AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

ತಮ್ಮಿಷ್ಟದ ಸ್ಪರ್ಧಿಗಳಿಗೆ ವೋಟ್​ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಸ್ಪರ್ಧಿಗಳು ಸೋಶಿಯಲ್​ ಮೀಡಿಯಾದಲ್ಲಿ ವೋಟ್​ಗಾಗಿ ಮನವಿ ಮಾಡಿಕೊಂಡಿದ್ದರು.

ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು
ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು
TV9 Web
| Edited By: |

Updated on: Jul 25, 2021 | 11:39 AM

Share

ಬಿಗ್​ ಬಾಸ್​ ಫಿನಾಲೆ (Bigg Boss finale) ಕಾರ್ಯಕ್ರಮ ಎಂದರೆ ಅದ್ದೂರಿಯಾಗಿ ನಡೆಯುತ್ತದೆ. ಹಲವಾರು ಪ್ರೇಕ್ಷಕರ ಸಮ್ಮುಖದಲ್ಲಿ ಚಿತ್ರೀಕರಣ ನಡೆಯುತ್ತದೆ. ಫಿನಾಲೆ ದಿನಾಂಕ ಮುಂಚಿತವಾಗಿಯೇ ಘೋಷಣೆ ಆಗಿರುತ್ತದೆ. ಆದರೆ ಮಲಯಾಳಂ ಬಿಗ್ ಬಾಸ್​ ಮೂರನೇ ಸೀಸನ್​ನಲ್ಲಿ (Bigg Boss Malayalam season 3 ) ಇದೆಲ್ಲ ಉಲ್ಟಾಪಲ್ಟಾ ಆಗಿದೆ. ಏನೂ ಸದ್ದು ಗದ್ದಲ ಇಲ್ಲದೇ ಫಿನಾಲೆ ಕಾರ್ಯಕ್ರಮ ಮಾಡಿ ಮುಗಿಸಲಾಗಿದೆ. ವಿನ್ನರ್​ (Bigg Boss Winner) ಯಾರು ಎಂಬ ವಿಷಯವನ್ನೂ ಗೌಪ್ಯವಾಗಿ ಇರಿಸಲಾಗಿದೆ. ಆದರೆ ವೈರಲ್​ ಆಗಿರುವ ಒಂದು ಫೋಟೋದಿಂದಾಗಿ ಮಣಿಕುಟ್ಟನ್​ ಅವರೇ ವಿನ್ನರ್​ ಎಂಬ ವಿಚಾರ ಬಯಲಾಗಿದೆ.

ಮಾಲಿವುಡ್​ ಸ್ಟಾರ್​ ನಟ ಮೋಹನ್​ಲಾಲ್​ ನಡೆಸಿಕೊಡುವ ಮಲಯಾಳಂ ಬಿಗ್​ ಬಾಸ್​ಗೆ ಈ ಬಾರಿ ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ವಿಘ್ನ ಎದುರಾಗಿತ್ತು. ಚೆನ್ನೈನ ಸ್ಟುಡಿಯೋವೊಂದರಲ್ಲಿ ನಡೆಯುತ್ತಿದ್ದ ಈ ಶೋ ಅನ್ನು ಮೇ 19ರಂದು ರದ್ದು ಪಡಿಸಲಾಗಿತ್ತು. 97 ದಿನ ಪೂರೈಸಿದ್ದ ಮಲಯಾಳಂ ಬಿಗ್​ ಬಾಸ್​ ಮೂರನೇ ಸೀಸನ್​ಗೆ ಅನಿರೀಕ್ಷಿತವಾಗಿ ಬ್ರೇಕ್​ ಬಿದ್ದಿತ್ತು. ಈಗ ವಾತಾವರಣ ತಿಳಿಗೊಂಡಿದೆ. ಆದರೆ ಶೋಗೆ ಮರುಚಾಲನೆ ನೀಡಿಲ್ಲ. ಅದರ ಬದಲು ವೋಟಿಂಗ್​ ಮೂಲಕ ವಿನ್ನರ್​ ಯಾರು ಎಂಬುದನ್ನು ನಿರ್ಧರಿಸಲಾಗಿದೆ.

ತಮ್ಮಿಷ್ಟದ ಸ್ಪರ್ಧಿಗಳಿಗೆ ವೋಟ್​ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಸ್ಪರ್ಧಿಗಳು ಸೋಶಿಯಲ್​ ಮೀಡಿಯಾದಲ್ಲಿ ವೋಟ್​ಗಾಗಿ ಮನವಿ ಮಾಡಿಕೊಂಡಿದ್ದರು. ಯಾರಿಗೆ ಎಷ್ಟು ವೋಟ್​ ಬಂದಿದೆ ಎಂಬ ಆಧಾರದಲ್ಲಿ ವಿನ್ನರ್​ ಯಾರೆಂಬುದನ್ನು ನಿರ್ಧರಿಸಲಾಗಿದೆ. ನಟ ಮಣಿಕುಟ್ಟನ್​ ಈ ಬಾರಿ ಬಿಗ್​ ಬಾಸ್​ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಆಯೋಜಕರು ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಬಿಗ್​ ಬಾಸ್​ ಟ್ರೋಫಿ ಹಿಡಿದು, ಅದಕ್ಕೆ ಮುತ್ತಿಕ್ಕುತ್ತಿರುವ ಮಣಿಕುಟ್ಟನ್​ ಅವರ ಫೋಟೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಸೋರಿಕೆ ಆಗಿದೆ. ಅದನ್ನು ಕಂಡ ಎಲ್ಲರೂ ಮಣಿಕುಟ್ಟನ್​ ಅವರೇ ವಿನ್ನರ್​ ಎಂದು ಅಭಿನಂದನೆ ತಿಳಿಸುತ್ತಿದ್ದಾರೆ. ಶೀಘ್ರದಲ್ಲೇ ಏಷ್ಯಾನೆಟ್​ ವಾಹಿನಿಯಲ್ಲಿ ಫಿನಾಲೆ ಎಪಿಸೋಡ್​ ಪ್ರಸಾರ ಆಗಲಿದೆ. ಆಗ ಯಾರು ವಿನ್ನರ್​ ಎಂಬುದು ಅಧಿಕೃತವಾಗಿ ಗೊತ್ತಾಗಲಿದೆ.

ಕನ್ನಡದಲ್ಲೂ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ದಿನಾಂಕ ಹತ್ತಿರ ಆಗುತ್ತಿದೆ. ದಿನದಿಂದ ದಿನಕ್ಕೆ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚುತ್ತಿದೆ. ಅಂತಿಮವಾಗಿ ಯಾರು ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿಯುತ್ತಾರೆ ಎಂಬ ಕೌತುಕ ಕಿರುತೆರೆ ಪ್ರೇಕ್ಷಕರ ಮನದಲ್ಲಿ ಮೂಡಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ