AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು-ದಿವ್ಯಾ ಜೋಡಿಗೆ ಪ್ರೀತಿಯಿಂದ ಹೊಸ ಹೆಸರಿಟ್ಟ ಅಭಿಮಾನಿಗಳು

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ಪ್ರೀತಿ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಸುದ್ದಿ ಆಗಿತ್ತು. ಈ ಜೋಡಿ ನೋಡಿ ಅನೇಕರು ಖುಷಿ ಪಟ್ಟಿದ್ದರು.

ಮಂಜು-ದಿವ್ಯಾ ಜೋಡಿಗೆ ಪ್ರೀತಿಯಿಂದ ಹೊಸ ಹೆಸರಿಟ್ಟ ಅಭಿಮಾನಿಗಳು
ಮಂಜು-ದಿವ್ಯಾಗೆ ಜೋಡಿಗೆ ಪ್ರೀತಿಯಿಂದ ಹೊಸ ಹೆಸರಿಟ್ಟ ಅಭಿಮಾನಿಗಳು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 11, 2021 | 10:34 PM

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಜೋಡಿ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೈಲೈಟ್​ ಆಗಿತ್ತು. ಮಂಜು-ದಿವ್ಯಾ ತುಂಬಾನೇ ಕ್ಲೋಸ್ ಆಗಿದ್ದರಿಂದ ಇವರ ನಡುವೆ ಪ್ರೀತಿ ಇದೆ ಎಂದೇ ಹೇಳಲಾಗಿತ್ತು. ಆದರೆ, ದಿವ್ಯಾ ತಾವು ಖ್ಯಾತಿ ಗಳಿಸಿಕೊಳ್ಳಲು ಮಂಜು ಅವರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದೇ ಎಲ್ಲರೂ ಹೇಳಿದ್ದರು. ಆದರೆ, ಇದು ಸುಳ್ಳಾಗಿದೆ. ಬಿಗ್​ ಬಾಸ್​ನಿಂದ ಹೊರ ಬಂದ ನಂತರದಲ್ಲಿಯೂ ಈ ಜೋಡಿ ಒಟ್ಟಾಗಿ ಅನೇಕ ಬಾರಿ ಕಾಣಿಸಿಕೊಂಡಿದೆ. ಇದನ್ನು ನೋಡಿ ಅಭಿಮಾನಿಗಳು ಈ ಜೋಡಿಗೆ ಹೊಸ ಹೆಸರು ಇಟ್ಟಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ಪ್ರೀತಿ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಸುದ್ದಿ ಆಗಿತ್ತು. ಈ ಜೋಡಿ ನೋಡಿ ಅನೇಕರು ಖುಷಿ ಪಟ್ಟಿದ್ದರು. ಅಲ್ಲದೆ, ಇವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಪ್ರೀತಿಯಿಂದ ಈ ಜೋಡಿಯನ್ನು ‘ಅರವಿಯಾ’ ಎಂದು ಕರೆಯಲಾಗುತ್ತಿದೆ. ಅರವಿಂದ್​ ಹೆಸರಿನ ಮೊದಲಾರ್ಧ ಹಾಗೂ ದಿವ್ಯಾ ಹೆಸರಿನ ಕೊನೆಯ ಅಕ್ಷರವನ್ನು ಬಳಕೆ ಮಾಡಿಕೊಂಡು ಅರವಿಯಾ ಎಂದು ಕರೆಯಲಾಗುತ್ತಿದೆ.

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಬಿಗ್​ ಬಾಸ್​ಮನೆಯಲ್ಲಿ ಅಷ್ಟು ಕ್ಲೋಸ್​ ಆಗಿದ್ದರೂ ಕೂಡ ಅವರಿಗೆ ಫ್ಯಾನ್ಸ್​ ಹೆಸರು ಕೊಟ್ಟಿರಲಿಲ್ಲ. ಇಬ್ಬರೂ ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಆಪ್ತರಾಗಿದ್ದಾರೆ. ಸಾಕಷ್ಟು ಬಾರಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಕಾರಣಕ್ಕೆ ಪ್ರೀತಿಯಿಂದ ಇವರಿಗೆ ಹೊಸ ಹೆಸರು ನೀಡಲಾಗಿದೆ.

ಮಂಜು ಮತ್ತು ದಿವ್ಯಾಗೆ ಮನ್​ವ್ಯಾ ಎಂದು ಕರೆಯಲಾಗುತ್ತಿದೆ. ಈ ಬಗ್ಗೆ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಸದ್ಯ ಈ ಹೊಸ ಹೆಸರು ವೈರಲ್​ ಆಗುತ್ತಿದೆ. ಕಲರ್ಸ್​ ಕನ್ನಡ ವಾಹಿನಿ ಏರ್ಪಡಿಸಿದ್ದ ‘ಬಿಗ್ ಗಣೇಶೋತ್ಸವ’ ಹಾಗೂ ಬಿಗ್​ ಬಾಸ್​ ಮಿನಿ ಸೀಸನ್​ ಕೊನೆಯ ದಿನ ಮಂಜು ಹಾಗೂ ದಿವ್ಯಾ ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

ದಿವ್ಯಾ ಸುರೇಶ್​ ಮನೆಯಲ್ಲೇ ಮಂಜುಗೆ ಗಣಪನ ಹಬ್ಬ; ‘ಆದಷ್ಟು ಬೇಗ ಮದುವೆ ಆಗಿ’ ಅಂದಿದ್ದು ಯಾರು?

ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ