AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿ ಟ್ರ್ಯಾಪ್: ವೃದ್ಧನ ವಿವಸ್ತ್ರಗೊಳಿಸಿ ಕಿರುಕುಳ, ಟಿವಿ ನಟಿ ಬಂಧನ

ಮಲಯಾಳಂ ಟಿವಿ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ನಟಿಯೊಬ್ಬಾಕೆಯನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಹನಿ ಟ್ರ್ಯಾಪ್: ವೃದ್ಧನ ವಿವಸ್ತ್ರಗೊಳಿಸಿ ಕಿರುಕುಳ, ಟಿವಿ ನಟಿ ಬಂಧನ
ನಿತ್ಯಾ ಸಸಿ
ಮಂಜುನಾಥ ಸಿ.
|

Updated on: Jul 29, 2023 | 7:46 PM

Share

ಹನಿಟ್ರ್ಯಾಪ್​ಗೆ (Honey Trap) ಸಿನಿಮಾ ನಟಿಯರನ್ನೂ ಅದರಲ್ಲೂ ಟಿವಿ ನಟಿಯರು ಬಳಸುತ್ತಿರುವ ಪ್ರಕರಣಗಳು ಇತ್ತೀಚೆಗೆ ತುಸು ಹೆಚ್ಚು ಬೆಳಕಿಗೆ ಬರುತ್ತಿವೆ. ವರ್ಷದ ಹಿಂದೆ ಕರ್ನಾಟಕದಲ್ಲಿ ಬಯಲಾಗಿದ್ದ ಹನಿಟ್ರ್ಯಾಪ್​ ಅಡ್ಡದಲ್ಲಿ ಟಿವಿ ನಟಿಯರು ಇದ್ದ ವಿಷಯ ಪೊಲೀಸರ ತನಿಖೆಯಿಂದ ಬಯಲಾಗಿತ್ತು. ಇದೀಗ ಮಲಯಾಳಂನ ಟಿವಿ ನಟಿಯೊಬ್ಬಾಕೆಯನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ನಟಿ ಹನಿಟ್ರ್ಯಾಪ್ ಮಾಡುವ ಮೂಲಕ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಿದ್ದಳಂತೆ.

ಪರವುರ್​ನಲ್ಲಿ ಹನಿಟ್ರ್ಯಾಪ್​ನಲ್ಲಿ ತೊಡಗಿಕೊಂಡಿದ್ದ ಟಿವಿ ನಟಿ ಹಾಗೂ ಆಕೆಯ ಗೆಳೆತಿಯನ್ನು ಪೊಲೀಸರು ಬಂಧಿಸಿದ್ದಾರೆ. ಟಿವಿ ಧಾರಾವಾಹಿಗಳಲ್ಲಿ ನಟಿಸಿರುವ ನಿತ್ಯಾ ಸಸಿ ಎಂಬಾಕೆ ಆಕೆಯ ಗೆಳೆಯಯೊಟ್ಟಿಗೆ ಸೇರಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದರಂತೆ. ವೃದ್ಧನೋರ್ವನನ್ನು ಹನಿಟ್ರ್ಯಾಪ್ ಬಲಗೆ ಬೀಳಿಸಿ ಸುಮಾರು 11 ಲಕ್ಷ ಮೊತ್ತವನ್ನು ನಿತ್ಯಾ ಸಸಿ ಹಾಗೂ ಆಕೆಯ ಗೆಳೆಯ ಪೀಕಿಸಿದ್ದರು.

ಪೊಲೀಸರು ಹೇಳಿರುವಂತೆ, 75 ವರ್ಷದ ಮಾಜಿ ಸೈನಿಕ ಹಾಗೂ ಕೇರಳ ವಿಶ್ವವಿದ್ಯಾನಿಲಯದ ಮಾಜಿ ನೌಕರನೊಬ್ಬನನ್ನು ನಟಿ ತನ್ನ ಹನಿಟ್ರ್ಯಾಪ್ ಬಲೆಗೆ ಬೀಳಿಸಿದ್ದಳು. ಮಾಜಿ ಸೈನಿಕ, ತನ್ನ ಮನೆಯನ್ನು ಬಾಡಿಗೆಗೆ ನೀಡಲು ಯತ್ನಿಸುತ್ತಿದ್ದಾಗ ಇವರ ಸಂಪರ್ಕಕ್ಕೆ ಬಂದ ನಟಿ ಆತ್ಮೀಯಳಾಗಿ, ಕೊನೆಗೆ ಮನೆಗೆ ಕರೆಸಿಕೊಂಡು ಸೈನಿಕನನ್ನು ವಿವಸ್ತ್ರನನ್ನಾಗಿ ಮಾಡಿ, ಆಕೆಯೂ ಬೆತ್ತಲಾಗಿ ಬಲವಂತವಾಗಿ ಒಟ್ಟಿಗೆ ಫೋಟೊ ತೆಗೆಸಿಕೊಂಡರಂತೆ. ಆ ಫೋಟೊಗಳನ್ನಿಟ್ಟುಕೊಂಡು 25 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಳಂತೆ ನಟಿ ಹಾಗೂ ಆಕೆಯ ಗೆಳೆಯ.

ಇದನ್ನೂ ಓದಿ:ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!

ಮಾಜಿ ಸೈನಿಕ ಸುಮಾರು 11 ಲಕ್ಷ ಮೊತ್ತವನ್ನು ನೀಡಿದ್ದಾನೆ. ಅದಾದ ಬಳಿಕ ಇನ್ನಷ್ಟು ಹಣಕ್ಕೆ ಡಿಮ್ಯಾಂಡ್ ಮಾಡಿದಾಗ ಮಾಜಿ ಸೈನಿಕ ಪರವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಇದೀಗ ನಟಿ ಹಾಗೂ ಆಕೆಯ ಗೆಳತಿಯನ್ನು ವಶಕ್ಕೆ ಪಡೆದಿದ್ದು, ಈ ಇಬ್ಬರು ಈ ಹಿಂದೆಯೂ ಇಂಥಹುದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರಾ ಎಂದು ಪತ್ತೆ ಹಚ್ಚುತ್ತಿದ್ದಾರೆ.

ವರ್ಷದ ಹಿಂದೆ ಕರ್ನಾಟಕದಲ್ಲಿಯೂ ಕೆಲವು ನಟಿಯರು ರಾಜಕಾರಣಿಗಳ ಹಾಗೂ ಐಎಎಸ್ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಲು ಬಳಕೆಯಾಗಿದ್ದರು. ಹನಿಟ್ರ್ಯಾಪ್​ನ ದೊಡ್ಡ ಜಾಲವೊಂದನ್ನು ಬೆಂಗಳೂರು ಪೊಲೀಸರು ಹೊರಗೆಳೆದಿದ್ದರು. ಈ ಜಾಲದಲ್ಲಿ ಹಲವು ನಟಿಯರು ಇದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು