AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend With Ramesh: ಅವಿನಾಶ್​ ಮನೆಯ ದೇವರಕೋಣೆಯಲ್ಲಿ ವಿಷ್ಣುವರ್ಧನ್​ ಫೋಟೋ; ‘ಆಪ್ತರಕ್ಷಕ’ನಿಗೆ ಮಾಳವಿಕಾ ಗೌರವ

Dr Vishnuvardhan: ‘ವಿಷ್ಣುವರ್ಧನ್​ ಅವರು ಒಬ್ಬ ತಂದೆಯ ಸ್ವರೂಪದಲ್ಲಿ ನಮ್ಮ ಬದುಕಿನಲ್ಲಿ ಇದ್ದರು. ಅವರ ನೆರಳು ನಮ್ಮನ್ನು ಬಿಟ್ಟು ಅಗಲಿಯೇ ಇಲ್ಲ’ ಎಂದು ಮಾಳವಿಕಾ ಅವಿನಾಶ್​ ಹೇಳಿದ್ದಾರೆ.

Weekend With Ramesh: ಅವಿನಾಶ್​ ಮನೆಯ ದೇವರಕೋಣೆಯಲ್ಲಿ ವಿಷ್ಣುವರ್ಧನ್​ ಫೋಟೋ; ‘ಆಪ್ತರಕ್ಷಕ’ನಿಗೆ ಮಾಳವಿಕಾ ಗೌರವ
ಮಾಳವಿಕಾ, ಅವಿನಾಶ್
ಮದನ್​ ಕುಮಾರ್​
|

Updated on:Apr 21, 2023 | 4:15 PM

Share

ಜೀ ಕನ್ನಡ ವಾಹಿನಿಯ ‘ವೀಕೆಂಡ್​ ವಿತ್​ ರಮೇಶ್​’ (Weekend With Ramesh) ಕಾರ್ಯಕ್ರಮದ 5ನೇ ಸೀಸನ್​ ಯಶಸ್ವಿಯಾಗಿ ಮೂಡಿಬರುತ್ತಿದೆ. ಅನೇಕ ಸಾಧಕರು ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ರಮ್ಯಾ ದಿವ್ಯ ಸ್ಪಂದನಾ, ಪ್ರಭುದೇವ, ದತ್ತಣ್ಣ, ಡಾ. ಮಂಜುನಾಥ್​, ಡಾಲಿ ಧನಂಜಯ್​ ಅವರು ಸಾಧಕರ ಸೀಟ್​ ಮೇಲೆ ಕುಳಿತು ಈ ಕಾರ್ಯಕ್ರಮಕ್ಕೆ ಮೆರುಗು ತಂದಿದ್ದಾರೆ. ಈ ವಾರ (ಏಪ್ರಿಲ್​ 29 ಮತ್ತು 30) ಬರುವ ಸಾಧಕರು ಯಾರು ಎಂಬುದು ಕೂಡ ಈಗಾಗಲೇ ಬಹಿರಂಗ ಆಗಿದೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ಪೋಷಕ ಕಲಾವಿದರಾದ ಅವಿನಾಶ್​ (Avinash) ಮತ್ತು ಮಂಡ್ಯ ರಮೇಶ್​ ಅವರು ತಮ್ಮ ಬದುಕಿನ ನೆನಪಿನ ಪುಟವನ್ನು ‘ವೀಕೆಂಡ್​ ವಿತ್ ರಮೇಶ್​’ ವೇದಿಕೆಯಲ್ಲಿ ತೆರೆಯಲಿದ್ದಾರೆ. ವಿಶೇಷ ಎಂದರೆ, ನಟ ವಿಷ್ಣುವರ್ಧನ್​ (Dr Vishnuvardhan) ಬಗ್ಗೆ ಅವಿನಾಶ್​ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ.

ಈ ವಾರದ ಸಂಚಿಕೆಗಳ ಪ್ರೋಮೋವನ್ನು ಜೀ ಕನ್ನಡ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ ಅವಿನಾಶ್​ ಮತ್ತು ಮಾಳವಿಕಾ ಅವರು ವಿಷ್ಣುವರ್ಧನ್​ ಬಗ್ಗೆ ಮಾತನಾಡಿರುವುದು ಗಮನ ಸೆಳೆಯುತ್ತಿದೆ. ‘ನಿಮ್ಮ ಮನೆಯ ದೇವರ ರೂಮ್​ನಲ್ಲಿ ವಿಷ್ಣುವರ್ಧನ್​ ಅವರ ಫೋಟೋ ಇದೆ ಎಂಬುದು ನಿಜನಾ?’ ಎಂದು ರಮೇಶ್​ ಕೇಳಿದ್ದಕ್ಕೆ ‘ನಿಜ’ ಎಂದು ಉತ್ತರಿಸಿದ್ದಾರೆ ಅವಿನಾಶ್​.

‘ಹೃದಯದಲ್ಲಿ ಕೂರಿಸಿರುವವರನ್ನು ದೇವರಮನೆಯಲ್ಲಿ ಕೂರಿಸುವುದು ಏನು ದೊಡ್ಡ ವಿಷಯ’ ಎಂದು ಅವಿನಾಶ್​ ಪತ್ನಿ ಮಾಳವಿಕಾ ಅವರು ಹೇಳಿದ್ದಾರೆ. ಆ ಮೂಲಕ ವಿಷ್ಣುವರ್ಧನ್​ ಬಗ್ಗೆ ತಮಗೆ ಇರುವ ಗೌರವ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ. ‘ವಿಷ್ಣುವರ್ಧನ್​ ಅವರು ಒಬ್ಬ ತಂದೆಯ ಸ್ವರೂಪದಲ್ಲಿ ನಮ್ಮ ಬದುಕಿನಲ್ಲಿ ಇದ್ದರು. ಅವರ ನೆರಳು ನಮ್ಮನ್ನು ಬಿಟ್ಟು ಅಗಲಿಯೇ ಇಲ್ಲ’ ಎಂದು ಮಾಳವಿಕಾ ಅವಿನಾಶ್​ ಹೇಳಿದ್ದಾರೆ.

ಇದನ್ನೂ ಓದಿ: Vishnuvardhan: ಸಿಗರೇಟ್ ಸೇದುತ್ತಿದ್ದಾಗ ವಿಷ್ಣುವರ್ಧನ್ ಕೈಲಿ ಸಿಕ್ಕಿ ಬಿದ್ದಿದ್ದ ಶ್ರೀನಗರ ಕಿಟ್ಟಿ

‘ನಮ್ಮನ್ನು ತುಂಬ ಪ್ರೀತಿ ಮಾಡುತ್ತಿದ್ದರು. ಪ್ರತಿಯೊಂದು ಹೆಜ್ಜೆಯಲ್ಲೂ ಫೋನ್​ ಮಾಡುತ್ತಿದ್ದರು’ ಎಂದು ಅವಿನಾಶ್​ ಹೇಳಿದ್ದಾರೆ. ‘ಆಪ್ತರಕ್ಷಕ ಎಂದರೆ ಅದು ಕೇವಲ ಟೈಟಲ್​ ಅಲ್ಲ. ಅದು ಅವರ ನೇಚರ್​’ ಎಂದು ರಮೇಶ್​ ಅರವಿಂದ್​ ದನಿಗೂಡಿಸಿದ್ದಾರೆ. ಈ ಎಪಿಸೋಡ್​ ನೋಡಲು ವಿಷ್ಣುವರ್ಧನ್​ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಜೀವ ಕೊಟ್ಟ ಎರಡನೇ ತಾಯಿಯನ್ನು ವೀಕೆಂಡ್ ವಿತ್ ರಮೇಶ್​ನಲ್ಲಿ ಭೇಟಿಯಾದ ಡಾಲಿ

‘ಆಪ್ತಮಿತ್ರ’ ಸಿನಿಮಾದಲ್ಲಿ ಅವಿನಾಶ್​, ವಿಷ್ಣುವರ್ಧನ್​ ಹಾಗೂ ರಮೇಶ್​ ಅವರು ತೆರೆ ಹಂಚಿಕೊಂಡಿದ್ದರು. 2010ರಲ್ಲಿ ಬಂದ ‘ಆಪ್ತರಕ್ಷಕ’ ಚಿತ್ರದಲ್ಲೂ ಅವಿನಾಶ್​ ಮತ್ತು ವಿಷ್ಣುವರ್ಧನ್​ ನಟಿಸಿದ್ದರು. ಅದು ವಿಷ್ಣು ಅಭಿನಯದ ಕೊನೇ ಸಿನಿಮಾ. ಇಂದಿಗೂ ಅವರನ್ನು ವಿವಿಧ ರೀತಿಯಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Fri, 21 April 23

Follow Us
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು