ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರ ನಡೆದ ಈ ಸ್ಪರ್ಧಿ; ಕಾರಣ ಏನು?

ಬಿಗ್ ಬಾಸ್​ನಲ್ಲಿ ಟಾಸ್ಕ್ ಆಡುವಾಗ ಮಾನಸಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರನ್ನು ಕೆಲವರು ಟಾಸ್ಕ್ ಒಳಗೆ ತೆಗೆದುಕೊಳ್ಳದೆ ಇರುವುದಕ್ಕೂ ಇದೇ ಕಾರಣ. ಅವರು ಕಾಲನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬೇಕಿದೆ. ಹೀಗಾಗಿ, ಅವರನ್ನು ಆಸ್ಪ್ರೆಗೆ ಸೇರಿಸಲಾಗಿದೆ.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರ ನಡೆದ ಈ ಸ್ಪರ್ಧಿ; ಕಾರಣ ಏನು?
ಬಿಗ್ ಬಾಸ್
Follow us
|

Updated on: Oct 11, 2024 | 7:05 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎರಡನೇ ವಾರವನ್ನು ಪೂರ್ಣಗೊಳಿಸುತ್ತಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಲ್ಲರಿಗೂ ಗೆಲ್ಲುವ ಹುಮ್ಮಸ್ಸು ಬಂದಿದೆ. ಈ ಕಾರಣಕ್ಕೆ ಟಾಸ್ಕ್​ನಲ್ಲಿ ಜೋಶ್ ಹಾಕಿ ಎಲ್ಲರೂ ಆಟ ಆಡುತ್ತಿದ್ದಾರೆ. ಇದುವೇ ಅವರಿಗೆ ಮುಳುವಾಗಿದೆ. ಹೌದು, ತುಕಾಲಿ ಸಂತೋಷ್ ಪತ್ನಿ ಮಾನಸಾ ಅವರ ಕಾಲಿಗೆ ಪೆಟ್ಟಾಗಿದೆ. ಈ ಕಾರಣಕ್ಕೆ ಅವರನ್ನು ಮನೆಯಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ.

‘ಬಿಗ್ ಬಾಸ್’ನಲ್ಲಿ ಮಾನಸಾ ಬಂದಾಗಿನಿಂದಲೂ ಹೆಚ್ಚಿನ ಕೊಡುಗೆ ಏನೂ ನೀಡಿಲ್ಲ. ಅಲ್ಲಿಲ್ಲಿ ಸುತ್ತಾಡಿಕೊಂಡು ಇದ್ದರು. ಅವರು ಹಾಗೂ ಇತರ ಸ್ಪರ್ಧಿಗಳು ಮಾಡಿದ ತಪ್ಪಿಗೆ ಎಲ್ಲರೂ ನಾಮಿನೇಟ್ ಆಗಬೇಕಾಯಿತು. ಹೀಗಿರುವಾಗಲೇ ಮಾನಸಾ ‘ಬಿಗ್ ಬಾಸ್​’ನಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರಿಗೆ ಓಡಾಡೋಕೆ ಕಷ್ಟ ಎಂಬಂತಾಗಿದೆ.

ಬಿಗ್ ಬಾಸ್​ನಲ್ಲಿ ಟಾಸ್ಕ್ ಆಡುವಾಗ ಮಾನಸಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರನ್ನು ಕೆಲವರು ಟಾಸ್ಕ್ ಒಳಗೆ ತೆಗೆದುಕೊಳ್ಳದೆ ಇರುವುದಕ್ಕೂ ಇದೇ ಕಾರಣ. ಅವರು ಕಾಲನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬೇಕಿದೆ. ಹೀಗಾಗಿ, ಅವರನ್ನು ಆಸ್ಪ್ರೆಗೆ ಸೇರಿಸಲಾಗಿದೆ.

ಮಾನಸಾ ಬೇಗ ಚೇತರಿಕೆ ಕಂಡು ಬರಲಿ ಎಂದು ಅವರ ಫ್ಯಾನ್ಸ್ ಕೋರುತ್ತಿದ್ದಾರೆ. ಈ ವಾರದ ನಾಮಿನೇಷನ್​ನಲ್ಲಿ ಮಾನಸಾ ಅವರ ಹೆಸರೂ ಇದೆ. ಅವರು ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಬೇಕಾದ ಅಗತ್ಯವಿದೆ. ಹೀಗಿರುವಾಗಲೇ ಅವರು ಆಸ್ಪತ್ರೆ ಸೇರಿರೋದು ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ನಾನು ನಿಮ್ಮ ಮನೆಯ ನಾಯಿನಾ?’; ಹಾಸ್ಯ ಕಲಾವಿದರ ಅವಮಾನಿಸಿದ ಜಗದೀಶ್ ವಿರುದ್ಧ ಮಾನಸಾ ಕಿಡಿ

ಮಾನಸಾ ಅವರು ಅಂದುಕೊಂಡಷ್ಟು ಮನರಂಜನೆ ನೀಡುತ್ತಿಲ್ಲ. ಅವರಿಗೆ ಅನೇಕ ಕಡೆಗಳಲ್ಲಿ ಹಿನ್ನಡೆ ಆಗಿದೆ. ಇದೆಲ್ಲವನ್ನೂ ಸಹಿಸಿಕೊಂಡು ಅವರು ಮುನ್ನಡೆಯುತ್ತಿದ್ದಾರೆ. ಅವರು ಈ ವಾರದ ನಾಮಿನೇಷ್​ನಿಂದ ಬಚಾವ್ ಆಗುತ್ತಾರಾ ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು