AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ ಮನೆಯಲ್ಲೇ ಮಂಜುಗೆ ಗಣಪನ ಹಬ್ಬ; ‘ಆದಷ್ಟು ಬೇಗ ಮದುವೆ ಆಗಿ’ ಅಂದಿದ್ದು ಯಾರು?

ದಿವ್ಯಾ ಸುರೇಶ್​ ಮನೆಯಲ್ಲೇ ಮಂಜು ಪಾವಗಡ ಅವರು ಈ ಬಾರಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಗಣೇಶನನ್ನು ಕೂರಿಸಿ, ಬಗೆಬಗೆಯ ತಿನಿಸುಗಳನ್ನು ಮಾಡಿ ನೈವೇದ್ಯ ಅರ್ಪಿಸಲಾಗಿದೆ.

ದಿವ್ಯಾ ಸುರೇಶ್​ ಮನೆಯಲ್ಲೇ ಮಂಜುಗೆ ಗಣಪನ ಹಬ್ಬ; ‘ಆದಷ್ಟು ಬೇಗ ಮದುವೆ ಆಗಿ’ ಅಂದಿದ್ದು ಯಾರು?
ಮಂಜು ಪಾವಗಡ, ದಿವ್ಯಾ ಸುರೇಶ್
TV9 Web
| Edited By: |

Updated on: Sep 11, 2021 | 8:12 AM

Share

ನಟಿ ದಿವ್ಯಾ ಸುರೇಶ್​ ಮತ್ತು ಬಿಗ್​ ಬಾಸ್​ ಸೀಸನ್​ 8ರ ವಿನ್ನರ್​ ಮಂಜು ಪಾವಗಡ ನಡುವೆ ತುಂಬ ಆತ್ಮೀಯತೆ ಇದೆ. ಅದು ಬಿಗ್​ ಬಾಸ್​ ಆಟಕ್ಕೆ ಮಾತ್ರ ಸೀಮಿತ ಎಂದು ಕೆಲವರು ಅಂದುಕೊಂಡಿದ್ದರು. ಆದರೆ ಆ ಮಾತು ನಿಜವಾಗಿಲ್ಲ. ಬಿಗ್​ ಬಾಸ್​ ಮುಗಿದ ಮೇಲೆ ಕೂಡ ಈ ಜೋಡಿ ಆತ್ಮೀಯವಾಗಿಯೇ ನಡೆದುಕೊಳ್ಳುತ್ತಿದೆ. ದಿವ್ಯಾ ಸುರೇಶ್​ ಅವರ ಕುಟುಂಬದ ಜೊತೆ ಮಂಜು ಪಾವಗಡ ಹೆಚ್ಚು ಬೆರೆಯುತ್ತಿದ್ದಾರೆ. ಎಲ್ಲ ವಿಶೇಷ ಸಂದರ್ಭಗಳಲ್ಲೂ ಅವರಿಬ್ಬರು ಒಟ್ಟಿಗೆ ಭಾಗಿ ಆಗುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ಈ ಬಾರಿಯ ಗಣಪತಿ ಹಬ್ಬ.

ಹೌದು, ದಿವ್ಯಾ ಸುರೇಶ್​ ಮನೆಯಲ್ಲೇ ಮಂಜು ಪಾವಗಡ ಅವರು ಈ ಬಾರಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಗಣೇಶನನ್ನು ಕೂರಿಸಿ, ಬಗೆಬಗೆಯ ತಿನಿಸುಗಳನ್ನು ಮಾಡಿ ನೈವೇದ್ಯ ಅರ್ಪಿಸಲಾಗಿದೆ. ಪೂಜೆ ಬಳಿಕ ಇಬ್ಬರೂ ಖುಷಿಖುಷಿಯಾಗಿ ಫೋಟೋಗೆ ಪೋಸ್​ ನೀಡಿದ್ದಾರೆ.

ದಿವ್ಯಾ ಸುರೇಶ್​ ಅವರ ತಾಯಿ ಹಾಗೂ ಸಹೋದರ ಕೂಡ ಹಬ್ಬದ ಸಂಭ್ರಮದಲ್ಲಿ ಮಂಜುಗೆ ಸಾಥ್​ ನೀಡಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಸ್ನೇಹಿತರಾದ ಶುಭಾ ಪೂಂಜಾ, ರಘು ಗೌಡ ಸಹ ಅವರವರ ಕುಟುಂಬದ ಸಮೇತ ದಿವ್ಯಾ ಸುರೇಶ್​ರ ಮನೆಗೆ ಬಂದು ಹಬ್ಬದಲ್ಲಿ ಭಾಗಿ ಆಗಿದ್ದಾರೆ. ಮಂಜು ಮತ್ತು ದಿವ್ಯಾ ಸುರೇಶ್​ ಈ ರೀತಿ ಒಟ್ಟೊಟ್ಟಿಗೆ ಇರುವುದು ಕಂಡು ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕಮೆಂಟ್​ಗಳ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದಷ್ಟು ಬೇಗ ನೀವಿಬ್ಬರು ಮದುವೆ ಆಗಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಅಭಿಮಾನಿ ಬಳಗದಿಂದ ಪದೇಪದೇ ಇಂಥ ಮಾತು ಕೇಳಿಬರುತ್ತಲೇ ಇದೆ.

ಇತ್ತೀಚೆಗೆ ಮಂಜು ಮತ್ತು ದಿವ್ಯಾ ಸುರೇಶ್​ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿರುವ ಒಂದು ಫೋಟೋ ವೈರಲ್ ಆಗಿತ್ತು. ಕಲರ್ಸ್​ ಕನ್ನಡ ವಾಹಿನಿ ಆಯೋಜಿಸಿದ್ದ ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ವೇಳೆ ಕ್ಲಿಕ್ಕಿಸಿದ ಫೋಟೋ ಅದಾಗಿತ್ತು. ಮಂಜು, ತಾಯಿ ಮತ್ತು ಸಹೋದರನ ಜೊತೆ ತಾವಿರುವ ಫೋಟೋ ಹಂಚಿಕೊಂಡಿದ್ದ ದಿವ್ಯಾ ಅವರು, ‘ಈ ಮೂವರು ನನ್ನ ಬದುಕಿನ ನಿಜವಾದ ಶಿಕ್ಷಕರು. ಹಲವು ರೀತಿಯಲ್ಲಿ ನೀವು ನನಗೆ ಸ್ಫೂರ್ತಿಯಾಗಿದ್ದೀರಿ. ನೀವು ನನ್ನ ಹೃದಯಕ್ಕೆ ತುಂಬ ಹತ್ತಿರವಾದವರು’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ:

ಮದುವೆ ಬಗ್ಗೆ ಇರುವ ಕನಸಿನ ಬಗ್ಗೆ ಹೇಳಿಕೊಂಡ ಮಂಜು ಪಾವಗಡ 

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್