AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ.

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?
ಮಂಜು ಪಾವಗಡ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 22, 2021 | 2:31 PM

Share

ಮಂಜು ಪಾವಗಡ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಗೆದ್ದ ಬಳಿಕ ಖ್ಯಾತಿ ದುಪಟ್ಟಾಗಿದೆ. ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಮಜಾ ಭಾರತ’ ಕಾರ್ಯಕ್ರಮದಲ್ಲಿ ಸಖತ್​ ಎಂಟರ್​ಟೇನ್​ಮೆಂಟ್​ ನೀಡಿದ್ದರು ಅವರು. ನಂತರ ಬಿಗ್ ಬಾಸ್​ನಲ್ಲಿಯೂ ಮನರಂಜನೆ ನೀಡುವುದನ್ನು ಮುಂದುವರಿಸಿದ್ದರು. ಆ ಶೋನ ವಿನ್ನರ್​ ಕೂಡ ಆದರು. ಬಿಗ್​ ಬಾಸ್​ನಿಂದ ಅವರಿಗೆ ದೊಡ್ಡ ಮಟ್ಟದ ಹೆಸರು ಬಂದಿದೆ. ಈಗ ಮಂಜು ಅವರು ವಿಚಿತ್ರ ಹೆಸರಲ್ಲಿ ಅವಾರ್ಡ್ ಒಂದನ್ನು ನೀಡೋಕೆ ಮುಂದಾಗಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್​ ನಿಜಕ್ಕೂ ಅಚ್ಚರಿ ಹೊರ ಹಾಕಿದ್ದಾರೆ. ಏನಿದು ಸಮಾಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಶೋಗೆ ಮಂಜು ಕೂಡ ಆಗಮಿಸಿದ್ದರು. ಈ ವೇಳೆ ಅವರು ತಾವು ವಿಶೇಷ ಅವಾರ್ಡ್​ ಕೊಡುವುದಾಗಿ ಘೋಷಿಸಿದರು.

‘ನಾನು ಬಿಗ್​ ಬಾಸ್​ಗೆ ಹೋಗಿ ಟ್ರೋಫಿ ತೆಗೆದುಕೊಂಡು ಬಂದೆ. ಆದರೆ, ಸಾಕಷ್ಟು ಜನರಿಗೆ ಇನ್ನೂ ಅವಾರ್ಡ್​ ಸಿಕ್ಕಿಲ್ಲ. ಅವರೆಲ್ಲರೂ ಎಲೆಮರೆಯ ಕಾಯಿ ರೀತಿ ಇದ್ದಾರೆ. ‘ನೆನಪಿಗ್​ ಇರ್ಲಿ’ ಅಂತ ಈ ಪ್ರಶಸ್ತಿಯ ಹೆಸರು’ ಎಂದರು ಮಂಜು. ಅಷ್ಟೇ ಅಲ್ಲ ‘ನೊಂದ ಗಂಡ’, ‘ಪ್ರಾಮಿಸಿಂಗ್​ ಪ್ರಿಯತಮ’ ಮತ್ತಿತ್ಯಾದಿ ವಿಭಾಗದಲ್ಲಿ ಈ ಪ್ರಶಸ್ತಿ ನೀಡುವುದಾಗಿ ಅವರು ಘೋಷಿಸಿದರು.

‘ರಾಜಾ-ರಾಣಿ’ ಗೆದ್ದ ನೇಹಾ ಗೌಡ-ಚಂದನ್

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಸಾವಿರಾರು ಕಂತುಗಳನ್ನು ಈ ಧಾರಾವಾಹಿ ಕಂಡಿದೆ. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ಈಗ ಈ ದಂಪತಿ ರಾಜಾ ರಾಣಿ ಕಿರೀಟ ಗೆದ್ದಿದ್ದಾರೆ.

ಇದನ್ನೂ ಓದಿ: ‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು