AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?
ಮಂಜು ಪಾವಗಡ
TV9 Web
| Edited By: |

Updated on: Nov 22, 2021 | 2:31 PM

Share

ಮಂಜು ಪಾವಗಡ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಗೆದ್ದ ಬಳಿಕ ಖ್ಯಾತಿ ದುಪಟ್ಟಾಗಿದೆ. ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಮಜಾ ಭಾರತ’ ಕಾರ್ಯಕ್ರಮದಲ್ಲಿ ಸಖತ್​ ಎಂಟರ್​ಟೇನ್​ಮೆಂಟ್​ ನೀಡಿದ್ದರು ಅವರು. ನಂತರ ಬಿಗ್ ಬಾಸ್​ನಲ್ಲಿಯೂ ಮನರಂಜನೆ ನೀಡುವುದನ್ನು ಮುಂದುವರಿಸಿದ್ದರು. ಆ ಶೋನ ವಿನ್ನರ್​ ಕೂಡ ಆದರು. ಬಿಗ್​ ಬಾಸ್​ನಿಂದ ಅವರಿಗೆ ದೊಡ್ಡ ಮಟ್ಟದ ಹೆಸರು ಬಂದಿದೆ. ಈಗ ಮಂಜು ಅವರು ವಿಚಿತ್ರ ಹೆಸರಲ್ಲಿ ಅವಾರ್ಡ್ ಒಂದನ್ನು ನೀಡೋಕೆ ಮುಂದಾಗಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್​ ನಿಜಕ್ಕೂ ಅಚ್ಚರಿ ಹೊರ ಹಾಕಿದ್ದಾರೆ. ಏನಿದು ಸಮಾಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಶೋಗೆ ಮಂಜು ಕೂಡ ಆಗಮಿಸಿದ್ದರು. ಈ ವೇಳೆ ಅವರು ತಾವು ವಿಶೇಷ ಅವಾರ್ಡ್​ ಕೊಡುವುದಾಗಿ ಘೋಷಿಸಿದರು.

‘ನಾನು ಬಿಗ್​ ಬಾಸ್​ಗೆ ಹೋಗಿ ಟ್ರೋಫಿ ತೆಗೆದುಕೊಂಡು ಬಂದೆ. ಆದರೆ, ಸಾಕಷ್ಟು ಜನರಿಗೆ ಇನ್ನೂ ಅವಾರ್ಡ್​ ಸಿಕ್ಕಿಲ್ಲ. ಅವರೆಲ್ಲರೂ ಎಲೆಮರೆಯ ಕಾಯಿ ರೀತಿ ಇದ್ದಾರೆ. ‘ನೆನಪಿಗ್​ ಇರ್ಲಿ’ ಅಂತ ಈ ಪ್ರಶಸ್ತಿಯ ಹೆಸರು’ ಎಂದರು ಮಂಜು. ಅಷ್ಟೇ ಅಲ್ಲ ‘ನೊಂದ ಗಂಡ’, ‘ಪ್ರಾಮಿಸಿಂಗ್​ ಪ್ರಿಯತಮ’ ಮತ್ತಿತ್ಯಾದಿ ವಿಭಾಗದಲ್ಲಿ ಈ ಪ್ರಶಸ್ತಿ ನೀಡುವುದಾಗಿ ಅವರು ಘೋಷಿಸಿದರು.

‘ರಾಜಾ-ರಾಣಿ’ ಗೆದ್ದ ನೇಹಾ ಗೌಡ-ಚಂದನ್

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಈಗ ಈ ದಂಪತಿ ರಾಜಾ ರಾಣಿ ಕಿರೀಟ ಗೆದ್ದಿದ್ದಾರೆ.

ಇದನ್ನೂ ಓದಿ: ‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ