AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೆ ಮನ್ವಂತರ’ದ ಮುಖಾಂತರ ಕಿರುತೆರೆಗೆ ಮರಳಲಿದ್ದಾರೆ ಮಾಳವಿಕಾ ಅವಿನಾಶ್

Malavika Avinash: ಮತ್ತೆ ಮನ್ವಂತರ ಧಾರವಾಹಿಯ ಮುಖಾಂತರ ಮಾಳವಿಕಾ ಅವಿನಾಶ್ ಕಿರುತೆರೆಗೆ ವಾಪಾಸಗಲಿದ್ದಾರೆ.

‘ಮತ್ತೆ ಮನ್ವಂತರ’ದ ಮುಖಾಂತರ ಕಿರುತೆರೆಗೆ ಮರಳಲಿದ್ದಾರೆ ಮಾಳವಿಕಾ ಅವಿನಾಶ್
ಮಾಳವಿಕಾ ಅವಿನಾಶ್
TV9 Web
| Edited By: |

Updated on: Aug 17, 2021 | 6:19 PM

Share

ಕನ್ನಡದ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ, ರಾಜಕಾರಣಿ ಮಾಳವಿಕಾ ಅವಿನಾಶ್ ‘ಮತ್ತೆ ಮನ್ವಂತರ’ದ ಮೂಲಕ ಕಿರುತೆರೆಗೆ ವಾಪಾಸಾಗಲಿದ್ದಾರೆ. ಕಿರುತೆರೆಯ ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಮ್ ನಿರ್ದೇಶನದ ಮತ್ತೆ ಮನ್ವಂತರ ಧಾರವಾಹಿ ಇತ್ತೀಚೆಗಷ್ಟೇ ಮುಹೂರ್ತ ಮುಗಿಸಿ ಸೆಟ್ಟೇರಿತ್ತು. ಧಾರವಾಹಿಯ ಚಿತ್ರೀಕರಣ ಚಾನಲ್ ಅನುಮತಿ ನೀಡಿದ ನಂತರ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿರುವ ಸೀತಾರಾಮ್, ಈಗ ನಡೆಯುತ್ತಿರುವುದು ಪೈಲಟ್ ಎಪಿಸೋಡ್ ಎಂದು ಹೇಳಿದ್ದಾರೆ.

‘ಮನ್ವಂತರ’ ಧಾರವಾಹಿಯಲ್ಲಿನ ಮಾಳವಿಕಾ ಪಾತ್ರ ಅಪಾರ ಜನಮೆಚ್ಚುಗೆ ಗಳಿಸಿತ್ತು. ಈಗ ಮತ್ತೆ ಮನ್ವಂತರದಲ್ಲೂ ಅವರು ಬಣ್ಣ ಹಚ್ಚಲಿದ್ದಾರೆ. ಮೇಧಾ ವಿದ್ಯಾಭೂಷಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರಂಜನ್‌ ದೇಶಪಾಂಡೆ, ಅಜಿತ್‌ ಹಂದೆ, ಮೇಘಾ ನಾಡಿಗೇರ್‌, ಪ್ರಶಾಂತ್‌ ಶೆಟ್ಟಿ (ಹೊಸ ಪರಿಚಯ) ಮೊದಲಾದವರು ತಾರಾಗಣದಲ್ಲಿದ್ದಾರೆ. ಧಾರವಾಹಿಗೆ ಈಗಾಗಲೇ ಕವಿ ಎಚ್‌ಎಸ್‌ ವೆಂಕಟೇಶಮೂರ್ತಿ ಟೈಟಲ್‌ ಸಾಂಗ್‌ ಬರೆದಿದ್ದು, ಪ್ರವೀಣ್‌ ರಾವ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಜಯಪ್ರಕಾಶ್‌ ಹಾಡಲಿದ್ದು, ಶೀಘ್ರದಲ್ಲೇ ರೆಕಾರ್ಡಿಂಗ್‌ ನಡೆಯಲಿದೆ ಎಂದು ತಂಡ ತಿಳಿಸಿದೆ.

ಮತ್ತೆ ಮನ್ವಂತರ ಧಾರವಾಹಿಯು ಸಂಗೀತ ಪ್ರಧಾನವಾಗಿರಲಿದೆ ಎಂಬ ಸುಳಿವು ಈಗಾಗಲೇ ಲಭ್ಯವಾಗಿದೆ. ಧಾರವಾಹಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿರುವ ಮೇಧಾ ವಿದ್ಯಾಭೂಷಣ, ಸಂಗೀತದ ಹಿನ್ನೆಲೆಯುಳ್ಳವರಾಗಿದ್ದು, ಖ್ಯಾತ ಗಾಯಕ ವಿದ್ಯಾಭೂಷಣ ಅವರ ಪುತ್ರಿಯಾಗಿದ್ದಾರೆ. ‘ಮತ್ತೆ ಮನ್ವಂತರ’ವು ಸವಾಲುಗಳನ್ನು ಎದುರಿಸಿ, ಗುರಿಯತ್ತ ಮುನ್ನುಗ್ಗುವ ಯುವತಿಯ ಕತೆ ಎಂದು ಈ ಹಿಂದೆ ಮೇಧಾ ಟಿವಿ9ನೊಂದಿಗೆ ಮಾತನಾಡಿದಾಗ ಮಾಹಿತಿ ಹಂಚಿಕೊಂಡಿದ್ದರು. ಈ ಧಾರವಾಹಿಯೂ ಟಿ.ಎನ್​.ಎಸ್. ಅವರ ಈ ಹಿಂದಿನ ಧಾರವಾಹಿಗಳಂತೆ ಜನರಿಗೆ ಪ್ರಿಯವಾಗಲಿದೆ ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದರು.

ಭೂಮಿಕಾ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಈ ಧಾರವಾಹಿ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಟಿ.ಎನ್.ಸೀತಾರಾಮ್ ಕೊನೆಯದಾಗಿ ‘ಮಗಳು ಜಾನಕಿ’ ಧಾರವಾಹಿಯನ್ನು ನಿರ್ದೇಶಿಸಿದ್ದರು. ಈ ಧಾರವಾಹಿ ಕಾರಣಾಂತರಗಳಿಂದ ನಿಂತಿತ್ತು.

ಇದನ್ನೂ ಓದಿ:

ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಹೊಸ ನಿಯಮಗಳ ಪಟ್ಟಿ ಸಿದ್ಧ; ಪಾಲಿಸಲೇ ಬೇಕಾದ ನಿಯಮಗಳ ಪಟ್ಟಿ ಇಲ್ಲಿದೆ

ಸುದೀಪ್​ ನಿರ್ದೇಶನದಲ್ಲಿ ಶಿವಣ್ಣ ನಟನೆ; ಹೊಸ ಸಿನಿಮಾ ಬಗ್ಗೆ ವೇದಿಕೆ ಮೇಲೆ ‘ಹ್ಯಾಟ್ರಿಕ್​ ಹೀರೋ’ ಮಾತು

(Malavika Avinash will be playing prominent role in Matte Manvantara)

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?