AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು

ಕಳೆದ 16 ವರ್ಷದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಮಣಿಕುಟ್ಟನ್​ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ವೋಟ್​ ಮಾಡಿ ಗೆಲ್ಲಿಸಿದ ಎಲ್ಲ ವೀಕ್ಷಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು
ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು
TV9 Web
| Edited By: |

Updated on: Aug 04, 2021 | 8:15 AM

Share

ಬಿಗ್​ ಬಾಸ್ (Bigg Boss)​ ರಿಯಾಲಿಟಿ ಶೋನಲ್ಲಿ ಭಾಗವಹಿಸಬೇಕು ಎಂಬುದು ಲಕ್ಷಾಂತರ ಜನರ ಆಸೆ. ಆದರೆ ಎಲ್ಲರಿಗೂ ಅಂಥ ಅವಕಾಶ ಸಿಗುವುದಿಲ್ಲ. ಒಂದುವೇಳೆ ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡರೆ ಸ್ಪರ್ಧಿಗಳ ಲೈಫ್​ ಬದಲಾಗುತ್ತದೆ. ವಿನ್ನರ್​ (Bigg Boss Winner) ಆದರಂತೂ ಬಂಪರ್​ ಲಾಟರಿ ಹೊಡೆದಂತೆಯೇ ಸರಿ. ಈಗ ಮಲಯಾಳಂ ಬಿಗ್​ ಬಾಸ್​ ಸೀಸನ್​ 3ರಲ್ಲಿ ಗೆದ್ದಿರುವ ನಟ ಮಣಿಕುಟ್ಟನ್​ (Manikuttan) ಅವರಿಗೆ ಭರ್ಜರಿ ಬಹುಮಾನ ಸಿಕ್ಕಿದೆ. ಬಿಗ್​ ಬಾಸ್​ ಫಿನಾಲೆಯಲ್ಲಿ ಅವರನ್ನು ವಿನ್ನರ್​ ಎಂದು ಘೋಷಿಸಲಾಗಿದೆ. ಆಕರ್ಷಕ ಟ್ರೋಫಿ ಜೊತೆಗೆ 75 ಲಕ್ಷ ರೂ. ಬೆಲೆಬಾಳುವ ಫ್ಲಾಟ್​ ನೀಡಲಾಗಿದೆ!

ಈ ವರ್ಷ ಫೆ.14ರಂದು ಮಲಯಾಳಂ ಬಿಗ್​ ಬಾಸ್​ ಆರಂಭ ಆಗಿತ್ತು. ಚೆನ್ನೈನ ಸ್ಡುಡಿಯೋವೊಂದರಲ್ಲಿ ದೊಡ್ಮನೆಯ ಸೆಟ್​ ಹಾಕಿ ಶೋ ನಡೆಸಲಾಗುತ್ತಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ಹಿನ್ನೆಲೆಯಲ್ಲಿ ಆಟವನ್ನು ಅರ್ಧಕ್ಕೆ ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. 95ನೇ ದಿನಕ್ಕೆ ಅಧಿಕಾರಿಗಳು ಸ್ಟುಡಿಯೋ ಮೇಲೆ ದಾಳಿ ನಡೆಸಿ ಬಿಗ್​ ಬಾಸ್​ಗೆ ಬ್ರೇಕ್​ ಹಾಕಿದ್ದರು. ಆದರೆ ಈಗ ವೀಕ್ಷಕರ ವೋಟಿಂಗ್​ ಆಧಾರದ ಮೇಲೆ ವಿನ್ನರ್​ ಯಾರು ಎಂಬುದನ್ನು ತೀರ್ಮಾನಿಸಲಾಗಿದೆ. ವೀಕ್ಷಕರಿಂದ ಅತಿ ಹೆಚ್ಚು ವೋಟ್​ ಪಡೆದ ಮಣಿಕುಟ್ಟನ್​ ಅವರು ವಿನ್ನರ್​ ಆಗಿದ್ದಾರೆ. ಕಳೆದ 16 ವರ್ಷದಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ‘ಬಿಡುವಿನ ಸಮಯದಲ್ಲಿ ಸಾಕಷ್ಟು ಸಿನಿಮಾಗಳನ್ನು ನೋಡಿ ನಾನು ಜ್ಞಾನ ಪಡೆಯುತ್ತಿದ್ದೆ. ಎಲ್ಲ ಟಾಸ್ಕ್​ಗಳನ್ನು ನಿಭಾಯಿಸುವಾಗ ಅದು ನನಗೆ ಸಹಾಯಕ್ಕೆ ಬಂತು. ಈ ಕಾರ್ಯಕ್ರಮಕ್ಕಾಗಿ ನಾನು ನನ್ನ ಸರ್ವಸ್ವವನ್ನೂ ಮೀಸಲಾಗಿಟ್ಟಿದ್ದೆ. ವೋಟ್​ ಮಾಡಿದ ಜನರಿಗೆ ಮತ್ತು ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಮಣಿಕುಟ್ಟನ್​ ಹೇಳಿದ್ದಾರೆ.

ಮಲಯಾಳಂ ಬಿಗ್​ ಬಾಸ್​ ಸೀಸನ್ 3ಕ್ಕೆ ಮಾಲಿವುಡ್​ ಸ್ಟಾರ್​ ನಟ ಮೋಹನ್​​ಲಾಲ್​ ನಿರೂಪಕರಾಗಿದ್ದರು. ಮೋಹನ್​ಲಾಲ್​ ಜೊತೆಗೆ ಹಲವು ಸಿನಿಮಾಗಳಲ್ಲಿ ತೆರೆಹಂಚಿಕೊಳ್ಳುವ ಅವಕಾಶ ಕೂಡ ಈ ಹಿಂದೆ ಮಣಿಕುಟ್ಟನ್​ ಅವರಿಗೆ ಸಿಕ್ಕಿತ್ತು. ಬಿಗ್​ ಬಾಸ್​ ಗೆದ್ದಿರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕನ್ನಡ ಬಿಗ್​ ಬಾಸ್​ ಸೀಸನ್​ 8ಕ್ಕೆ ಫಿನಾಲೆ ಹತ್ತಿರವಾಗಿದೆ. ಆ.8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಸದ್ಯ ಮನೆಯೊಳಗೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ., ದಿವ್ಯಾ ಉರುಡುಗ, ವೈಷ್ಣವಿ ಗೌಡ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ಹಣಾಹಣಿ ನಡೆಯುತ್ತಿದೆ.

ಇದನ್ನೂ ಓದಿ:

ಬಿಗ್​ ಬಾಸ್​ನಲ್ಲಿ ‘ಕಣ್ಣೇ ಅದಿರಿಂದಿ’ ಗಾಯಕಿ ಮಂಗ್ಲಿ? ಹೆಚ್ಚಿತು ವೀಕ್ಷಕರ ನಿರೀಕ್ಷೆ

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!