AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?
ಮಂಜು ಪಾವಗಡ
TV9 Web
| Edited By: |

Updated on: Nov 22, 2021 | 2:31 PM

Share

ಮಂಜು ಪಾವಗಡ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಗೆದ್ದ ಬಳಿಕ ಖ್ಯಾತಿ ದುಪಟ್ಟಾಗಿದೆ. ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಮಜಾ ಭಾರತ’ ಕಾರ್ಯಕ್ರಮದಲ್ಲಿ ಸಖತ್​ ಎಂಟರ್​ಟೇನ್​ಮೆಂಟ್​ ನೀಡಿದ್ದರು ಅವರು. ನಂತರ ಬಿಗ್ ಬಾಸ್​ನಲ್ಲಿಯೂ ಮನರಂಜನೆ ನೀಡುವುದನ್ನು ಮುಂದುವರಿಸಿದ್ದರು. ಆ ಶೋನ ವಿನ್ನರ್​ ಕೂಡ ಆದರು. ಬಿಗ್​ ಬಾಸ್​ನಿಂದ ಅವರಿಗೆ ದೊಡ್ಡ ಮಟ್ಟದ ಹೆಸರು ಬಂದಿದೆ. ಈಗ ಮಂಜು ಅವರು ವಿಚಿತ್ರ ಹೆಸರಲ್ಲಿ ಅವಾರ್ಡ್ ಒಂದನ್ನು ನೀಡೋಕೆ ಮುಂದಾಗಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್​ ನಿಜಕ್ಕೂ ಅಚ್ಚರಿ ಹೊರ ಹಾಕಿದ್ದಾರೆ. ಏನಿದು ಸಮಾಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಶೋಗೆ ಮಂಜು ಕೂಡ ಆಗಮಿಸಿದ್ದರು. ಈ ವೇಳೆ ಅವರು ತಾವು ವಿಶೇಷ ಅವಾರ್ಡ್​ ಕೊಡುವುದಾಗಿ ಘೋಷಿಸಿದರು.

‘ನಾನು ಬಿಗ್​ ಬಾಸ್​ಗೆ ಹೋಗಿ ಟ್ರೋಫಿ ತೆಗೆದುಕೊಂಡು ಬಂದೆ. ಆದರೆ, ಸಾಕಷ್ಟು ಜನರಿಗೆ ಇನ್ನೂ ಅವಾರ್ಡ್​ ಸಿಕ್ಕಿಲ್ಲ. ಅವರೆಲ್ಲರೂ ಎಲೆಮರೆಯ ಕಾಯಿ ರೀತಿ ಇದ್ದಾರೆ. ‘ನೆನಪಿಗ್​ ಇರ್ಲಿ’ ಅಂತ ಈ ಪ್ರಶಸ್ತಿಯ ಹೆಸರು’ ಎಂದರು ಮಂಜು. ಅಷ್ಟೇ ಅಲ್ಲ ‘ನೊಂದ ಗಂಡ’, ‘ಪ್ರಾಮಿಸಿಂಗ್​ ಪ್ರಿಯತಮ’ ಮತ್ತಿತ್ಯಾದಿ ವಿಭಾಗದಲ್ಲಿ ಈ ಪ್ರಶಸ್ತಿ ನೀಡುವುದಾಗಿ ಅವರು ಘೋಷಿಸಿದರು.

‘ರಾಜಾ-ರಾಣಿ’ ಗೆದ್ದ ನೇಹಾ ಗೌಡ-ಚಂದನ್

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಈಗ ಈ ದಂಪತಿ ರಾಜಾ ರಾಣಿ ಕಿರೀಟ ಗೆದ್ದಿದ್ದಾರೆ.

ಇದನ್ನೂ ಓದಿ: ‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು