AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಇಂದು (ಆಗಸ್ಟ್ 18) ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ ಪವನ್ ಅಂತ್ಯಕ್ರಿಯೆ ನಡೆಯಲಿದೆ. ಅವರ ಕುಟುಂಬದವರು ಹಾಗೂ ಆಪ್ತರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗುತ್ತಿದ್ದಾರೆ. ಪವನ್ ಯಾವ ಧಾರಾವಾಹಿಯಲ್ಲಿ ನಟಿಸುತ್ತಿದ್ದರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ
ಮೃತ ಪವನ್
ಪ್ರಶಾಂತ್​ ಬಿ.
| Edited By: |

Updated on: Aug 18, 2023 | 9:45 AM

Share

ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ಯುವಕರು ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಇತ್ತೀಚೆಗೆ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಕೂಡ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟರು. ಈ ನೋವು ಕಡಿಮೆ ಆಗುವ ಮೊದಲೇ ಕಿರುತೆರೆ ನಟ ಪವನ್ ಅವರು ಮೃತಪಟ್ಟಿದ್ದಾರೆ. ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 25 ವರ್ಷ ವಯಸ್ಸಾಗಿತ್ತು.

ಇಂದು (ಆಗಸ್ಟ್ 18) ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ ಪವನ್ ಅಂತ್ಯಕ್ರಿಯೆ ನಡೆಯಲಿದೆ. ಅವರ ಕುಟುಂಬದವರು ಹಾಗೂ ಆಪ್ತರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗುತ್ತಿದ್ದಾರೆ.

ಆಗಸ್ಟ್ 16ರಂದು ಪವನ್ ಮೃತಪಟ್ಟಿದ್ದಾರೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ಕೆಆರ್ ಪೇಟೆ ಮೂಲದವರಾದ ಪವನ್ ಮಹಾರಾಷ್ಟ್ರದಲ್ಲಿ ನೆಲೆಯೂರಿದ್ದರು. ಹಿಂದಿ, ತಮಿಳು ಕಿರುತೆರೆಯಲ್ಲಿ ಪವನ್ ನಟಿಸುತ್ತಿದ್ದರು. ಬೆಳ್ಳಿ ಪರದೆಮೇಲೆ ಮಿಂಚಬೇಕು ಎಂದು ಕನಸು ಕಂಡಿದ್ದರು. ಹುಟ್ಟೂರು ಎನ್ನುವ ಕಾರಣಕ್ಕೆ ಪವನ್ ಮೃತದೇಹವನ್ನು ಮಂಡ್ಯಕ್ಕೆ ತರಲಾಗಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ: ಸ್ಪಂದನಾ ಉತ್ತರ ಕ್ರಿಯೆಗೆ ಮಗನನ್ನು ಕರೆದುಕೊಂಡು ಬಂದ ವಿಜಯ್​ ರಾಘವೇಂದ್ರ

ಪವನ್ ಯಾವ ಧಾರಾವಾಹಿಯಲ್ಲಿ ನಟಿಸುತ್ತಿದ್ದರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ