AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು

ಕಳೆದ 16 ವರ್ಷದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಮಣಿಕುಟ್ಟನ್​ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ವೋಟ್​ ಮಾಡಿ ಗೆಲ್ಲಿಸಿದ ಎಲ್ಲ ವೀಕ್ಷಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು
ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು
TV9 Web
| Edited By: |

Updated on: Aug 04, 2021 | 8:15 AM

Share

ಬಿಗ್​ ಬಾಸ್ (Bigg Boss)​ ರಿಯಾಲಿಟಿ ಶೋನಲ್ಲಿ ಭಾಗವಹಿಸಬೇಕು ಎಂಬುದು ಲಕ್ಷಾಂತರ ಜನರ ಆಸೆ. ಆದರೆ ಎಲ್ಲರಿಗೂ ಅಂಥ ಅವಕಾಶ ಸಿಗುವುದಿಲ್ಲ. ಒಂದುವೇಳೆ ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡರೆ ಸ್ಪರ್ಧಿಗಳ ಲೈಫ್​ ಬದಲಾಗುತ್ತದೆ. ವಿನ್ನರ್​ (Bigg Boss Winner) ಆದರಂತೂ ಬಂಪರ್​ ಲಾಟರಿ ಹೊಡೆದಂತೆಯೇ ಸರಿ. ಈಗ ಮಲಯಾಳಂ ಬಿಗ್​ ಬಾಸ್​ ಸೀಸನ್​ 3ರಲ್ಲಿ ಗೆದ್ದಿರುವ ನಟ ಮಣಿಕುಟ್ಟನ್​ (Manikuttan) ಅವರಿಗೆ ಭರ್ಜರಿ ಬಹುಮಾನ ಸಿಕ್ಕಿದೆ. ಬಿಗ್​ ಬಾಸ್​ ಫಿನಾಲೆಯಲ್ಲಿ ಅವರನ್ನು ವಿನ್ನರ್​ ಎಂದು ಘೋಷಿಸಲಾಗಿದೆ. ಆಕರ್ಷಕ ಟ್ರೋಫಿ ಜೊತೆಗೆ 75 ಲಕ್ಷ ರೂ. ಬೆಲೆಬಾಳುವ ಫ್ಲಾಟ್​ ನೀಡಲಾಗಿದೆ!

ಈ ವರ್ಷ ಫೆ.14ರಂದು ಮಲಯಾಳಂ ಬಿಗ್​ ಬಾಸ್​ ಆರಂಭ ಆಗಿತ್ತು. ಚೆನ್ನೈನ ಸ್ಡುಡಿಯೋವೊಂದರಲ್ಲಿ ದೊಡ್ಮನೆಯ ಸೆಟ್​ ಹಾಕಿ ಶೋ ನಡೆಸಲಾಗುತ್ತಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ಹಿನ್ನೆಲೆಯಲ್ಲಿ ಆಟವನ್ನು ಅರ್ಧಕ್ಕೆ ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. 95ನೇ ದಿನಕ್ಕೆ ಅಧಿಕಾರಿಗಳು ಸ್ಟುಡಿಯೋ ಮೇಲೆ ದಾಳಿ ನಡೆಸಿ ಬಿಗ್​ ಬಾಸ್​ಗೆ ಬ್ರೇಕ್​ ಹಾಕಿದ್ದರು. ಆದರೆ ಈಗ ವೀಕ್ಷಕರ ವೋಟಿಂಗ್​ ಆಧಾರದ ಮೇಲೆ ವಿನ್ನರ್​ ಯಾರು ಎಂಬುದನ್ನು ತೀರ್ಮಾನಿಸಲಾಗಿದೆ. ವೀಕ್ಷಕರಿಂದ ಅತಿ ಹೆಚ್ಚು ವೋಟ್​ ಪಡೆದ ಮಣಿಕುಟ್ಟನ್​ ಅವರು ವಿನ್ನರ್​ ಆಗಿದ್ದಾರೆ. ಕಳೆದ 16 ವರ್ಷದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ‘ಬಿಡುವಿನ ಸಮಯದಲ್ಲಿ ಸಾಕಷ್ಟು ಸಿನಿಮಾಗಳನ್ನು ನೋಡಿ ನಾನು ಜ್ಞಾನ ಪಡೆಯುತ್ತಿದ್ದೆ. ಎಲ್ಲ ಟಾಸ್ಕ್​ಗಳನ್ನು ನಿಭಾಯಿಸುವಾಗ ಅದು ನನಗೆ ಸಹಾಯಕ್ಕೆ ಬಂತು. ಈ ಕಾರ್ಯಕ್ರಮಕ್ಕಾಗಿ ನಾನು ನನ್ನ ಸರ್ವಸ್ವವನ್ನೂ ಮೀಸಲಾಗಿಟ್ಟಿದ್ದೆ. ವೋಟ್​ ಮಾಡಿದ ಜನರಿಗೆ ಮತ್ತು ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಮಣಿಕುಟ್ಟನ್​ ಹೇಳಿದ್ದಾರೆ.

ಮಲಯಾಳಂ ಬಿಗ್​ ಬಾಸ್​ ಸೀಸನ್ 3ಕ್ಕೆ ಮಾಲಿವುಡ್​ ಸ್ಟಾರ್​ ನಟ ಮೋಹನ್​​ಲಾಲ್​ ನಿರೂಪಕರಾಗಿದ್ದರು. ಮೋಹನ್​ಲಾಲ್​ ಜೊತೆಗೆ ಹಲವು ಸಿನಿಮಾಗಳಲ್ಲಿ ತೆರೆಹಂಚಿಕೊಳ್ಳುವ ಅವಕಾಶ ಕೂಡ ಈ ಹಿಂದೆ ಮಣಿಕುಟ್ಟನ್​ ಅವರಿಗೆ ಸಿಕ್ಕಿತ್ತು. ಬಿಗ್​ ಬಾಸ್​ ಗೆದ್ದಿರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8ಕ್ಕೆ ಫಿನಾಲೆ ಹತ್ತಿರವಾಗಿದೆ. ಆ.8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಸದ್ಯ ಮನೆಯೊಳಗೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ., ದಿವ್ಯಾ ಉರುಡುಗ, ವೈಷ್ಣವಿ ಗೌಡ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ಹಣಾಹಣಿ ನಡೆಯುತ್ತಿದೆ.

ಇದನ್ನೂ ಓದಿ:

ಬಿಗ್​ ಬಾಸ್​ನಲ್ಲಿ ‘ಕಣ್ಣೇ ಅದಿರಿಂದಿ’ ಗಾಯಕಿ ಮಂಗ್ಲಿ? ಹೆಚ್ಚಿತು ವೀಕ್ಷಕರ ನಿರೀಕ್ಷೆ

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ