ಅಶ್ವಿನಿ, ಜಾಹ್ನವಿ, ಸುಧಿ, ರಾಶಿಕಾ, ರಕ್ಷಿತಾ, ರಿಷಾ, ಧ್ರುವಂತ್ ನಾಮಿನೇಟ್: ಇದಕ್ಕೆಲ್ಲ ಕಾರಣ ಮಾಳು

ಕ್ಯಾಪ್ಟನ್ ಮಾಳು ನಿಪನಾಳ ಅವರು ಎಲ್ಲರಿಗೂ ಒಂದೊಂದು ಕಾರಣಗಳನ್ನು ನೀಡಿ ನಾಮಿನೇಟ್ ಮಾಡಿದ್ದಾರೆ. ಅಶ್ವಿನಿ ಗೌಡ, ಜಾಹ್ನವಿ, ಸುಧಿ, ರಾಶಿಕಾ, ರಕ್ಷಿತಾ, ರಿಷಾ, ಧ್ರುವಂತ್ ಅವರು ನಾಮಿನೇಟ್ ಆಗಿದ್ದಾರೆ. ಮಾಳು ನೀಡಿದ ಕಾರಣಗಳನ್ನು ಇವರು ಯಾರೂ ಒಪ್ಪಿಕೊಂಡಿಲ್ಲ. ವಾದ-ಪ್ರತಿವಾದ ಜೋರಾಗಿ ನಡೆಯಿತು.

ಅಶ್ವಿನಿ, ಜಾಹ್ನವಿ, ಸುಧಿ, ರಾಶಿಕಾ, ರಕ್ಷಿತಾ, ರಿಷಾ, ಧ್ರುವಂತ್ ನಾಮಿನೇಟ್: ಇದಕ್ಕೆಲ್ಲ ಕಾರಣ ಮಾಳು
Malu Nipanal

Updated on: Nov 11, 2025 | 10:29 PM

ಬಿಗ್ ಬಾಸ್ ಮನೆಯಲ್ಲಿ ಈ ವಾರದ ಕ್ಯಾಪ್ಟನ್ ಆಗಿರುವ ಮಾಳು ನಿಪನಾಳ (Malu Nipanal) ಅವರಿಗೆ ಒಂದು ವಿಶೇಷ ಅಧಿಕಾರ ನೀಡಲಾಯಿತು. ಈ ವಾರ ಯಾರನ್ನು ನಾಮಿನೇಟ್ ಮಾಡಬೇಕು ಎಂಬ ಪೂರ್ತಿ ಅಧಿಕಾರ ಮಾಳು ಅವರಿಗೆ ಇತ್ತು. ಅಶ್ವಿನಿ ಗೌಡ, ಜಾಹ್ನವಿ, ಕಾಕ್ರೋಚ್ ಸುಧಿ, ರಾಶಿಕಾ ಶೆಟ್ಟಿ, ರಕ್ಷಿತಾ ಶೆಟ್ಟಿ, ಧ್ರುವಂತ್ ಅವರನ್ನು ಮಾಳು ನಿಪನಾಳ ಅವರು ನಾಮಿನೇಟ್ ಮಾಡಿದರು. ಬಿಗ್ ಬಾಸ್ ಮನೆಯ ಮೂಲ ನಿಯಮ ಉಲ್ಲಂಘನೆ ಮಾಡಿದ್ದರಿಂದ ರಿಷಾ ಅವರನ್ನು ಕಿಚ್ಚ ಸುದೀಪ್ ಅವರು ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಈ ವಾರ ಒಟ್ಟು 7 ಜನರ ಮೇಲೆ ನಾಮಿನೇಷನ್ (Bigg Boss Nomination) ಕತ್ತಿ ತೂಗುತ್ತಿದೆ.

ಒಬ್ಬೊಬ್ಬರಿಗೆ ಒಂದೊಂದು ಕಾರಣ ನೀಡಿ ಮಾಳು ನಿಪನಾಳ ಅವರು 6 ಜನರನ್ನು ನಾಮಿನೇಟ್ ಮಾಡಬೇಕಿತ್ತು. ಧ್ರುವಂತ್ ಅವರನ್ನು ಸಗಣಿಗೆ ಹೋಲಿಸಿ ಅವರ ಮೇಲೆ ಸಗಣಿ ನೀರು ಸುರಿಯಲಾಯಿತು. ಬಿಗ್ ಬಾಸ್ ಮನೆಯ ಹೆಣ್ಮಕ್ಕಳ ಬಗ್ಗೆ ಧ್ರುವಂತ್ ಮಾತನಾಡಿದ್ದ ಸರಿಯಲ್ಲ ಎಂಬ ಕಾರಣವನ್ನು ನೀಡಿ ಮಾಳು ನಾಮಿನೇಟ್ ಮಾಡಿದರು.

ಕಾಕ್ರೋಜ್ ಸುಧಿ ಅವರನ್ನು ಕೆಸರಿಗೆ ಹೋಲಿಸಿ ಅವರ ಮೇಲೆ ಕೆಸರು ಸುರಿಯಲಾಯಿತು. ‘ಮಾಡಿದ ತಪ್ಪನ್ನು ಒಪ್ಪಿಕೊಳ್ಳಲ್ಲ. 4 ಡೈಲಾಗ್ ಇಟ್ಟುಕೊಂಡು ಜನರ ಮನವೊಲಿಸಲು ಪ್ರಯತ್ನಿಸುತ್ತಾರೆ. ವಿಷಕಾರಿ ಯಾರು ಎಂಬುದನ್ನು ವಿವರಿಸುವಾಗ ಸರಿಯಾಗಿ ನೀವು ಕಾರಣ ನೀಡಿಲ್ಲ. ಬೇರೆಯವರ ಮೇಲೆ ಕೆಸರು ಎರಚುತ್ತಾರೆ’ ಎಂದು ಕಾರಣ ನೀಡಿ ಮಾಳು ನಿಪನಾಳ ಅವರು ಸುಧಿಯನ್ನು ನಾಮಿನೇಟ್ ಮಾಡಿದರು.

ರಕ್ಷಿತಾ ಶೆಟ್ಟಿ ಮೇಲೆ ತಣ್ಣೀರು ಸುರಿಯಲಾಯಿತು. ‘ಯಾವಾಗಲೂ ಮಲಗಿಕೊಂಡು ಇರುತ್ತಾಳೆ. ನಿದ್ದೆ ಹೋಗಲಿ ಎಂಬ ಕಾರಣಕ್ಕೆ ಅವಳಿಗೆ ತಣ್ಣೀರು ಹಾಕುತ್ತೇನೆ’ ಎಂದು ಮಾಳು ನಿಪನಾಳ ಹೇಳಿದರು. ಅಶ್ವಿನಿ ಗೌಡ ಮೇಲೆ ಕಪ್ಪು ನೀರು ಎರೆಚಲಾಯಿತು. ‘ಕಲ್ಮಶ ಎಂಬುದು ಅವರಲ್ಲಿ ಬಹಳ ಇದೆ. ಒಬ್ಬರನ್ನೂ ಸರಿಯಾದ ರೀತಿ ನೋಡಲ್ಲ. ಒಂದಿನ ಚೆನ್ನಾಗಿ ಇದ್ದರೆ ಮರುದಿನ ಅವರ ಜೊತೆ ಚೆನ್ನಾಗಿ ಇರಲ್ಲ’ ಎಂಬ ಕಾರಣ ನೀಡಿ ಅಶ್ವಿನಿ ಗೌಡ ಅವರನ್ನು ಕೂಡ ನಾಮಿನೇಟ್ ಮಾಡಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಸಂಪೂರ್ಣ ಬದಲಾಗಿದೆ ಮಾಳು ನಿಪನಾಳ ಆಟ

ರಾಶಿಕಾ ಶೆಟ್ಟಿ ಅವರನ್ನು ಕಸಕ್ಕೆ ಹೋಲಿಸಲಾಯಿತು. ‘ಯಾರ ಜೊತೆಗೂ ಅವರು ಬೆರೆಯಲ್ಲ. ನನ್ನ ಜೊತೆ ಮಾತನಾಡಿಲ್ಲ. 4 ಜನರ ಜೊತೆ ಕುಳಿತು 2 ಗಂಟೆ ಮಾತನಾಡಿದ್ದನ್ನು ನಾನು ನೋಡಿಲ್ಲ. ಬೇಕಾದವರ ಜೊತೆ ಮಾತ್ರ ಮಾತನಾಡುತ್ತಾರೆ’ ಎಂಬ ಕಾರಣವನ್ನು ನೀಡಿ ರಾಶಿಕಾ ಶೆಟ್ಟಿಯನ್ನು ಮಾಳು ನಿಪನಾಳ ನಾಮಿನೇಟ್ ಮಾಡಿದರು. ಮಾಳು ವಿರುದ್ಧ ರಾಶಿಕಾ ಕೂಗಾಡಿದರು.

ಜಾಹ್ನವಿಗೆ ಚಿಣಿಮಿಣಿ ಎನ್ನಲಾಯಿತು. ‘ತಮ್ಮ ಬಗ್ಗೆಯೇ ಎಲ್ಲರೂ ಗಮನ ನೀಡಬೇಕು ಎಂಬ ಉದ್ದೇಶದಿಂದ ಜಾಹ್ನವಿ ಮಾತನಾಡುತ್ತಾರೆ. ಹೈಲೈಟ್ ಆಗಲಿ ಅಂತ ಅವರು ಈ ರೀತಿ ಮಾಡುತ್ತಾರೆ’ ಎಂದು ಮಾಳು ಕಾರಣ ನೀಡಿದರು. ಆ ಆರು ಮಂದಿಯ ಜೊತೆಗೆ ರಿಷಾ ಕೂಡ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us