AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

ತಮ್ಮಿಷ್ಟದ ಸ್ಪರ್ಧಿಗಳಿಗೆ ವೋಟ್​ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಸ್ಪರ್ಧಿಗಳು ಸೋಶಿಯಲ್​ ಮೀಡಿಯಾದಲ್ಲಿ ವೋಟ್​ಗಾಗಿ ಮನವಿ ಮಾಡಿಕೊಂಡಿದ್ದರು.

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು
ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು
TV9 Web
| Edited By: |

Updated on: Jul 25, 2021 | 11:39 AM

Share

ಬಿಗ್​ ಬಾಸ್​ ಫಿನಾಲೆ (Bigg Boss finale) ಕಾರ್ಯಕ್ರಮ ಎಂದರೆ ಅದ್ದೂರಿಯಾಗಿ ನಡೆಯುತ್ತದೆ. ಹಲವಾರು ಪ್ರೇಕ್ಷಕರ ಸಮ್ಮುಖದಲ್ಲಿ ಚಿತ್ರೀಕರಣ ನಡೆಯುತ್ತದೆ. ಫಿನಾಲೆ ದಿನಾಂಕ ಮುಂಚಿತವಾಗಿಯೇ ಘೋಷಣೆ ಆಗಿರುತ್ತದೆ. ಆದರೆ ಮಲಯಾಳಂ ಬಿಗ್ ಬಾಸ್​ ಮೂರನೇ ಸೀಸನ್​ನಲ್ಲಿ (Bigg Boss Malayalam season 3 ) ಇದೆಲ್ಲ ಉಲ್ಟಾಪಲ್ಟಾ ಆಗಿದೆ. ಏನೂ ಸದ್ದು ಗದ್ದಲ ಇಲ್ಲದೇ ಫಿನಾಲೆ ಕಾರ್ಯಕ್ರಮ ಮಾಡಿ ಮುಗಿಸಲಾಗಿದೆ. ವಿನ್ನರ್​ (Bigg Boss Winner) ಯಾರು ಎಂಬ ವಿಷಯವನ್ನೂ ಗೌಪ್ಯವಾಗಿ ಇರಿಸಲಾಗಿದೆ. ಆದರೆ ವೈರಲ್​ ಆಗಿರುವ ಒಂದು ಫೋಟೋದಿಂದಾಗಿ ಮಣಿಕುಟ್ಟನ್​ ಅವರೇ ವಿನ್ನರ್​ ಎಂಬ ವಿಚಾರ ಬಯಲಾಗಿದೆ.

ಮಾಲಿವುಡ್​ ಸ್ಟಾರ್​ ನಟ ಮೋಹನ್​ಲಾಲ್​ ನಡೆಸಿಕೊಡುವ ಮಲಯಾಳಂ ಬಿಗ್​ ಬಾಸ್​ಗೆ ಈ ಬಾರಿ ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ವಿಘ್ನ ಎದುರಾಗಿತ್ತು. ಚೆನ್ನೈನ ಸ್ಟುಡಿಯೋವೊಂದರಲ್ಲಿ ನಡೆಯುತ್ತಿದ್ದ ಈ ಶೋ ಅನ್ನು ಮೇ 19ರಂದು ರದ್ದು ಪಡಿಸಲಾಗಿತ್ತು. 97 ದಿನ ಪೂರೈಸಿದ್ದ ಮಲಯಾಳಂ ಬಿಗ್​ ಬಾಸ್​ ಮೂರನೇ ಸೀಸನ್​ಗೆ ಅನಿರೀಕ್ಷಿತವಾಗಿ ಬ್ರೇಕ್​ ಬಿದ್ದಿತ್ತು. ಈಗ ವಾತಾವರಣ ತಿಳಿಗೊಂಡಿದೆ. ಆದರೆ ಶೋಗೆ ಮರುಚಾಲನೆ ನೀಡಿಲ್ಲ. ಅದರ ಬದಲು ವೋಟಿಂಗ್​ ಮೂಲಕ ವಿನ್ನರ್​ ಯಾರು ಎಂಬುದನ್ನು ನಿರ್ಧರಿಸಲಾಗಿದೆ.

ತಮ್ಮಿಷ್ಟದ ಸ್ಪರ್ಧಿಗಳಿಗೆ ವೋಟ್​ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಸ್ಪರ್ಧಿಗಳು ಸೋಶಿಯಲ್​ ಮೀಡಿಯಾದಲ್ಲಿ ವೋಟ್​ಗಾಗಿ ಮನವಿ ಮಾಡಿಕೊಂಡಿದ್ದರು. ಯಾರಿಗೆ ಎಷ್ಟು ವೋಟ್​ ಬಂದಿದೆ ಎಂಬ ಆಧಾರದಲ್ಲಿ ವಿನ್ನರ್​ ಯಾರೆಂಬುದನ್ನು ನಿರ್ಧರಿಸಲಾಗಿದೆ. ನಟ ಮಣಿಕುಟ್ಟನ್​ ಈ ಬಾರಿ ಬಿಗ್​ ಬಾಸ್​ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಆಯೋಜಕರು ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಬಿಗ್​ ಬಾಸ್​ ಟ್ರೋಫಿ ಹಿಡಿದು, ಅದಕ್ಕೆ ಮುತ್ತಿಕ್ಕುತ್ತಿರುವ ಮಣಿಕುಟ್ಟನ್​ ಅವರ ಫೋಟೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಸೋರಿಕೆ ಆಗಿದೆ. ಅದನ್ನು ಕಂಡ ಎಲ್ಲರೂ ಮಣಿಕುಟ್ಟನ್​ ಅವರೇ ವಿನ್ನರ್​ ಎಂದು ಅಭಿನಂದನೆ ತಿಳಿಸುತ್ತಿದ್ದಾರೆ. ಶೀಘ್ರದಲ್ಲೇ ಏಷ್ಯಾನೆಟ್​ ವಾಹಿನಿಯಲ್ಲಿ ಫಿನಾಲೆ ಎಪಿಸೋಡ್​ ಪ್ರಸಾರ ಆಗಲಿದೆ. ಆಗ ಯಾರು ವಿನ್ನರ್​ ಎಂಬುದು ಅಧಿಕೃತವಾಗಿ ಗೊತ್ತಾಗಲಿದೆ.

ಕನ್ನಡದಲ್ಲೂ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ದಿನಾಂಕ ಹತ್ತಿರ ಆಗುತ್ತಿದೆ. ದಿನದಿಂದ ದಿನಕ್ಕೆ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚುತ್ತಿದೆ. ಅಂತಿಮವಾಗಿ ಯಾರು ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿಯುತ್ತಾರೆ ಎಂಬ ಕೌತುಕ ಕಿರುತೆರೆ ಪ್ರೇಕ್ಷಕರ ಮನದಲ್ಲಿ ಮೂಡಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?