AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೆ ಮನ್ವಂತರ’ದ ಮುಖಾಂತರ ಕಿರುತೆರೆಗೆ ಮರಳಲಿದ್ದಾರೆ ಮಾಳವಿಕಾ ಅವಿನಾಶ್

Malavika Avinash: ಮತ್ತೆ ಮನ್ವಂತರ ಧಾರವಾಹಿಯ ಮುಖಾಂತರ ಮಾಳವಿಕಾ ಅವಿನಾಶ್ ಕಿರುತೆರೆಗೆ ವಾಪಾಸಗಲಿದ್ದಾರೆ.

‘ಮತ್ತೆ ಮನ್ವಂತರ’ದ ಮುಖಾಂತರ ಕಿರುತೆರೆಗೆ ಮರಳಲಿದ್ದಾರೆ ಮಾಳವಿಕಾ ಅವಿನಾಶ್
ಮಾಳವಿಕಾ ಅವಿನಾಶ್
TV9 Web
| Updated By: shivaprasad.hs|

Updated on: Aug 17, 2021 | 6:19 PM

Share

ಕನ್ನಡದ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ, ರಾಜಕಾರಣಿ ಮಾಳವಿಕಾ ಅವಿನಾಶ್ ‘ಮತ್ತೆ ಮನ್ವಂತರ’ದ ಮೂಲಕ ಕಿರುತೆರೆಗೆ ವಾಪಾಸಾಗಲಿದ್ದಾರೆ. ಕಿರುತೆರೆಯ ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಮ್ ನಿರ್ದೇಶನದ ಮತ್ತೆ ಮನ್ವಂತರ ಧಾರವಾಹಿ ಇತ್ತೀಚೆಗಷ್ಟೇ ಮುಹೂರ್ತ ಮುಗಿಸಿ ಸೆಟ್ಟೇರಿತ್ತು. ಧಾರವಾಹಿಯ ಚಿತ್ರೀಕರಣ ಚಾನಲ್ ಅನುಮತಿ ನೀಡಿದ ನಂತರ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿರುವ ಸೀತಾರಾಮ್, ಈಗ ನಡೆಯುತ್ತಿರುವುದು ಪೈಲಟ್ ಎಪಿಸೋಡ್ ಎಂದು ಹೇಳಿದ್ದಾರೆ.

‘ಮನ್ವಂತರ’ ಧಾರವಾಹಿಯಲ್ಲಿನ ಮಾಳವಿಕಾ ಪಾತ್ರ ಅಪಾರ ಜನಮೆಚ್ಚುಗೆ ಗಳಿಸಿತ್ತು. ಈಗ ಮತ್ತೆ ಮನ್ವಂತರದಲ್ಲೂ ಅವರು ಬಣ್ಣ ಹಚ್ಚಲಿದ್ದಾರೆ. ಮೇಧಾ ವಿದ್ಯಾಭೂಷಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರಂಜನ್‌ ದೇಶಪಾಂಡೆ, ಅಜಿತ್‌ ಹಂದೆ, ಮೇಘಾ ನಾಡಿಗೇರ್‌, ಪ್ರಶಾಂತ್‌ ಶೆಟ್ಟಿ (ಹೊಸ ಪರಿಚಯ) ಮೊದಲಾದವರು ತಾರಾಗಣದಲ್ಲಿದ್ದಾರೆ. ಧಾರವಾಹಿಗೆ ಈಗಾಗಲೇ ಕವಿ ಎಚ್‌ಎಸ್‌ ವೆಂಕಟೇಶಮೂರ್ತಿ ಟೈಟಲ್‌ ಸಾಂಗ್‌ ಬರೆದಿದ್ದು, ಪ್ರವೀಣ್‌ ರಾವ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಜಯಪ್ರಕಾಶ್‌ ಹಾಡಲಿದ್ದು, ಶೀಘ್ರದಲ್ಲೇ ರೆಕಾರ್ಡಿಂಗ್‌ ನಡೆಯಲಿದೆ ಎಂದು ತಂಡ ತಿಳಿಸಿದೆ.

ಮತ್ತೆ ಮನ್ವಂತರ ಧಾರವಾಹಿಯು ಸಂಗೀತ ಪ್ರಧಾನವಾಗಿರಲಿದೆ ಎಂಬ ಸುಳಿವು ಈಗಾಗಲೇ ಲಭ್ಯವಾಗಿದೆ. ಧಾರವಾಹಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿರುವ ಮೇಧಾ ವಿದ್ಯಾಭೂಷಣ, ಸಂಗೀತದ ಹಿನ್ನೆಲೆಯುಳ್ಳವರಾಗಿದ್ದು, ಖ್ಯಾತ ಗಾಯಕ ವಿದ್ಯಾಭೂಷಣ ಅವರ ಪುತ್ರಿಯಾಗಿದ್ದಾರೆ. ‘ಮತ್ತೆ ಮನ್ವಂತರ’ವು ಸವಾಲುಗಳನ್ನು ಎದುರಿಸಿ, ಗುರಿಯತ್ತ ಮುನ್ನುಗ್ಗುವ ಯುವತಿಯ ಕತೆ ಎಂದು ಈ ಹಿಂದೆ ಮೇಧಾ ಟಿವಿ9ನೊಂದಿಗೆ ಮಾತನಾಡಿದಾಗ ಮಾಹಿತಿ ಹಂಚಿಕೊಂಡಿದ್ದರು. ಈ ಧಾರವಾಹಿಯೂ ಟಿ.ಎನ್​.ಎಸ್. ಅವರ ಈ ಹಿಂದಿನ ಧಾರವಾಹಿಗಳಂತೆ ಜನರಿಗೆ ಪ್ರಿಯವಾಗಲಿದೆ ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದರು.

ಭೂಮಿಕಾ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಈ ಧಾರವಾಹಿ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಟಿ.ಎನ್.ಸೀತಾರಾಮ್ ಕೊನೆಯದಾಗಿ ‘ಮಗಳು ಜಾನಕಿ’ ಧಾರವಾಹಿಯನ್ನು ನಿರ್ದೇಶಿಸಿದ್ದರು. ಈ ಧಾರವಾಹಿ ಕಾರಣಾಂತರಗಳಿಂದ ನಿಂತಿತ್ತು.

ಇದನ್ನೂ ಓದಿ:

ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಹೊಸ ನಿಯಮಗಳ ಪಟ್ಟಿ ಸಿದ್ಧ; ಪಾಲಿಸಲೇ ಬೇಕಾದ ನಿಯಮಗಳ ಪಟ್ಟಿ ಇಲ್ಲಿದೆ

ಸುದೀಪ್​ ನಿರ್ದೇಶನದಲ್ಲಿ ಶಿವಣ್ಣ ನಟನೆ; ಹೊಸ ಸಿನಿಮಾ ಬಗ್ಗೆ ವೇದಿಕೆ ಮೇಲೆ ‘ಹ್ಯಾಟ್ರಿಕ್​ ಹೀರೋ’ ಮಾತು

(Malavika Avinash will be playing prominent role in Matte Manvantara)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!