AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಇಂದು (ಆಗಸ್ಟ್ 18) ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ ಪವನ್ ಅಂತ್ಯಕ್ರಿಯೆ ನಡೆಯಲಿದೆ. ಅವರ ಕುಟುಂಬದವರು ಹಾಗೂ ಆಪ್ತರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗುತ್ತಿದ್ದಾರೆ. ಪವನ್ ಯಾವ ಧಾರಾವಾಹಿಯಲ್ಲಿ ನಟಿಸುತ್ತಿದ್ದರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ
ಮೃತ ಪವನ್
ಪ್ರಶಾಂತ್​ ಬಿ.
| Edited By: |

Updated on: Aug 18, 2023 | 9:45 AM

Share

ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ಯುವಕರು ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಇತ್ತೀಚೆಗೆ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಕೂಡ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟರು. ಈ ನೋವು ಕಡಿಮೆ ಆಗುವ ಮೊದಲೇ ಕಿರುತೆರೆ ನಟ ಪವನ್ ಅವರು ಮೃತಪಟ್ಟಿದ್ದಾರೆ. ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 25 ವರ್ಷ ವಯಸ್ಸಾಗಿತ್ತು.

ಇಂದು (ಆಗಸ್ಟ್ 18) ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ ಪವನ್ ಅಂತ್ಯಕ್ರಿಯೆ ನಡೆಯಲಿದೆ. ಅವರ ಕುಟುಂಬದವರು ಹಾಗೂ ಆಪ್ತರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗುತ್ತಿದ್ದಾರೆ.

ಆಗಸ್ಟ್ 16ರಂದು ಪವನ್ ಮೃತಪಟ್ಟಿದ್ದಾರೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ಕೆಆರ್ ಪೇಟೆ ಮೂಲದವರಾದ ಪವನ್ ಮಹಾರಾಷ್ಟ್ರದಲ್ಲಿ ನೆಲೆಯೂರಿದ್ದರು. ಹಿಂದಿ, ತಮಿಳು ಕಿರುತೆರೆಯಲ್ಲಿ ಪವನ್ ನಟಿಸುತ್ತಿದ್ದರು. ಬೆಳ್ಳಿ ಪರದೆಮೇಲೆ ಮಿಂಚಬೇಕು ಎಂದು ಕನಸು ಕಂಡಿದ್ದರು. ಹುಟ್ಟೂರು ಎನ್ನುವ ಕಾರಣಕ್ಕೆ ಪವನ್ ಮೃತದೇಹವನ್ನು ಮಂಡ್ಯಕ್ಕೆ ತರಲಾಗಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ: ಸ್ಪಂದನಾ ಉತ್ತರ ಕ್ರಿಯೆಗೆ ಮಗನನ್ನು ಕರೆದುಕೊಂಡು ಬಂದ ವಿಜಯ್​ ರಾಘವೇಂದ್ರ

ಪವನ್ ಯಾವ ಧಾರಾವಾಹಿಯಲ್ಲಿ ನಟಿಸುತ್ತಿದ್ದರು ಎಂಬ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ