AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರ ನಡೆದ ಈ ಸ್ಪರ್ಧಿ; ಕಾರಣ ಏನು?

ಬಿಗ್ ಬಾಸ್​ನಲ್ಲಿ ಟಾಸ್ಕ್ ಆಡುವಾಗ ಮಾನಸಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರನ್ನು ಕೆಲವರು ಟಾಸ್ಕ್ ಒಳಗೆ ತೆಗೆದುಕೊಳ್ಳದೆ ಇರುವುದಕ್ಕೂ ಇದೇ ಕಾರಣ. ಅವರು ಕಾಲನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬೇಕಿದೆ. ಹೀಗಾಗಿ, ಅವರನ್ನು ಆಸ್ಪ್ರೆಗೆ ಸೇರಿಸಲಾಗಿದೆ.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರ ನಡೆದ ಈ ಸ್ಪರ್ಧಿ; ಕಾರಣ ಏನು?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 11, 2024 | 7:05 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎರಡನೇ ವಾರವನ್ನು ಪೂರ್ಣಗೊಳಿಸುತ್ತಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಲ್ಲರಿಗೂ ಗೆಲ್ಲುವ ಹುಮ್ಮಸ್ಸು ಬಂದಿದೆ. ಈ ಕಾರಣಕ್ಕೆ ಟಾಸ್ಕ್​ನಲ್ಲಿ ಜೋಶ್ ಹಾಕಿ ಎಲ್ಲರೂ ಆಟ ಆಡುತ್ತಿದ್ದಾರೆ. ಇದುವೇ ಅವರಿಗೆ ಮುಳುವಾಗಿದೆ. ಹೌದು, ತುಕಾಲಿ ಸಂತೋಷ್ ಪತ್ನಿ ಮಾನಸಾ ಅವರ ಕಾಲಿಗೆ ಪೆಟ್ಟಾಗಿದೆ. ಈ ಕಾರಣಕ್ಕೆ ಅವರನ್ನು ಮನೆಯಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ.

‘ಬಿಗ್ ಬಾಸ್’ನಲ್ಲಿ ಮಾನಸಾ ಬಂದಾಗಿನಿಂದಲೂ ಹೆಚ್ಚಿನ ಕೊಡುಗೆ ಏನೂ ನೀಡಿಲ್ಲ. ಅಲ್ಲಿಲ್ಲಿ ಸುತ್ತಾಡಿಕೊಂಡು ಇದ್ದರು. ಅವರು ಹಾಗೂ ಇತರ ಸ್ಪರ್ಧಿಗಳು ಮಾಡಿದ ತಪ್ಪಿಗೆ ಎಲ್ಲರೂ ನಾಮಿನೇಟ್ ಆಗಬೇಕಾಯಿತು. ಹೀಗಿರುವಾಗಲೇ ಮಾನಸಾ ‘ಬಿಗ್ ಬಾಸ್​’ನಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರಿಗೆ ಓಡಾಡೋಕೆ ಕಷ್ಟ ಎಂಬಂತಾಗಿದೆ.

ಬಿಗ್ ಬಾಸ್​ನಲ್ಲಿ ಟಾಸ್ಕ್ ಆಡುವಾಗ ಮಾನಸಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರನ್ನು ಕೆಲವರು ಟಾಸ್ಕ್ ಒಳಗೆ ತೆಗೆದುಕೊಳ್ಳದೆ ಇರುವುದಕ್ಕೂ ಇದೇ ಕಾರಣ. ಅವರು ಕಾಲನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬೇಕಿದೆ. ಹೀಗಾಗಿ, ಅವರನ್ನು ಆಸ್ಪ್ರೆಗೆ ಸೇರಿಸಲಾಗಿದೆ.

ಮಾನಸಾ ಬೇಗ ಚೇತರಿಕೆ ಕಂಡು ಬರಲಿ ಎಂದು ಅವರ ಫ್ಯಾನ್ಸ್ ಕೋರುತ್ತಿದ್ದಾರೆ. ಈ ವಾರದ ನಾಮಿನೇಷನ್​ನಲ್ಲಿ ಮಾನಸಾ ಅವರ ಹೆಸರೂ ಇದೆ. ಅವರು ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಬೇಕಾದ ಅಗತ್ಯವಿದೆ. ಹೀಗಿರುವಾಗಲೇ ಅವರು ಆಸ್ಪತ್ರೆ ಸೇರಿರೋದು ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ನಾನು ನಿಮ್ಮ ಮನೆಯ ನಾಯಿನಾ?’; ಹಾಸ್ಯ ಕಲಾವಿದರ ಅವಮಾನಿಸಿದ ಜಗದೀಶ್ ವಿರುದ್ಧ ಮಾನಸಾ ಕಿಡಿ

ಮಾನಸಾ ಅವರು ಅಂದುಕೊಂಡಷ್ಟು ಮನರಂಜನೆ ನೀಡುತ್ತಿಲ್ಲ. ಅವರಿಗೆ ಅನೇಕ ಕಡೆಗಳಲ್ಲಿ ಹಿನ್ನಡೆ ಆಗಿದೆ. ಇದೆಲ್ಲವನ್ನೂ ಸಹಿಸಿಕೊಂಡು ಅವರು ಮುನ್ನಡೆಯುತ್ತಿದ್ದಾರೆ. ಅವರು ಈ ವಾರದ ನಾಮಿನೇಷ್​ನಿಂದ ಬಚಾವ್ ಆಗುತ್ತಾರಾ ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ