AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು

ಕಳೆದ 16 ವರ್ಷದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಮಣಿಕುಟ್ಟನ್​ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ವೋಟ್​ ಮಾಡಿ ಗೆಲ್ಲಿಸಿದ ಎಲ್ಲ ವೀಕ್ಷಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು
ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು
TV9 Web
| Edited By: |

Updated on: Aug 04, 2021 | 8:15 AM

Share

ಬಿಗ್​ ಬಾಸ್ (Bigg Boss)​ ರಿಯಾಲಿಟಿ ಶೋನಲ್ಲಿ ಭಾಗವಹಿಸಬೇಕು ಎಂಬುದು ಲಕ್ಷಾಂತರ ಜನರ ಆಸೆ. ಆದರೆ ಎಲ್ಲರಿಗೂ ಅಂಥ ಅವಕಾಶ ಸಿಗುವುದಿಲ್ಲ. ಒಂದುವೇಳೆ ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡರೆ ಸ್ಪರ್ಧಿಗಳ ಲೈಫ್​ ಬದಲಾಗುತ್ತದೆ. ವಿನ್ನರ್​ (Bigg Boss Winner) ಆದರಂತೂ ಬಂಪರ್​ ಲಾಟರಿ ಹೊಡೆದಂತೆಯೇ ಸರಿ. ಈಗ ಮಲಯಾಳಂ ಬಿಗ್​ ಬಾಸ್​ ಸೀಸನ್​ 3ರಲ್ಲಿ ಗೆದ್ದಿರುವ ನಟ ಮಣಿಕುಟ್ಟನ್​ (Manikuttan) ಅವರಿಗೆ ಭರ್ಜರಿ ಬಹುಮಾನ ಸಿಕ್ಕಿದೆ. ಬಿಗ್​ ಬಾಸ್​ ಫಿನಾಲೆಯಲ್ಲಿ ಅವರನ್ನು ವಿನ್ನರ್​ ಎಂದು ಘೋಷಿಸಲಾಗಿದೆ. ಆಕರ್ಷಕ ಟ್ರೋಫಿ ಜೊತೆಗೆ 75 ಲಕ್ಷ ರೂ. ಬೆಲೆಬಾಳುವ ಫ್ಲಾಟ್​ ನೀಡಲಾಗಿದೆ!

ಈ ವರ್ಷ ಫೆ.14ರಂದು ಮಲಯಾಳಂ ಬಿಗ್​ ಬಾಸ್​ ಆರಂಭ ಆಗಿತ್ತು. ಚೆನ್ನೈನ ಸ್ಡುಡಿಯೋವೊಂದರಲ್ಲಿ ದೊಡ್ಮನೆಯ ಸೆಟ್​ ಹಾಕಿ ಶೋ ನಡೆಸಲಾಗುತ್ತಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ಹಿನ್ನೆಲೆಯಲ್ಲಿ ಆಟವನ್ನು ಅರ್ಧಕ್ಕೆ ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. 95ನೇ ದಿನಕ್ಕೆ ಅಧಿಕಾರಿಗಳು ಸ್ಟುಡಿಯೋ ಮೇಲೆ ದಾಳಿ ನಡೆಸಿ ಬಿಗ್​ ಬಾಸ್​ಗೆ ಬ್ರೇಕ್​ ಹಾಕಿದ್ದರು. ಆದರೆ ಈಗ ವೀಕ್ಷಕರ ವೋಟಿಂಗ್​ ಆಧಾರದ ಮೇಲೆ ವಿನ್ನರ್​ ಯಾರು ಎಂಬುದನ್ನು ತೀರ್ಮಾನಿಸಲಾಗಿದೆ. ವೀಕ್ಷಕರಿಂದ ಅತಿ ಹೆಚ್ಚು ವೋಟ್​ ಪಡೆದ ಮಣಿಕುಟ್ಟನ್​ ಅವರು ವಿನ್ನರ್​ ಆಗಿದ್ದಾರೆ. ಕಳೆದ 16 ವರ್ಷದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ‘ಬಿಡುವಿನ ಸಮಯದಲ್ಲಿ ಸಾಕಷ್ಟು ಸಿನಿಮಾಗಳನ್ನು ನೋಡಿ ನಾನು ಜ್ಞಾನ ಪಡೆಯುತ್ತಿದ್ದೆ. ಎಲ್ಲ ಟಾಸ್ಕ್​ಗಳನ್ನು ನಿಭಾಯಿಸುವಾಗ ಅದು ನನಗೆ ಸಹಾಯಕ್ಕೆ ಬಂತು. ಈ ಕಾರ್ಯಕ್ರಮಕ್ಕಾಗಿ ನಾನು ನನ್ನ ಸರ್ವಸ್ವವನ್ನೂ ಮೀಸಲಾಗಿಟ್ಟಿದ್ದೆ. ವೋಟ್​ ಮಾಡಿದ ಜನರಿಗೆ ಮತ್ತು ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಮಣಿಕುಟ್ಟನ್​ ಹೇಳಿದ್ದಾರೆ.

ಮಲಯಾಳಂ ಬಿಗ್​ ಬಾಸ್​ ಸೀಸನ್ 3ಕ್ಕೆ ಮಾಲಿವುಡ್​ ಸ್ಟಾರ್​ ನಟ ಮೋಹನ್​​ಲಾಲ್​ ನಿರೂಪಕರಾಗಿದ್ದರು. ಮೋಹನ್​ಲಾಲ್​ ಜೊತೆಗೆ ಹಲವು ಸಿನಿಮಾಗಳಲ್ಲಿ ತೆರೆಹಂಚಿಕೊಳ್ಳುವ ಅವಕಾಶ ಕೂಡ ಈ ಹಿಂದೆ ಮಣಿಕುಟ್ಟನ್​ ಅವರಿಗೆ ಸಿಕ್ಕಿತ್ತು. ಬಿಗ್​ ಬಾಸ್​ ಗೆದ್ದಿರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8ಕ್ಕೆ ಫಿನಾಲೆ ಹತ್ತಿರವಾಗಿದೆ. ಆ.8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಸದ್ಯ ಮನೆಯೊಳಗೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ., ದಿವ್ಯಾ ಉರುಡುಗ, ವೈಷ್ಣವಿ ಗೌಡ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ಹಣಾಹಣಿ ನಡೆಯುತ್ತಿದೆ.

ಇದನ್ನೂ ಓದಿ:

ಬಿಗ್​ ಬಾಸ್​ನಲ್ಲಿ ‘ಕಣ್ಣೇ ಅದಿರಿಂದಿ’ ಗಾಯಕಿ ಮಂಗ್ಲಿ? ಹೆಚ್ಚಿತು ವೀಕ್ಷಕರ ನಿರೀಕ್ಷೆ

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ