AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?
ಮಂಜು ಪಾವಗಡ
TV9 Web
| Edited By: |

Updated on: Nov 22, 2021 | 2:31 PM

Share

ಮಂಜು ಪಾವಗಡ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಗೆದ್ದ ಬಳಿಕ ಖ್ಯಾತಿ ದುಪಟ್ಟಾಗಿದೆ. ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಮಜಾ ಭಾರತ’ ಕಾರ್ಯಕ್ರಮದಲ್ಲಿ ಸಖತ್​ ಎಂಟರ್​ಟೇನ್​ಮೆಂಟ್​ ನೀಡಿದ್ದರು ಅವರು. ನಂತರ ಬಿಗ್ ಬಾಸ್​ನಲ್ಲಿಯೂ ಮನರಂಜನೆ ನೀಡುವುದನ್ನು ಮುಂದುವರಿಸಿದ್ದರು. ಆ ಶೋನ ವಿನ್ನರ್​ ಕೂಡ ಆದರು. ಬಿಗ್​ ಬಾಸ್​ನಿಂದ ಅವರಿಗೆ ದೊಡ್ಡ ಮಟ್ಟದ ಹೆಸರು ಬಂದಿದೆ. ಈಗ ಮಂಜು ಅವರು ವಿಚಿತ್ರ ಹೆಸರಲ್ಲಿ ಅವಾರ್ಡ್ ಒಂದನ್ನು ನೀಡೋಕೆ ಮುಂದಾಗಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್​ ನಿಜಕ್ಕೂ ಅಚ್ಚರಿ ಹೊರ ಹಾಕಿದ್ದಾರೆ. ಏನಿದು ಸಮಾಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಶೋಗೆ ಮಂಜು ಕೂಡ ಆಗಮಿಸಿದ್ದರು. ಈ ವೇಳೆ ಅವರು ತಾವು ವಿಶೇಷ ಅವಾರ್ಡ್​ ಕೊಡುವುದಾಗಿ ಘೋಷಿಸಿದರು.

‘ನಾನು ಬಿಗ್​ ಬಾಸ್​ಗೆ ಹೋಗಿ ಟ್ರೋಫಿ ತೆಗೆದುಕೊಂಡು ಬಂದೆ. ಆದರೆ, ಸಾಕಷ್ಟು ಜನರಿಗೆ ಇನ್ನೂ ಅವಾರ್ಡ್​ ಸಿಕ್ಕಿಲ್ಲ. ಅವರೆಲ್ಲರೂ ಎಲೆಮರೆಯ ಕಾಯಿ ರೀತಿ ಇದ್ದಾರೆ. ‘ನೆನಪಿಗ್​ ಇರ್ಲಿ’ ಅಂತ ಈ ಪ್ರಶಸ್ತಿಯ ಹೆಸರು’ ಎಂದರು ಮಂಜು. ಅಷ್ಟೇ ಅಲ್ಲ ‘ನೊಂದ ಗಂಡ’, ‘ಪ್ರಾಮಿಸಿಂಗ್​ ಪ್ರಿಯತಮ’ ಮತ್ತಿತ್ಯಾದಿ ವಿಭಾಗದಲ್ಲಿ ಈ ಪ್ರಶಸ್ತಿ ನೀಡುವುದಾಗಿ ಅವರು ಘೋಷಿಸಿದರು.

‘ರಾಜಾ-ರಾಣಿ’ ಗೆದ್ದ ನೇಹಾ ಗೌಡ-ಚಂದನ್

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಈಗ ಈ ದಂಪತಿ ರಾಜಾ ರಾಣಿ ಕಿರೀಟ ಗೆದ್ದಿದ್ದಾರೆ.

ಇದನ್ನೂ ಓದಿ: ‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು