AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manju Pavagada: ಬಿಗ್​ ಬಾಸ್​​ ವಿನ್ನರ್​ ಮಂಜುಗೆ ಸಿಕ್ಕ 53 ಲಕ್ಷದಲ್ಲಿ ಎಷ್ಟು ದೊಡ್ಡ ಮೊತ್ತದ ಟ್ಯಾಕ್ಸ್​ ಕಟ್​ ಆಗುತ್ತೆ ಗೊತ್ತಾ?

Bigg Boss Winner: ಕನ್ನಡ ಬಿಗ್​ ಬಾಸ್​ ಸೀಸನ್​ 8 ಸುದೀರ್ಘ ಪ್ರಯಾಣ ಕೊನೆಗೊಂಡಿದೆ. ಮಂಜು ಪಾವಗಡ ಅವರು ಸೀಸನ್​ 8 ವಿನ್ನರ್​ ಆಗಿ ಹೊರ ಹೊಮ್ಮಿದ್ದಾರೆ. ಈ ಬಗ್ಗೆ ಸುದೀಪ್​ ಅವರು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದ್ದಾರೆ.

Manju Pavagada: ಬಿಗ್​ ಬಾಸ್​​ ವಿನ್ನರ್​ ಮಂಜುಗೆ ಸಿಕ್ಕ 53 ಲಕ್ಷದಲ್ಲಿ ಎಷ್ಟು ದೊಡ್ಡ ಮೊತ್ತದ ಟ್ಯಾಕ್ಸ್​ ಕಟ್​ ಆಗುತ್ತೆ ಗೊತ್ತಾ?
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: Aug 09, 2021 | 11:39 AM

Share

ಬಿಗ್ ಬಾಸ್​ ಫಿನಾಲೆ ಪೂರ್ಣಗೊಂಡಿದೆ. ಮಂಜು ಪಾವಗಡ ವಿಜೇತರಾಗಿ ಹೊರಹೊಮ್ಮಿದ್ದಾರೆ. ಬಿಗ್​ ಬಾಸ್​ ವಿನ್ನರ್​ಗೆ ಪ್ರತಿ ವರ್ಷ 50 ಲಕ್ಷ ರೂಪಾಯಿ ಸಿಗುತ್ತಿತ್ತು. ಇದನ್ನು ಈ ಬಾರಿ 53 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಈ ಬಾರಿ ವಿನ್​ ಆದ ಮಂಜು ಪಾವಗಡ ಅವರಿಗೂ ಕಪ್​ ಹಾಗೂ ಪ್ರಶಸ್ತಿ ಹಣ ಸಿಕ್ಕಿದೆ. ಆದರೆ ಇದಕ್ಕೆ ದೊಡ್ಡ ಮೊತ್ತದ ಟ್ಯಾಕ್ಸ್​ ಕಟ್​ ಆಗುತ್ತದೆ ಎನ್ನುವ ವಿಚಾರ ಅನೇಕರಿಗೆ ಗೊತ್ತಿಲ್ಲ.

ಕನ್ನಡ ಬಿಗ್ ಬಾಸ್​ ಸೀಸನ್​ 8 ಫೆಬ್ರವರಿ ತಿಂಗಳಲ್ಲಿ ಆರಂಭಗೊಂಡಿತ್ತು. ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿದ್ದರಿಂದ ಮಧ್ಯದಲ್ಲಿ ಕೆಲ ಕಾಲ ನಿಲ್ಲಿಸಲಾಗಿತ್ತು. ನಂತರ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ ಆರಂಭಿಸಲಾಗಿತ್ತು. ಬಿಗ್​ ಬಾಸ್​ ಮನೆ ಸೇರಿದ ಒಟ್ಟು 20 ಸ್ಪರ್ಧಿಗಳ ಪೈಕಿ ಮಂಜು ಪಾವಗಡ ವಿಜೇತರಾಗಿದ್ದಾರೆ.

ಬಿಗ್​ ಬಾಸ್​ ವಿಜೇತರಾದ ಮಂಜು ಪಾವಗಡ ಅವರಿಗೆ ಪೂರ್ತಿ 53 ಲಕ್ಷ ರೂಪಾಯಿ ಸಿಗುವುದಿಲ್ಲ. ಇದಕ್ಕೆ ಶೇ. 31.20 ತೆರಿಗೆ ಬೀಳಲಿದೆ. ಅಂದರೆ, 16,53,600 ರೂಪಾಯಿ ಹಣ ತೆರಿಗೆ ರೂಪದಲ್ಲಿ ಕಟ್​ ಆಗಲಿದೆ. ಹೀಗಾಗಿ, ವಿಜೇತರ ಕೈಗೆ 36,46,400 ರೂಪಾಯಿ ಸಿಕ್ಕಿದೆ. ಇಲ್ಲಿ ಯಾರು ಪ್ರೈಜ್​ ಅಮೌಂಟ್​ ನೀಡುತ್ತಾರೋ ಅವರೇ ತೆರಿಗೆಯನ್ನು ಕಡಿತಗೊಳಿಸಿ ನೀಡುತ್ತಾರೆ.  ಪ್ರಶಸ್ತಿ ರೂಪದಲ್ಲಿ ಸಿಗುವ 10 ಸಾವಿರಕ್ಕಿಂತ ಅಧಿಕ ಮೊತ್ತಕ್ಕೆ ಇದೇ ನಿಯಮ ಅನ್ವಯವಾಗಲಿದೆ.

ಒಂದೊಮ್ಮೆ ವಿಜೇತರು ವಸ್ತು ರೂಪದಲ್ಲಿ ಪ್ರಶಸ್ತಿ ಪಡೆದುಕೊಂಡರೆ, ಉದಾಹರಣೆ ಕಾರು, ಬಂಗಲೆ, ಮನೆ ಇತ್ಯಾದಿ. ಆಗ, ವಿಜೇತ ಪಶಸ್ತಿ ಮೌಲ್ಯವನ್ನು ಲೆಕ್ಕಾಚಾರ ಹಾಕಿ ಶೇ.30.9 ತೆರಿಗೆಯನ್ನು ತನ್ನದೇ ಹಣದಿಂದ ಪಾವತಿಸಬೇಕು. ಉದಾಹರಣೆಗೆ ಬಿಗ್​ ಬಾಸ್​ ವಿಜೇತರಿಗೆ 50 ಲಕ್ಷ ಮೌಲ್ಯದ ಮನೆ ಸಿಕ್ಕರೆ 15.3 ಲಕ್ಷ ರೂಪಾಯಿ ಹಣವನ್ನು  ತೆರಿಗೆ ರೂಪದಲ್ಲಿ ಸ್ಪರ್ಧಿಗಳೇ ಪಾವತಿಸಬೇಕು.

ಕನ್ನಡ ಬಿಗ್​ ಬಾಸ್​ ಸೀಸನ್​ 8 ಸುದೀರ್ಘ ಪ್ರಯಾಣ ಕೊನೆಗೊಂಡಿದೆ. ಮಂಜು ಪಾವಗಡ ಅವರು ಸೀಸನ್​ 8 ವಿನ್ನರ್​ ಆಗಿ ಹೊರ ಹೊಮ್ಮಿದ್ದಾರೆ. ಈ ಬಗ್ಗೆ ಸುದೀಪ್​ ಅವರು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದ್ದಾರೆ.  ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.

ಇದನ್ನೂ ಓದಿ:

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!