AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು-ದಿವ್ಯಾ ಜೋಡಿಗೆ ಪ್ರೀತಿಯಿಂದ ಹೊಸ ಹೆಸರಿಟ್ಟ ಅಭಿಮಾನಿಗಳು

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ಪ್ರೀತಿ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಸುದ್ದಿ ಆಗಿತ್ತು. ಈ ಜೋಡಿ ನೋಡಿ ಅನೇಕರು ಖುಷಿ ಪಟ್ಟಿದ್ದರು.

ಮಂಜು-ದಿವ್ಯಾ ಜೋಡಿಗೆ ಪ್ರೀತಿಯಿಂದ ಹೊಸ ಹೆಸರಿಟ್ಟ ಅಭಿಮಾನಿಗಳು
ಮಂಜು-ದಿವ್ಯಾಗೆ ಜೋಡಿಗೆ ಪ್ರೀತಿಯಿಂದ ಹೊಸ ಹೆಸರಿಟ್ಟ ಅಭಿಮಾನಿಗಳು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 11, 2021 | 10:34 PM

Share

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಜೋಡಿ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೈಲೈಟ್​ ಆಗಿತ್ತು. ಮಂಜು-ದಿವ್ಯಾ ತುಂಬಾನೇ ಕ್ಲೋಸ್ ಆಗಿದ್ದರಿಂದ ಇವರ ನಡುವೆ ಪ್ರೀತಿ ಇದೆ ಎಂದೇ ಹೇಳಲಾಗಿತ್ತು. ಆದರೆ, ದಿವ್ಯಾ ತಾವು ಖ್ಯಾತಿ ಗಳಿಸಿಕೊಳ್ಳಲು ಮಂಜು ಅವರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದೇ ಎಲ್ಲರೂ ಹೇಳಿದ್ದರು. ಆದರೆ, ಇದು ಸುಳ್ಳಾಗಿದೆ. ಬಿಗ್​ ಬಾಸ್​ನಿಂದ ಹೊರ ಬಂದ ನಂತರದಲ್ಲಿಯೂ ಈ ಜೋಡಿ ಒಟ್ಟಾಗಿ ಅನೇಕ ಬಾರಿ ಕಾಣಿಸಿಕೊಂಡಿದೆ. ಇದನ್ನು ನೋಡಿ ಅಭಿಮಾನಿಗಳು ಈ ಜೋಡಿಗೆ ಹೊಸ ಹೆಸರು ಇಟ್ಟಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ಪ್ರೀತಿ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಸುದ್ದಿ ಆಗಿತ್ತು. ಈ ಜೋಡಿ ನೋಡಿ ಅನೇಕರು ಖುಷಿ ಪಟ್ಟಿದ್ದರು. ಅಲ್ಲದೆ, ಇವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಪ್ರೀತಿಯಿಂದ ಈ ಜೋಡಿಯನ್ನು ‘ಅರವಿಯಾ’ ಎಂದು ಕರೆಯಲಾಗುತ್ತಿದೆ. ಅರವಿಂದ್​ ಹೆಸರಿನ ಮೊದಲಾರ್ಧ ಹಾಗೂ ದಿವ್ಯಾ ಹೆಸರಿನ ಕೊನೆಯ ಅಕ್ಷರವನ್ನು ಬಳಕೆ ಮಾಡಿಕೊಂಡು ಅರವಿಯಾ ಎಂದು ಕರೆಯಲಾಗುತ್ತಿದೆ.

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಬಿಗ್​ ಬಾಸ್​ಮನೆಯಲ್ಲಿ ಅಷ್ಟು ಕ್ಲೋಸ್​ ಆಗಿದ್ದರೂ ಕೂಡ ಅವರಿಗೆ ಫ್ಯಾನ್ಸ್​ ಹೆಸರು ಕೊಟ್ಟಿರಲಿಲ್ಲ. ಇಬ್ಬರೂ ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಆಪ್ತರಾಗಿದ್ದಾರೆ. ಸಾಕಷ್ಟು ಬಾರಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಕಾರಣಕ್ಕೆ ಪ್ರೀತಿಯಿಂದ ಇವರಿಗೆ ಹೊಸ ಹೆಸರು ನೀಡಲಾಗಿದೆ.

ಮಂಜು ಮತ್ತು ದಿವ್ಯಾಗೆ ಮನ್​ವ್ಯಾ ಎಂದು ಕರೆಯಲಾಗುತ್ತಿದೆ. ಈ ಬಗ್ಗೆ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಸದ್ಯ ಈ ಹೊಸ ಹೆಸರು ವೈರಲ್​ ಆಗುತ್ತಿದೆ. ಕಲರ್ಸ್​ ಕನ್ನಡ ವಾಹಿನಿ ಏರ್ಪಡಿಸಿದ್ದ ‘ಬಿಗ್ ಗಣೇಶೋತ್ಸವ’ ಹಾಗೂ ಬಿಗ್​ ಬಾಸ್​ ಮಿನಿ ಸೀಸನ್​ ಕೊನೆಯ ದಿನ ಮಂಜು ಹಾಗೂ ದಿವ್ಯಾ ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

ದಿವ್ಯಾ ಸುರೇಶ್​ ಮನೆಯಲ್ಲೇ ಮಂಜುಗೆ ಗಣಪನ ಹಬ್ಬ; ‘ಆದಷ್ಟು ಬೇಗ ಮದುವೆ ಆಗಿ’ ಅಂದಿದ್ದು ಯಾರು?

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ