇಶ್​ ಅವರು ತಮ್ಮ ಬದುಕಿನ ನೆನಪಿನ ಪುಟವನ್ನು ‘ವೀಕೆಂಡ್​ ವಿತ್ ರಮೇಶ್​’ ವೇದಿಕೆಯಲ್ಲಿ ತೆರೆಯಲಿದ್ದಾರೆ. ವಿಶೇಷ ಎಂದರೆ, ನಟ ವಿಷ್ಣುವರ್ಧನ್​ (Dr Vishnuvardhan) ಬಗ್ಗೆ ಅವಿನಾಶ್​ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ.

ಈ ವಾರದ ಸಂಚಿಕೆಗಳ ಪ್ರೋಮೋವನ್ನು ಜೀ ಕನ್ನಡ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ ಅವಿನಾಶ್​ ಮತ್ತು ಮಾಳವಿಕಾ ಅವರು ವಿಷ್ಣುವರ್ಧನ್​ ಬಗ್ಗೆ ಮಾತನಾಡಿರುವುದು ಗಮನ ಸೆಳೆಯುತ್ತಿದೆ. ‘ನಿಮ್ಮ ಮನೆಯ ದೇವರ ರೂಮ್​ನಲ್ಲಿ ವಿಷ್ಣುವರ್ಧನ್​ ಅವರ ಫೋಟೋ ಇದೆ ಎಂಬುದು ನಿಜನಾ?’ ಎಂದು ರಮೇಶ್​ ಕೇಳಿದ್ದಕ್ಕೆ ‘ನಿಜ’ ಎಂದು ಉತ್ತರಿಸಿದ್ದಾರೆ ಅವಿನಾಶ್​.

‘ಹೃದಯದಲ್ಲಿ ಕೂರಿಸಿರುವವರನ್ನು ದೇವರಮನೆಯಲ್ಲಿ ಕೂರಿಸುವುದು ಏನು ದೊಡ್ಡ ವಿಷಯ’ ಎಂದು ಅವಿನಾಶ್​ ಪತ್ನಿ ಮಾಳವಿಕಾ ಅವರು ಹೇಳಿದ್ದಾರೆ. ಆ ಮೂಲಕ ವಿಷ್ಣುವರ್ಧನ್​ ಬಗ್ಗೆ ತಮಗೆ ಇರುವ ಗೌರವ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ. ‘ವಿಷ್ಣುವರ್ಧನ್​ ಅವರು ಒಬ್ಬ ತಂದೆಯ ಸ್ವರೂಪದಲ್ಲಿ ನಮ್ಮ ಬದುಕಿನಲ್ಲಿ ಇದ್ದರು. ಅವರ ನೆರಳು ನಮ್ಮನ್ನು ಬಿಟ್ಟು ಅಗಲಿಯೇ ಇಲ್ಲ’ ಎಂದು ಮಾಳವಿಕಾ ಅವಿನಾಶ್​ ಹೇಳಿದ್ದಾರೆ.

ಇದನ್ನೂ ಓದಿ: Vishnuvardhan: ಸಿಗರೇಟ್ ಸೇದುತ್ತಿದ್ದಾಗ ವಿಷ್ಣುವರ್ಧನ್ ಕೈಲಿ ಸಿಕ್ಕಿ ಬಿದ್ದಿದ್ದ ಶ್ರೀನಗರ ಕಿಟ್ಟಿ

‘ನಮ್ಮನ್ನು ತುಂಬ ಪ್ರೀತಿ ಮಾಡುತ್ತಿದ್ದರು. ಪ್ರತಿಯೊಂದು ಹೆಜ್ಜೆಯಲ್ಲೂ ಫೋನ್​ ಮಾಡುತ್ತಿದ್ದರು’ ಎಂದು ಅವಿನಾಶ್​ ಹೇಳಿದ್ದಾರೆ. ‘ಆಪ್ತರಕ್ಷಕ ಎಂದರೆ ಅದು ಕೇವಲ ಟೈಟಲ್​ ಅಲ್ಲ. ಅದು ಅವರ ನೇಚರ್​’ ಎಂದು ರಮೇಶ್​ ಅರವಿಂದ್​ ದನಿಗೂಡಿಸಿದ್ದಾರೆ. ಈ ಎಪಿಸೋಡ್​ ನೋಡಲು ವಿಷ್ಣುವರ್ಧನ್​ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಜೀವ ಕೊಟ್ಟ ಎರಡನೇ ತಾಯಿಯನ್ನು ವೀಕೆಂಡ್ ವಿತ್ ರಮೇಶ್​ನಲ್ಲಿ ಭೇಟಿಯಾದ ಡಾಲಿ

‘ಆಪ್ತಮಿತ್ರ’ ಸಿನಿಮಾದಲ್ಲಿ ಅವಿನಾಶ್​, ವಿಷ್ಣುವರ್ಧನ್​ ಹಾಗೂ ರಮೇಶ್​ ಅವರು ತೆರೆ ಹಂಚಿಕೊಂಡಿದ್ದರು. 2010ರಲ್ಲಿ ಬಂದ ‘ಆಪ್ತರಕ್ಷಕ’ ಚಿತ್ರದಲ್ಲೂ ಅವಿನಾಶ್​ ಮತ್ತು ವಿಷ್ಣುವರ್ಧನ್​ ನಟಿಸಿದ್ದರು. ಅದು ವಿಷ್ಣು ಅಭಿನಯದ ಕೊನೇ ಸಿನಿಮಾ. ಇಂದಿಗೂ ಅವರನ್ನು ವಿವಿಧ ರೀತಿಯಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Fri, 21 April 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು